ಪಿಂಚಣಿ ವಿತರಿಸುವಲ್ಲಿ ವಿಳಂಬ: ಸಂಸದ ಆಕ್ರೋಶ

ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಚೆ ಇಲಾಖೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಡಿ.ಕೆ.ಸುರೇಶ್‌

Team Udayavani, Jun 7, 2019, 8:15 AM IST

ramanagar-tdy-1..

ಜಿಪಂ ಸಭಾಂಗಣದಲ್ಲಿ ನಡೆದ ಅಂಚೆ ಇಲಾಖೆ, ಖಜಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಂಸದ ಸುರೇಶ್‌ ಮಾತನಾಡಿದರು.

ರಾಮನಗರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಕಳೆದ ಐದು ತಿಂಗಳಿಂದ ಪಿಂಚಣಿ ವಿತರಣೆಯಾಗದಿರುವುದು, ಸರ್ಕಾರಿ ಖಜಾನೆ ನೀಡಿದ ಅಂಕಿ – ಅಂಶಗಳಿಗೂ ಅಂಚೆ ಇಲಾಖೆ ನೀಡುವ ಅಂಕಿ ಅಂಶಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಅಂಚೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಗುರುವಾರ ಸಂಜೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಂಚೆ ಇಲಾಖೆ, ಖಜಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಇನ್ನೊಂದು ವಾರದಲ್ಲಿ ಈ ಬಗ್ಗೆ ವರದಿ ಕೊಡಿ ಎಂದು ಸಂಸದರು ಅಂಚೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

ಕಳೆದ ಐದು ತಿಂಗಳಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಪಿಂಚಣಿ ವಿತರಣೆಯಾಗುತ್ತಿಲ್ಲ. ಅದನ್ನೇ ನಂಬಿ ಜೀವನ ನಡೆಸುವ ಅವರು ಜೀವನ ನಡೆಸುವುದಾದರು ಹೇಗೆ ಎಂದು ಪ್ರಶ್ನಿಸಿದರು. ವೃದ್ದರು ಇದೇ ಹಣದಲ್ಲಿ ಔಷಧಿ ಕೊಳ್ಳು ಕಾಯುತ್ತಿರುತ್ತಾರೆ ಅವರ ಬಗ್ಗೆ ಕಾಳಜಿ ವಹಿಸಿ, ಇನ್ನೊಂದು ವಾರದಲ್ಲಿ ಪಿಂಚಣಿ ವಿತರಸಿ ತಮಗೆ ಮಾಹಿತಿ ಕೊಡುವಂತೆ ಸೂಚಿಸಿದರು.

ಈ ವೇಳೆ ಪೋಸ್ಟ್‌ ಮಾಸ್ಟರ್‌ಗಳು, ಪೋಸ್ಟ್‌ ಮನ್‌ಗಳು ತಮಗೆ ಸಮಯದ ಅಭಾವವಿದೆ. ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕಾದ ಸಮಯವನ್ನು ಮೊಟಕುಗೊಳಿಸಿದರೆ ಪಿಂಚಣಿ ವಿತರಣೆ ಬಗ್ಗೆ ಗಮನಹರಿಸಲು ಸಾಧ್ಯ ಎಂದು ಇಲಾಖಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಜಿಲ್ಲಾ ಪಂಚಾಯತ್‌ನ ಸಿಇಓ ಎಂ.ಪಿ.ಮುಲ್ಲೈ ಮುಹಿಲನ್‌, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್‌ ಹಾಜರಿದ್ದರು.

ಅಂಚೆ ಇಲಾಖೆ ಅಂಕಿ ಅಂಶಗಳು ತಾಳೆ ಆಗುತ್ತಿಲ್ಲ: ಡಿ.ಕೆ.ಸುರೇಶ್‌ ಗರಂ

 ಸಾಮಾಜಿಕ ಭದ್ರತೆಯಡಿ ವಿವಿಧ ಪಿಂಚಣಿ ಯೋಜನೆಯಡಿಯಲ್ಲಿ ಸರ್ಕಾರದ ಅನುದಾನ ಖಜಾನೆಯಿಂದ ಅಂಚೆ ಇಲಾಖೆಗೆ ವರ್ಗಾವಣೆ ಆಗುತ್ತಿದೆ. ಆದರೆ ಖಜಾನೆಯ ಮಾಹಿತಿ ಮತ್ತು ಅಂಚೆ ಇಲಾಖೆಯ ಮಾಹಿತಿಯನ್ನು ತಾಳೆ ಹಾಕಿದರೆ ಸುಮಾರು 2 ಕೋಟಿ ರೂ ವ್ಯತ್ಯಾಸ ವ್ಯಕ್ತವಾಗುತ್ತಿದೆ. ಈ ಬಗ್ಗೆ ವರದಿ ಕೊಡುವಂತೆ ಸೂಚಿಸಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಮಾಸಿಕ 18 ಕೋಟಿ ರೂ ಪಿಂಚಣಿ ರೂಪದಲ್ಲಿ ಫ‌ಲಾನುಭವಿಗಳಿಗೆ ವಿತರಣೆಯಾಗಬೇಕು. ಈ ಪೈಕಿ ಖಜಾನೆ ಅಧಿಕಾರಿಗಳು ತಾವು 8 ಕೋಟಿ ರೂ ಹಣವನ್ನು ಅಂಚೆ ಇಲಾಖೆಗೆ ವರ್ಗಾಯಿಸುತ್ತಿರುವುದಾಗಿ ಮಾಹಿತಿ ಕೊಟ್ಟಿದ್ದಾರೆ. ಆದರೆ ಅಂಚೆ ಇಲಾಖೆಯ ಅಧಿಕಾರಿಗಳು ತಮಗೆ 6 ಕೋಟಿ ರೂ ಮಾತ್ರ ಸಿಗುತ್ತಿದೆ ಎಂದು ಮಾಹಿತಿ ನೀಡಿದ್ಧಾರೆ. ಈ ವಿಚಾರದಲ್ಲಿ ವರದಿ ಕೇಳಿರುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ 2.85 ಲಕ್ಷ ಪಿಂಚಣಿದಾರರಿದ್ದಾರೆ. ಈ ಪೈಕಿ 111509 ಪಿಂಚಣಿದಾರರಿಗೆ ಬ್ಯಾಂಕ್‌ ಖಾತೆಗೆ ನೇರ ಜಮಾವಣೆ ಆಗುತ್ತಿದೆ. ಅಂಚೆ ಇಲಾಖೆಯ ಮೂಲಕ 97 ಸಾವಿರ ಫ‌ಲಾನುಭವಿಗಳಿಗೆ ವಿತರಣೆಯಾಗುತ್ತಿದೆ. ಈ ಪೈಕಿ ಸುಮಾರು 40 ಸಾವಿರ ಪಿಂಚಣಿದಾರರಿಗೆ ಅಂಚೆ ಇಲಾಖೆಯಲ್ಲಿ ಆರಂಭವಾಗಿರುವ ಬ್ಯಾಂಕ್‌ನಲ್ಲಿ ಖಾತೆಗಳು ಸೃಜನೆಯಾಗಿದ್ದು, ಪಿಂಚಣಿ ಈ ಖಾತೆಗಳಿಗೆ ಜಮಾವಣೆ ಆಗಿವೆ. ಉಳಿದವರಿಗೆ ಮನಿಯಾರ್ಡ್‌ರ್‌ ಮೂಲಕ ವಿತರಣೆಯಾಗುತ್ತಿದೆ ಎಂದು ಸಂಸದರು ಮಾಹಿತಿ ಕೊಟ್ಟರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.