ಕಮೀಷನ್‌ ದಂಧೆ ಮಟ್ಟ ಹಾಕಲು ಕ್ರಮ


Team Udayavani, Apr 14, 2019, 12:58 PM IST

dkshi

ಚನ್ನಪಟ್ಟಣ: ಈ ಹಿಂದೆ ಇದ್ದ ಕಮೀಷನ್‌ ದಂಧೆ ಮಟ್ಟಹಾಕಲು ಕ್ರಮ ಕೈಗೊಂಡಿದ್ದೇವೆ. ಕಳ್ಳಬಿಲ್‌ ತಡೆದಿದ್ದೇವೆ, ಎಲ್ಲಾ ಇಲಾಖೆಗಳಲ್ಲಿಯೂ ಇದ್ದ ಅವ್ಯವಸ್ಥೆಗಳನ್ನು ಸರಿಪಡಿಸಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ಮೈತ್ರಿ ಅಭ್ಯರ್ಥಿ ಡಿ.ಕೆ. ಸುರೇಶ್‌ ಪರ ಪ್ರಚಾರ ನಡೆಸಿದ ಅವರು ಮಾತನಾಡಿ, ತಾಲೂಕಿನಲ್ಲಿ ಈ ಹಿಂದೆ ಇದ್ದ ಕಮೀಷನ್‌ ಸಂಸ್ಕೃತಿಯನ್ನು ಮಟ್ಟ ಹಾಕಿದ್ದೇವೆ. ನಾವು ಯಾವುದೇಗುತ್ತಿಗೆ ನೀಡಲು ಕಮೀಷನ್‌ ಪಡೆದಿಲ್ಲ,ಕಾಮಗಾರಿಗಳು ಸಮರ್ಪಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶವನ್ನು ಮಾಡಿದ್ದೇವೆ. ಹಾಗೇನಾದರೂ ಕಮೀಷನ್‌ ಪಡೆದಿರುವ ಉದಾಹರಣೆಯಿದ್ದರೆ ಹೇಳಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ಸೇವೆ ಮಾಡಲು ಅವಕಾಶ ನೀಡಿ: ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಕ್ರಿಯಾಶೀಲ ಸಂಸದರನ್ನು ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಈ ಬಾರಿಯೂ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ ಅವರು, ಅಚ್ಛೇದಿನ್‌ ಮಾಡುತ್ತೇವೆ ಎಂದು ಬಂದ ಕೇಂದ್ರದ ಬಿಜೆಪಿ ಸರ್ಕಾರ ಯಾರಿಗೆ ಚ್ಛೇದಿನ್‌ ತಂದಿದೆ. ಬಡವರು ಮನೆ ನಿರ್ಮಾಣ ಮಾಡಲು ಮುಂದಾದರೆ ಸಿಮೆಂಟ್‌, ಕಬ್ಬಿಣದ ಬೆಲೆ ಗಗನಕ್ಕೇರಿದೆ. ಸಿಲಿಂಡರ್‌, ಪೆಟ್ರೋಲ್‌, ಕೇಬಲ್‌ ದರ ಏರಿಸಿದ್ದಾರೆ. ಉದ್ಯಮಿಗಳು ಜಿಎಸ್‌ಟಿಯಿಂದ ನೆಮ್ಮದಿ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಬಿಜೆಪಿಗೆ ಮತ ಹಾಕಿ ಯಾವುದೇ ಪ್ರಯೋಜನವಿಲ್ಲ. ಈಗಲೂ ಬಿಜೆಪಿಯಲ್ಲಿ ಉಳಿದಿರುವವರಿಗೆ ಆಹ್ವಾನ ನೀಡುತ್ತಿದ್ದೇವೆ. ನೀವು ಜೆಡಿಎಸ್‌ ಅಥವಾ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಇನ್ನೂ ಎಷ್ಟು ದಿನ ಅಸಹನೆಯಿಂದ ಇರುತ್ತೀರಿ ಎಂದು ಪ್ರಶ್ನೆ ಮಾಡಿದ ಅವರು, ಹೆಚ್ಚಿನ ಬಹುಮತದಿಂದ ಸುರೇಶ್‌ ಅವರನ್ನು ಗೆಲ್ಲಿಸಬೇಕು ಎಂದು ಮನವಿ
ಮಾಡಿದರು. ಅರ್ಕಾವತಿ ನಮ್ಮಲ್ಲೇ ಇದೆ: ನಾನು ಇಗ್ಗಲೂರು ಜಲಾಶಯದಿಂದ ನೀರನ್ನು ಕನಕಪುರ ತಾಲೂಕಿಗೆ ಹರಿಸಿಕೊಂಡಿದ್ದೇನೆ ಎಂದು ಆರೋಪಿಸಲಾಗುತ್ತಿದೆ.

ನನಗೆ ಅಂತಹ ಆಸೆ ಇಲ್ಲ, ಎಲ್ಲಾ ರೈತರೂ ಒಂದೇ, ಕನಕಪುರ ತಾಲೂಕಿನಲ್ಲಿಯೇ ಅರ್ಕಾವತಿ ನದಿ ಇದೆ. ಇಲ್ಲಿ ಕೆರೆಗಳು ತುಂಬುವ ಮೊದಲೇ ಅಲ್ಲಿ ಎಲ್ಲಾ ವ್ಯವಸ್ಥೆ ಮಾಡಿ ಕೊಂಡಿದ್ದೇವೆ, ಇಲ್ಲಿಂದ ನೀರು ಪಡೆಯುವ ಅಗತ್ಯವಿಲ್ಲ, ಜಲಸಂಪನ್ಮೂಲ ಇಲಾಖೆಯಿಂದ 600 ಕೋಟಿ ರೂ. ವೆಚ್ಚದಲ್ಲಿ ಶಿಂಷಾ ಸತ್ತೇಗಾಲ ಯೋಜನೆಯನ್ನು ವರ್ಷವಿಡೀ ಜಿಲ್ಲೆಗೆ ನೀರುಣಿಸಲು ಯೋಜನೆ ರೂಪಿಸಿದ್ದೇವೆ. ಅನುಷ್ಠಾನದ ನಂತರ ಯಾವುದೇ ಸಮಸ್ಯೆ
ಇರುವುದಿಲ್ಲ ಎಂದು ಹೇಳಿದರು.

ಪ್ರತ್ಯೇಕ ನೀರು ಸರಬರಾಜಿಗೆ ವ್ಯವಸ್ಥೆ: ರಾಮನಗರ ಹಾಗೂ ಚನ್ನಪಟ್ಟಣ ನಗರಗಳಿಗೆ ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆ ಮಾಡಲು 1000 ಕೋಟಿ ರೂ. ನೀಡಿದ್ದೇವೆ. ಟೆಂಡರ್‌ ಹಂತದಲ್ಲಿದೆ. ತಾಲೂಕಿನಲ್ಲಿ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡುತ್ತಿದ್ದೇವೆ. ಚರಂಡಿ, ರಸ್ತೆ ಸೇರಿದಂತೆ
ಮೂಲಭೂತ ಸೌಲಭ್ಯಗಳನ್ನು ನೀಡುತ್ತೇವೆ.ಇದರಲ್ಲಿ ಯಾವುದೇ ಅನುಮಾನ  ಬೇಡ. ಇಡೀ ದೇಶದಲ್ಲಿಯೇ ಯಾವುದೇ ಲೋಕಸಭಾ ಕ್ಷೇತ್ರದಲ್ಲಿ 270 ಶುದ್ಧ ಕುಡಿಯುವ ನೀರಿನ ಘಟಕಗಳಿಲ್ಲ ಸಂಸದ ಸುರೇಶ್‌ ಆ ಸಾಧನೆ ಮಾಡಿದ್ದಾರೆ. ಜನತೆಗೆ ಶುದ್ಧ ನೀರು ನೀಡುವುದು, ಆರೋಗ್ಯ ಕಾಪಾಡುವುದು ಅವರ ಉದ್ದೇಶವಾಗಿದೆ. ಜನಸೇವೆಗಾಗಿ ಮತ್ತೂಮ್ಮೆ ಅವರನ್ನು ಆರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ್‌, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವೀಣಾ ಕುಮಾರಿ, ಬಮೂಲ್‌ ನಿರ್ದೇಶಕ ಎಸ್‌.ಲಿಂಗೇಶ್‌. ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಮುದ್ದುಕೃಷ್ಣ, ಕುಕ್ಕಟ ಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು, ಜಿಪಂ ಸದಸ್ಯರಾದ ಸುಗುಣ, ಪ್ರಸನ್ನ ಕುಮಾರ್‌, ನಟಿ ಅಭಿನಯ, ಚಂದ್ರ ಸಾಗರ್‌, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ರಾಜಣ್ಣ ಹಾಜರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.