Karnataka One ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ:ಗೃಹಲಕ್ಷ್ಮೀ ನೋಂದಣಿ ಪ್ರಕ್ರಿಯೆಪರಿಶೀಲನೆ
Team Udayavani, Jul 22, 2023, 12:35 PM IST
ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು.
ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ಎಲ್ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ ಒಂದು ಕ್ಷಣ ಅವಕ್ಕಾದರು. ತಮ್ಮ ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಕೂಡ ಸೇವಾ ಕೇಂದ್ರದಲ್ಲಿ ಡಿಸಿಎಂ ಅವರನ್ನು ಕಂಡು ಆಶ್ಚರ್ಯಚಕಿತರಾದರು.
ಇದನ್ನೂ ಓದಿ:Malda: ಇಬ್ಬರು ಮಹಿಳೆಯರಿಗೆ ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ; ವಿಡಿಯೋ ವೈರಲ್
ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಹೇಗೆ ಮಾಡಲಾಗುತ್ತಿದೆ? ಅಲ್ಲಿನ ಸಿಬ್ಬಂದಿ ಏನಾದರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಾ? ವಿಳಂಬ ಮಾಡುತ್ತಿದ್ದಾರಾ? ಕುಂಟು ನೆಪ ಹೇಳುತ್ತಿದ್ದಾರಾ? ಮನೆ ಯಜಮಾನಿಯರಿಗೆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಇದೆಯಾ? ನೋಂದಣಿ ಪ್ರಕ್ರಿಯೆ ಸರಳವಾಗಿದೆಯಾ ಎಂಬುದರ ಬಗ್ಗೆ ನೋಂದಣಿದಾರರಿಂದಲೇ ಖುದ್ದು ಮಾಹಿತಿ ಪಡೆದರು.
ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ತೊಡಕು ಬಗ್ಗೆ ಮಹಿಳೆಯೊಬ್ಬರು ನೀವೇದಿಸಿಕೊಂಡಾಗ ಅದಕ್ಕೆ ಪರಿಹಾರವನ್ನು ಡಿಸಿಎಂ ಅವರು ಸೂಚಿಸಿದರು.
ಸಿಬ್ಬಂದಿ ಜತೆ ಕಂಪ್ಯೂಟರ್ ಮುಂದೆ ಕುಳಿತು ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಕೆಲವು ಮಹಿಳೆಯರಿಗೆ ನೋಂದಣಿ ಪತ್ರವನ್ನೂ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ