ಕಳಪೆ ಕಾಮಗಾರಿಗೆ ಕೋಟ್ಯಂತರ ರೂ.ನಷ್ಟ


Team Udayavani, Jul 18, 2020, 8:39 AM IST

ಕಳಪೆ ಕಾಮಗಾರಿಗೆ ಕೋಟ್ಯಂತರ ರೂ.ನಷ್ಟ

ಮಾಗಡಿ: ತಾಲೂಕಿನಲ್ಲಿ ನಿರ್ಮಿಸಿರುವ ಬಹುತೇಕ ಚೆಕ್‌ ಡ್ಯಾಂಗಳು ಚರಂಡಿಯಂತಿವೆ ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಣ್ಣ ನೀರಾವರಿ ಇಲಾಖೆಯವರು ನಿರ್ಮಿಸಿರುವ ಬಹುತೇಕ ಚೆಕ್‌ ಡ್ಯಾಂಗಳು ಚರಂಡಿಗಳಂತಿವೆ. ಅಧಿಕಾರಿಗಳು ಸ್ಥಳ ಪರಿಶೀಲಿಸದೇ, ಕಚೇರಿಯಲ್ಲಿ ಕುಳಿತು ಯೋಜನೆ ಸಿದ್ಧಪಡಿಸಿ, ಚರಂಡಿಗಳ ರೀತಿ ಯಲ್ಲಿ ಚೆಕ್‌ ಡ್ಯಾಂ ನಿರ್ಮಿಸಿದರೆ ಉಪ ಯೋಗವಾಗು ದಿಲ್ಲ. ಜೊತೆಗೆ ಕಳಪೆ ಕಾಮ ಗಾರಿಯಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಈ ಸಂಬಂಧ ಸಮಿತಿ ಒಳಗೊಂಡಂತೆ ಚೆಕ್‌ ಡ್ಯಾಂಗಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಕೆಆರ್‌ಡಿಎಲ್‌ ನವರು ಇದೇ ರೀತಿ ಕಳಪೆ ಕಾಮಗಾರಿ ನಡೆ ಸಿದ್ದು, ಕನಿಷ್ಠ ಪಕ್ಷ ಬೋರ್ಡ್‌ ಹಾಕಿರುವುದಿಲ್ಲ ಎಂದು ಆರೋಪಿಸಿದರು.

ಸಮನ್ವಯತೆ ಕಾಪಾಡಿ: ತಾಲೂಕಿನ ಬಹು ತೇಕ ಗ್ರಾಪಂ ಆಡಳಿತ ಮಂಡಳಿ ಅವಧಿ ಮುಗಿದಿದ್ದು, ಆಡಳಿತಾಧಿಕಾರಿಗಳ ನೇಮಕ ಮಾಡಲಾಗಿದೆ. ಪಂಚಾಯಿತಿ ಪಿಡಿಒಗಳು ಆಡಳಿತಾಧಿಕಾರಿಗಳೊಂದಿಗೆ ಸಮನ್ವಯ ಕಾಪಾ ಡಿಕೊಂಡು, ಸರ್ವ ತೋಮುಖ ಅಭಿವೃದ್ಧಿಗೆ ಸಹಕರಿಸಬೇಕು. ಪ್ರತಿ ಪಂಚಾಯಿತಿ ಫ‌ಲಕದಲ್ಲಿ ಆಡಳಿತಾಧಿಕಾರಿಗಳ ಹೆಸರು, ಮೊಬೈಲ್‌ ನಂಬರ್‌ ಪ್ರಕಟಿಸಬೇಕು. ಅವರಿಗಾಗಿ ಪ್ರತ್ಯೇಕ ಕಚೇರಿ ಸಿದ್ಧಪಡಿಸಿರಬೇಕು. ಹೊಸ ನೇಮಕಾತಿ ಮಾಡುವಂತಿಲ್ಲ. ಅಭಿವೃದ್ಧಿ ವಿಚಾರ ಹಣಕಾಸಿನ ವ್ಯವಹಾರ ಜಂಟಿಯಾಗಿಯೇ ನಡೆಸಬೇಕು. ಪಿಡಿಒಗಳು ಕ್ರಿಯಾ ಯೋಜನೆ ಸಿದ್ಧ ಪಡಿಸಿ, ಅಡಳಿತಾಧಿಕಾರಿ ಗಳ ಅನುಮೋದನೆ ಪಡೆದು ಕೆಲಸ ಮಾಡಬೇಕು. ರೆಕಾರ್ಡ್‌ಗಳನ್ನು ಸಮರ್ಪಕ ವಾಗಿ ನಿರ್ವಹಿಸ ಬೇಕು. ಗ್ರಾಪಂ ಸ್ವತ್ತು ರಕ್ಷಿಸ ಬೇಕು ಎಂದು ತಾಪಂ ಸಿಇಒ ಟಿ.ಪ್ರದೀಪ್‌, ಪಿಡಿಒಗಳಿಗೆ ಆದೇಶಿಸಿದರು.

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಿ: ನಗರ ಪ್ರದೇಶದಿಂದ ಗ್ರಾಮಗಳಿಗೂ ಕೋವಿಡ್ ಒಕ್ಕರಿಸಿದ್ದು, ತಾಲೂಕಿನ ಎಲ್ಲ ಗ್ರಾಪಂ ಪಿಡಿಒ ಗಳು ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಬೇಕು. ಗ್ರಾಮದ ಸಮಸ್ಯೆಗಳಿಗೆ ಪಿಡಿಒಗಳು ಸ್ಪಂದಿಸ ಬೇಕು. ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮುಂಗಾರು ಮಳೆಯಾಗುತ್ತಿದ್ದು, ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳಾದ ಚಿಕನ್‌ಗೂನ್ಯ, ಡೆಂಗ್ಯೂ, ಎಚ್‌1ಎನ್‌1 ಹರಡುವ ಸಾಧ್ಯತೆ ಇರುವುದರಿಂದ ಗ್ರಾಮದಲ್ಲಿ ಚರಂಡಿಗಳಿಗೆ ಸಿಂಪಡಣೆ ಮಾಡ ಬೇಕು ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ಅಂಬಿಕಾ, ಸದಸ್ಯ ಎಂ. ಎಚ್‌. ಸುರೇಶ್‌, ಕೆ.ಎಚ್‌.ಶಿವರಾಜು, ಧನಂಜಯ ನಾಯಕ್‌, ನರಸಿಂಹ ಮೂರ್ತಿ, ಹನುಮೇಗೌಡ, ಶಿವಮ್ಮ, ಸುಮಾ ರಮೇಶ್‌, ದಿವ್ಯಾರಾಣಿ, ಅಧಿಕಾರಿಗಳಾದ ನಾಗರಾಜು, ಶಿವ ಶಂಕರ್‌, ಚಿದಾನಂದ್‌, ರಂಗನಾಥ್‌, ಜನಾರ್ಧನ್‌, ಕುಮಾರಸ್ವಾಮಿ ಹಾಗೂ ಬಹುತೇಕ ಎಲ್ಲ ಪಂಚಾಯಿತಿ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.