ಕೋವಿಡ್ 19: ಸದ್ಯಕ್ಕೆ ಶಾಲೆ ಆರಂಭ ಬೇಡ!
Team Udayavani, Jun 10, 2020, 6:52 AM IST
ರಾಮನಗರ: ಕೋವಿಡ್-19 ಸೋಂಕು ನಿವಾರಣೆಯಾಗುವವರೆಗೆ ಅಥವಾ ಲಸಿಕೆ ಕಂಡು ಹಿಡಿಯುವವರೆಗೆ ಶಾಲೆ ಆರಂಭಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಲು ಜಿಲ್ಲೆಯ ಎಸ್ಡಿಎಂಸಿ ಸಮನ್ವಯ ವೇದಿಕೆ ಪದಾಧಿಕಾರಿ ಗಳು ನಿರ್ಣಯ ಕೈಗೊಂಡಿದ್ದಾರೆ. ನಗರದ ಛತ್ರದ ಬೀದಿಯ ಮೈಯಿನ್ ಸರ್ಕಾರಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿರುವುದಾಗಿ ವೇದಿಕೆ ಅಧ್ಯಕ್ಷ ಬಿ.ಗೋಪಾಲ್ ತಿಳಿಸಿದರು.
ಸೋಂಕಿತರ ಸಂಖ್ಯೆ ದಿನೆ ದಿನೇ ಏರುತ್ತಲೇ ಇದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆ ತೆರೆಯಬಾರದು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಲಾಕ್ಡೌನ್ ಕಾರಣ ಶಿಕ್ಷಕರು ತಮ್ಮ ಜಿಲ್ಲೆಗಳಿಗೆ ತೆರಳಿದ್ದಾರೆ. ಅನ್ಯ ಜಿಲ್ಲೆಗಳಿಂದ ಬಂದವರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿಲ್ಲ. ಹೀಗಾಗಿ ಅಪಾಯ ತಂದು ಕೊಳ್ಳುವುದು ಬೇಡ ಎಂದರು. ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಯಶೋಧಾ ಮಾತನಾಡಿ, ಎಷ್ಟೋ ಗ್ರಾಮಗಳಲ್ಲಿ ಬಸ್ ವ್ಯವಸ್ಥೆ ಇನ್ನು ಆರಂಭವಾಗಿಲ್ಲ.
ಅನೇಕ ಶಾಲೆಗಳು ಕ್ವಾರಂಟೈನ್ ವಾರ್ಡುಗಳ ನ್ನಾಗಿ ಪರಿವರ್ತಿಸಲಾಗಿದೆ. ಶಿಕ್ಷಕರಲ್ಲಿಯೂ ಸೋಂಕಿನ ಭಯವಿದೆ ಎಂದು ವೇದಿಕೆಯ ನಿರ್ಣಯದ ಹಿಂದೆ ನಡೆದ ಚರ್ಚೆಗಳ ಬಗ್ಗೆ ಮಾಹಿತಿ ನೀಡಿದರು. ಸರ್ಕಾರಿ ಶಾಲೆ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಕುರಿತು ತಿಳಿಸಿದ ಅವರು ಗ್ರಾಮಗಳಲ್ಲಿ ವಿದ್ಯುತ್ ಮತ್ತು ಇಂಟರ್ನೆಟ್ ಸಮಸ್ಯೆ ಅಗಾಧವಾಗಿದೆ.
ಮೇಲಾಗಿ ಆನ್ ಲೈನ್ ಶಿಕ್ಷಣ ನೀಡುವುದು ಹೇಗೆ? ಏನು? ಎಂಬುದರ ಬಗ್ಗೆ ಶಿಕ್ಷಕರಿಗೆ ತರಬೇತಿ ಅಗತ್ಯವಿ ದೆ. ಹೀಗಾಗಿ ಈ ಪದಟಛಿತಿ ಬೇಡ ಎಂದು ವೇದಿಕೆ ನಿರ್ಣಯಿಸಿದೆ ಎಂದರು. ಮಕ್ಕಳು ಪೌಷ್ಟಿಕತೆಯಿಂದ ವಂಚಿತರಾಗಬಾರದು. ಹೀಗಾಗಿ ಮಧ್ಯಾಹ್ನದ ಊಟದ ದಿನಸಿ ಪದಾ ರ್ಥಗಳನ್ನು ಆಯಾ ಗ್ರಾಮದ ಡಿಪೋಗಳ ಮೂಲಕ ತಲುಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ ಎಂದರು.
ವೇದಿಕೆಯ ತಾಲೂಕು ಘಟಕದ ಧ್ಯಕ್ಷ ಉಮೇಶ್, ಮಾಗಡಿ ಘಟಕದ ಅಧ್ಯಕ್ಷ ಶಶಿಧರ್, ಮಾಜಿ ಅಧ್ಯಕ್ಷ ಅಶೋಕ್, ಕನಕಪುರ ಅಧ್ಯಕ್ಷ ಸುರೇಶ್, ಚನ್ನಪಟ್ಟಣ ಘಟ ಕದ ಅಧ್ಯಕ್ಷ ಮುತ್ತುರಾಜ್, ವೇದಿಕೆಯ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಸೈಯ್ಯದ್, ದೇವರಾಜ್, ರಾಜು, ಗೋವಿಂದರಾಜು, ಜಯಕುಮಾರ್, ಬಾಬುರಾವ್, ರಾಮಕೃಷ್ಣಪ್ಪ, ಬಿ.ಎಂ. ಗೋವಿಂದರಾಜು, ರಮೇಶ್ ಹಾಜರಿದ್ದರು.
ಸಭೆ ಕರೆಯಲು ಜಿಲ್ಲಾಧಿಕಾರಿಗಳಿಗೆ ಆಗ್ರಹ: ಶಾಲೆಗಳ ಪುನರಾರಂಭ, ಆನ್ಲೈನ್ ತರಗತಿ ನಡೆಸುವುದು..ಹೀಗೆ ವಿವಿಧ ವಿಷಯಗಳ ಬಗ್ಗೆ ಚರ್ಚೆಗಳ ನಡೆಯಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಡಿಡಿಪಿಐ ಅವರು ತಕ್ಷಣ ಎಸ್ ಡಿಎಂಸಿ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಬಂಧಿಸಿದವರ ಸಭೆಯನ್ನು ಆಯೋಜಿಸುವಂತೆ ಸಭೆಯಲ್ಲಿ ಹಾಜರಿದ್ದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಯಶೋಧಾ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್