ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಅಂಬೇಡ್ಕರ್‌, ಕೆಂಪೇಗೌಡರ ಪ್ರತಿಮೆ ವಿವಿಧ ಸಂಘಟನೆಗಳ ಪದಾಧಿಕಾರಿಗಳಿಂದಲೇ ಅನಾವರಣ: ಎಚ್ಚರಿಕೆ

Team Udayavani, Oct 27, 2021, 6:09 PM IST

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ರಾಮನಗರ: ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ (ಡೀಸಿ ಕಚೇರಿ) ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ನಾಡ ಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಇದೇ ಡಿ.6ರೊಳಗೆ ಅನಾವರಣಗೊಳಿಸದಿದ್ದರೆ ತಾವೇ ಸ್ವತಃ ಎರಡೂ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ದಲಿತ ಸಂಘಟನೆಗಳ ಮಹಾ ಒಕ್ಕೂಟ ಮತ್ತು ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ವೇಳೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನೆ ವೇಳೆ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

 ಕೋವಿಡ್‌ ನೆಪ ಬೇಡ: ಮುಖಂಡ ಕೋಟೆ ಕುಮಾರ್‌ ಮಾತನಾಡಿ, ಡಾ. ಬಿ.ಆರ್‌.ಅಂಬೇಡ್ಕರ್‌ ಮತ್ತು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ 2 ವರ್ಷಗಳಿಗೂ ಹೆಚ್ಚು ಸಮಯವಾಗಿದೆ. ಆದರೆ ಕೋವಿಡ್‌ ನೆಪವೊಡ್ಡಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಮೆಗಳ ಅನಾವರಣಕ್ಕೆ ಮುಂದಾಗಿಲ್ಲ. ಚುನಾವಣೆಗಳು ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಸರಾಗವಾಗಿ ನಡೆಯುತ್ತಿದೆ. ಆದರೆ ಪ್ರತಿಮೆಗಳ ಅನಾವರಣದ ವಿಚಾರ ಬಂದಾಗ ಕೋವಿಡ್‌ ನಿಯಮ ಅಡ್ಡಿಯಾಗುತ್ತವೆಯೇ? ಎಂದು ಪ್ರಶ್ನಿಸಿದರು. ಕೋವಿಡ್‌ ಸೋಂಕಿನ ಆತಂಕವೇ ಇಲ್ಲದೆ ಚುನಾವಣೆಗಳು ನಡೆಯುತ್ತಿವೆ.  ಪ್ರತಿಮೆಗಳ ಅನಾವರಣಕ್ಕೆ ಸೋಂಕು ಅಡ್ಡಿಯಾಗುವುದೇ? ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಈ ಪ್ರತಿಮೆಗಳ ಅನಾವರಣಕ್ಕೆ ದಿನಾಂಕ ನಿಗದಿಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:- ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ನಿರಂತರ ಹೋರಾಟ: ವಿಶ್ವ ಶ್ರೇಷ್ಠ ಸಂವಿಧಾನ ಕೊಟ್ಟ ಬಾಬಾ ಸಾಹೇಬರ ಪ್ರತಿಮೆ ಮತ್ತು ನಾಡು ಕಟ್ಟಿದ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ನಿರಂತರ ಹೋರಾಟ ನಡೆಸಿದ ನಂತರ ಡಿ.ಕೆ.ಶಿವಕುಮಾರ್‌ರ ಶ್ರಮದಿಂದ ಜಿಲ್ಲಾ ಸರ್ಕಾರಿ ಕಚೇರಿಗಳ ಆವರಣದಲ್ಲಿ ಸ್ಥಾಪನೆಯಾಗಿದೆ. ಆದರೆ ಹಾಲಿ ಸರ್ಕಾರ ಕೋವಿಡ್‌ ನೆಪವೊಡ್ಡಿ ಪ್ರತಿಮೆಗಳ ಅನಾವರಣವನ್ನೇ ಮಾಡಿಲ್ಲ.

ಇಲ್ಲ ಸಲ್ಲದ ನೆಪ ಒಡ್ಡದೆ ಪ್ರತಿಮೆಗಳನ್ನು ಅನಾವರಣಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವಶಂಕರ್‌, ಗುಡ್ಡೆ ವೆಂಕಟೇಶ್‌, ಪುಟ್ಟಸ್ವಾಮಿ, ಚಲವರಾಜು, ಗೋವಿಂದರಾಜು, ಶೇಖರ್‌, ಪ್ರಕಾಶ, ರಮೇಶ್‌, ಭೈರವ, ಗುರುಮಲ್ಲಯ್ಯ, ನಿಖೀಲ್‌ ಸಜ್ಜೆಲಿಂಗಯ್ಯ ಮತ್ತಿತರರಿದ್ದರು.

ಎರಡು ವರ್ಷ ಕಳೆದರೂ ಪ್ರತಿಮೆ ಅನಾವರಣ ಇಲ್ಲ – ದಲಿತ ಸಂಘಟನೆಗಳ ಮಹಾ ಒಕ್ಕೂಟದ ಅಧ್ಯಕ್ಷ ಎಂ.ಜಗದೀಶ್‌ ಮಾತನಾಡಿ, ಬಾಬಾ ಸಾಹೇಬರ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣವನ್ನು ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಡಿ.6 ಅಂಬೇಡ್ಕರ್‌ ಅವರ ಪರಿನಿರ್ವಾಣ ದಿನದೊಳಗೆ ನೆರೆವೇರಿಸಬೇಕು.

ಇದು ಸಾಧ್ಯವಾಗದಿದ್ದರೆ ಡಿ.6ರಂದು ತಮ್ಮ ಸಂಘಟನೆಯೂ ಸೇರಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಎರಡೂ ಪ್ರತಿಮೆ ಅನಾವರಣಗೊಳಿಸುವುದಾಗಿ ಎಚ್ಚರಿಸಿದರು. ಇಬ್ಬರೂ ಮಹನೀಯರ ಆದರ್ಶ ಸಮಾಜಕ್ಕೆ ಮಾರ್ಗದರ್ಶಕ. 2 ವರ್ಷ ಕಳೆದರೂ ಪ್ರತಿಮೆ ಅನಾವರಣಗೊಳಿಸದೆ ಮಹನೀಯರನ್ನು ಅವಮಾನಿಸಿದಂತಾಗಿದೆ ಎಂದು ದೂರಿದರು. ಪ್ರತಿ ಭಟನಾಕಾರರು ನೀಡಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಸ್ವೀಕರಿಸಿದರು. ಪ್ರತಿಮೆಗಳ ಅನಾವರಣದ ಕುರಿತು ತಾವು ಜಿಲ್ಲಾಧಿಕಾರಿಗಳ ಬಳಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಪ್ರತಿಭಟನಾಕಾರರು ಡಿ.6ರೊಳಗೆ ಜಿಲ್ಲಾಡಳಿತ ತಮ್ಮ ಮನವಿಗೆ ಸ್ಪಂದಿಸದಿದ್ದರೆ, ತಾವೇ ಅನಾವರಣಗೊಳಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.