ಪಿಂಚಣಿ ವಿತರಿಸುವಲ್ಲಿ ವಿಳಂಬ: ಸಂಸದ ಆಕ್ರೋಶ
ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಚೆ ಇಲಾಖೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಡಿ.ಕೆ.ಸುರೇಶ್
Team Udayavani, Jun 7, 2019, 8:15 AM IST
ಜಿಪಂ ಸಭಾಂಗಣದಲ್ಲಿ ನಡೆದ ಅಂಚೆ ಇಲಾಖೆ, ಖಜಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಂಸದ ಸುರೇಶ್ ಮಾತನಾಡಿದರು.
ರಾಮನಗರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಕಳೆದ ಐದು ತಿಂಗಳಿಂದ ಪಿಂಚಣಿ ವಿತರಣೆಯಾಗದಿರುವುದು, ಸರ್ಕಾರಿ ಖಜಾನೆ ನೀಡಿದ ಅಂಕಿ – ಅಂಶಗಳಿಗೂ ಅಂಚೆ ಇಲಾಖೆ ನೀಡುವ ಅಂಕಿ ಅಂಶಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಅಂಚೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗುರುವಾರ ಸಂಜೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಂಚೆ ಇಲಾಖೆ, ಖಜಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಇನ್ನೊಂದು ವಾರದಲ್ಲಿ ಈ ಬಗ್ಗೆ ವರದಿ ಕೊಡಿ ಎಂದು ಸಂಸದರು ಅಂಚೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಕಳೆದ ಐದು ತಿಂಗಳಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಪಿಂಚಣಿ ವಿತರಣೆಯಾಗುತ್ತಿಲ್ಲ. ಅದನ್ನೇ ನಂಬಿ ಜೀವನ ನಡೆಸುವ ಅವರು ಜೀವನ ನಡೆಸುವುದಾದರು ಹೇಗೆ ಎಂದು ಪ್ರಶ್ನಿಸಿದರು. ವೃದ್ದರು ಇದೇ ಹಣದಲ್ಲಿ ಔಷಧಿ ಕೊಳ್ಳು ಕಾಯುತ್ತಿರುತ್ತಾರೆ ಅವರ ಬಗ್ಗೆ ಕಾಳಜಿ ವಹಿಸಿ, ಇನ್ನೊಂದು ವಾರದಲ್ಲಿ ಪಿಂಚಣಿ ವಿತರಸಿ ತಮಗೆ ಮಾಹಿತಿ ಕೊಡುವಂತೆ ಸೂಚಿಸಿದರು.
ಈ ವೇಳೆ ಪೋಸ್ಟ್ ಮಾಸ್ಟರ್ಗಳು, ಪೋಸ್ಟ್ ಮನ್ಗಳು ತಮಗೆ ಸಮಯದ ಅಭಾವವಿದೆ. ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕಾದ ಸಮಯವನ್ನು ಮೊಟಕುಗೊಳಿಸಿದರೆ ಪಿಂಚಣಿ ವಿತರಣೆ ಬಗ್ಗೆ ಗಮನಹರಿಸಲು ಸಾಧ್ಯ ಎಂದು ಇಲಾಖಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪಂಚಾಯತ್ನ ಸಿಇಓ ಎಂ.ಪಿ.ಮುಲ್ಲೈ ಮುಹಿಲನ್, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?