ಕೋವಿಡ್ ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್
Team Udayavani, Aug 11, 2020, 8:20 AM IST
ರಾಮನಗರ: ಸರ್ಕಾರ ಹಾಗೂ ಆರೋಗ್ಯ ಇಲಾಖೆ ತಿಳಿಸಿರುವ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವ ಮೂಲಕ ಸೋಂಕಿ ನಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಗಾಣಕಲ್ ನಟರಾಜ್ ಮನವಿ ಮಾಡಿಕೊಂಡರು.
ತಾಲೂಕಿನ ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಹಾಗೂ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ಗಳ ಸಂಯುಕ್ತಾಶ್ರಯದಲ್ಲಿ ಕೊರೊನಾ ಕುರಿತಾದ ಜಾಗೃತಿ ಮೂಡಿಸುವ ಬೀದಿ ನಾಟಕ, ಆಯುಷ್ ಇಲಾಖೆ ಔಷಧೀಯ ಗಿಡಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗುವ ಔಷಧೀಯ ಗಿಡಮೂಲಿಕೆ ಬಳಸಿ ಆರೋಗ್ಯವರ್ಧನೆ ಮಾಡಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್.ಮರೀಗೌಡ, ಕೋವಿಡ್ ಸೋಂಕಿತರನ್ನು ಗೌರವದಿಂದ ಕಾಣಬೇಕು ಎಂದರು. ಕ್ಷೇತ್ರ ಸಮನ್ವಯ ಅಧಿಕಾರಿ ಸಂಪತ್ ಕುಮಾರ್ ಮಾತನಾಡಿ, ಮುಂಜಾಗ್ರತಾ ಕ್ರಮ ತಪ್ಪದೇ ಪಾಲಿಸುವ ಮೂಲಕ ಕೊರೊನಾ ವ್ಯಾಪಿ ಸ ದಂತೆ ತಡೆಯಬಹುದು ಎಂದರು. ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ ವಿಭಾಗದ ಡಾ. ಸದಾಶಿವಾನಂದಗೌಡ ಪಾಟೀಲ್ , ಡಾ.ರಂಗಪ್ಪ, ಔಷಧೀಯ ಗಿಡಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.
ಹಿರಿಯ ಜಾನಪದ ಗಾಯಕ ಚೌ.ಪು.ಸ್ವಾಮಿ, ಯುವ ಕವಿಗಳಾದ ಲಕ್ಷ್ಮೀ ಕಿಶೋರ್ ಅರಸ್ ಕೂಡೂÉರು, ದರ್ಶನ್ಗೌಡ ಮತ್ತೀಕೆರೆ, ಬನ್ನಿಕುಪ್ಪೆ (ಬಿ), ಗ್ರಾಪಂ ಮಾಜಿ ಅಧ್ಯಕ್ಷ ಎಚ್. ಗೋಪಾಲ್ರಾಜು, ಗ್ರಾಪಂ ಮಾಜಿ ಸದಸ್ಯ ಕೃಷ್ಣಪ್ಪ, ಸೊಸೈಟಿ ಶಿವರುದ್ರಯ್ಯ, ಮುಖಂಡರಾದ ಬೈರೇಗೌಡ, ಚಿಕ್ಕವೀರಯ್ಯ, ಮುಖ್ಯ ಶಿಕ್ಷಕಿ ರಾಜೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ