ಕೋವಿಡ್ 19 ವಾರ್ಡ್ ಪರಿಶೀಲಿಸಿದ ಡೀಸಿ ಅರ್ಚನಾ
Team Udayavani, Apr 19, 2020, 4:45 PM IST
ಚನ್ನಪಟ್ಟಣ: ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಕೋವಿಡ್ 19 ವೈರಸ್ ಸೋಂಕಿತರಿಗಾಗಿಯೇ ನಿರ್ಮಾಣವಾಗಿರುವ ವಾರ್ಡ್ ಗಳನ್ನು ಪರಿಶೀಲಿಸಿದರು. ಆಸ್ಪತ್ರೆಯ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಯವರ ಜೊತೆ ಚರ್ಚೆ ನಡೆಸಿದರು.
ಆಸ್ಪತ್ರೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳುವುದರ ಜೊತೆಗೆ ಅತ್ಯಾಧುನಿಕ ಚಿಕಿತ್ಸಾ ಕೊಠಡಿ ವೀಕ್ಷಣೆ ಮಾಡಿ, ಆಸ್ಪತ್ರೆಯ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಇಲ್ಲದಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅನಿವಾರ್ಯವಾಗಿ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದರೆ ಆಸ್ಪತ್ರೆಯಲ್ಲಿ ಯಾವ ರೀತಿ ಎಚ್ಚರವಾಗಿರಬೇಕು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಬರುವಾಗ ಒಂದು ದಾರಿ ಹೋಗುವಾಗವುದು ದಾರಿ ವ್ಯವಸ್ಥೆ ಮಾಡುವುದರ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಆರೋಗ್ಯ ಇಲಾಖೆ ಕೋವಿಡ್ 19 ವೈರಸ್ ನಿಯಂತ್ರಣಗಳಲ್ಲಿ ಸಂಪೂರ್ಣ ಅಲರ್ಟ್ ಆಗಿರುವುದು ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮನಗಾಣಲು ಸಾಧ್ಯವಿಲ್ಲ. ಯಾವುದಕ್ಕೂ ಮುಂಜಾಗ್ರತೆ ಅವಶ್ಯಕ ಎಂದರು.
ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ವಿಜಯ ನರಸಿಂಹ, ತಾಲೂಕು ಆರೋಗ್ಯಾಧಿಕಾರಿ ಡಾ. ರಾಜು, ಆಸ್ಪತ್ರೆ ಆಡಳಿತಾಧಿಕಾರಿ ಮಂಜೇಶ್ಕುಮಾರ್, ಶುಶ್ರೂಷಕಿಯರ ಅಧೀಕ್ಷಕಿ ಸರಸ್ವತಿ, ಆಸ್ಪತ್ರೆ ಹಿರಿಯ ಫಾರ್ಮಸಿಸ್ಟ್ ವೇದಮೂರ್ತಿ ಹಾಗೂ ಹಲವಾರು ಮಂದಿ ವೈದ್ಯರು ಸಿಬ್ಬಂದಿ ವರ್ಗ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ