ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ


Team Udayavani, Jul 13, 2019, 12:50 PM IST

rn-tdy-2..

ದೇವರಹಳ್ಳಿ ಗ್ರಾಮದ ಶಿರಡಿ ಸಾಯಿಬಾಬಾ ವೃದ್ಧಾಶ್ರಮದಲ್ಲಿ ಹಿರಿಯರಿಗೆ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಯಿತು.

ಚನ್ನಪಟ್ಟಣ: ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು, ಹಿರಿಯರ ಸೇವೆ ಮಾಡಿದಾಗ ಜನ್ಮ ಸಾರ್ಥಕವಾಗುತ್ತದೆ ಎಂದು ಕಾರ್ಮಿಕರ ಸಂಘದ ಅಧ್ಯಕ್ಷ ಪೇಟೇಚೇರಿ ಕರ್ಣತಮ್ಮ ಹೇಳಿದರು.

ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ವೃದ್ಧಾಶ್ರಮ ದಲ್ಲಿ ಆಯೋಜಿಸಲಾಗಿದ್ದ ತಮ್ಮ ಪುತ್ರನ ಹುಟ್ಟುಹಬ್ಬ ಆಚರಣೆ ಹಾಗೂ ವೃದ್ಧಾಶ್ರಮಕ್ಕೆ ಅಗತ್ಯವಿರುವ ದಿನಸಿ ಪದಾರ್ಥಗಳನ್ನು ಕೊಡುಗೆ ನೀಡಿ ಮಾತನಾಡಿದರು. ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳು ಹಲವಾರು ಸಿಹಿ-ಕಹಿಯನ್ನು ಅನುಭವಿಸಿರುವವರಾಗಿದ್ದು, ತಮ್ಮ ಬಲವೆಲ್ಲಾ ಕುಗ್ಗಿ, ನಿಶಕ್ತರಾದ ಸಂದರ್ಭದಲ್ಲಿ ಅವರನ್ನು ಮೂಲೆಗುಂಪು ಮಾಡಿ, ವೃದ್ಧಾಶ್ರಮಗಳಲ್ಲಿ ಆಶ್ರಯ ಪಡೆಯುವ ಅನಿವಾರ್ಯತೆ ತಂದುಕೊಂಡಿದ್ದಾರೆ. ತಿಳಿದವರಿಂದಲೇ ಈ ರೀತಿಯ ಅಮಾನವೀಯ ವರ್ತನೆ ನಡೆಯುತ್ತಿರುವುದು ವಿಷಾದನೀಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮುಪ್ಪಿನ ಸಂದರ್ಭದಲ್ಲಿ ಮಕ್ಕಳು, ಮೊಮ್ಮಕ್ಕಳು ಆಸರೆಯಾಗಬೇಕು, ಬೀದಿ ಪಾಲಾದ ವೃದ್ಧರಿಗೆ ಸೂರು ಕಲ್ಪಿಸಿಕೊಟ್ಟಿರುವ ಹಾಗೂ ಹಿರಿಯರನ್ನು ಹೆತ್ತ ತಂದೆ ತಾಯಿಯಂತೆ ಜೋಪಾನ ಮಾಡುತ್ತಿರುವ ವೃದ್ಧಾಶ್ರಮದ ಮುಖ್ಯಸ್ಥರಿಗೆ ಅಭಿನಂದನೆ ಸಲ್ಲಿಸಲೇಬೇಕಿದೆ ಎಂದರು. ವೃದ್ಧಾಶ್ರಮಕ್ಕೆ ಸರ್ಕಾರದ ಯಾವುದೇ ರೀತಿಯ ನೆರವು ಇಲ್ಲದೆ ದಾನಿಗಳ ಸಹಾಯ, ಸಹಕಾರದಿಂದ ಆಶ್ರಮದ ವೃದ್ಧರಿಗೆ ನೀಡುವ ಗುಣಮಟ್ಟದ ಆಹಾರದಿಂದ ಉತ್ತಮ ಆರೋಗ್ಯದವರೆಗೂ ಕಾಳಜಿ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಮಾತೃಶ್ರೀ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ನಾಗೇಶ್‌ ಮಾತನಾಡಿ, ವೃದ್ಧಾಶ್ರಮ ಹಿರಿಯರಧಾಮವಾಗಿ ನಿರ್ಮಾಣವಾಗುತ್ತಿದೆ. ತನ್ನವರ ಜೊತೆಗೂಡಿ ಸಂತಸದಿಂದ ಬದುಕು ಕೊನೆಗೊಳಿಸುವ ಸಂದಿಗ್ಧ ಕಾಲದಲ್ಲಿ, ತನ್ನವರಿಂದಲೇ ದೂರಾಗಿ ಹಿರಿಯರ ಧಾಮದಲ್ಲಿ ನೆಲ ಕಂಡಿರುವ ಜೀವಗಳಿಗೆ ಪ್ರತಿಯೊಬ್ಬರು ಸಾಧ್ಯವಾದಷ್ಟು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾಜ ಸೇವಕಿ ಮಮತಾ, ಸಂಘದ ನಿರ್ದೇಶಕ ಶ್ರೀನಿವಾಸ್‌ ಆರ್‌., ಶಿರಡಿ ಸಾಯಿಬಾಬಾ ವೃದ್ಧಾಶ್ರಮದ ಮುಖ್ಯಸ್ಥ ಹರೀಶ್‌ ಹೆಗ್ಗಡೆ, ಬಾರ್‌ ಬೈಂಡಿಂಗ್‌ ರಾಜು, ವೃದ್ಧಾಶ್ರಮದ ಮನು ಹಾಗೂ ಹಲವಾರು ಮಂದಿ ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.