ನೂತನ ಪಿಂಚಿಣಿ ಯೋಜನೆ ರದ್ದಿಗೆ ಆಗ್ರಹ
Team Udayavani, Feb 26, 2019, 7:36 AM IST
ಚನ್ನಪಟ್ಟಣ: ನೂತನ ಪಿಂಚಿಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಯೋಜನೆಯನ್ನೇ ಮುಂದುವರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.
ಕೇಂದ್ರ ಸರ್ಕಾರವು ನೂತನ ಪಿಂಚಿಣಿ ಯೋಜನೆಯನ್ನು ಜಾರಿಗೊಳಿಸುವ ಅಥವಾ ಕೈಬಿಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಕೇಂದ್ರದ ಈ ನಿಲುವನ್ನು ಆಧರಿಸಿ, ಸರ್ಕಾರ ರಚನೆ ಮಾಡಿರುವ ಅಧಿಕಾರಿಗಳು ಸಮಿತಿ ವರದಿ ಪಡೆದುಕೊಂಡು ಹಳೆಯ ಪಿಂಚಿಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಹಳೆಯ ಪಿಂಚಿಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಸರ್ಕಾರವು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಿದ್ದು, ಎನ್ಪಿಎಸ್ ಯೋಜನೆ ರದ್ದತಿ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಹಾಗಾಗಿ ಆದಷ್ಟು ಶೀಘ್ರವಾಗಿ ಸರ್ಕಾರ ಅನುಷ್ಠಾನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದೇಗೌಡ, ಕಾರ್ಯದರ್ಶಿ ಹೇಮಾವತಿ, ಸರ್ಕಾರಿ ನೌಕರರ ಸಂಘದ ಸದಸ್ಯರಾದ ಸೌಭಾಗ್ಯ, ಅಶ್ವಿನಿ, ಸರಸ್ವತಿ, ರಮೇಶ್, ಪ್ರಕಾಶ್, ಗುಂಡಪ್ಪ, ಜಯಲಕ್ಷ್ಮೀ, ರವಿಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ