ಮೈಸೂರು-ಬೆಂಗಳೂರು ಹೆದ್ದಾರಿಗೆ ನಾಲ್ವಡಿ ಹೆಸರಿಡಲು ಆಗ್ರಹ


Team Udayavani, Jan 17, 2023, 12:54 PM IST

tdy-11

ಕನಕಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಇಡಬೇಕು ಎಂದು ದಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಆಗ್ರಹಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಜಯಕರ್ನಾಟಕ ಸಂಘಟನೆ ಮತ್ತು ಬಹುಜನ ಜಾಗೃತಿ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸಮಾಜಕ್ಕೆ ಕೊಟ್ಟ ಕೊಡುಗೆಗಳನ್ನು ಸರ್‌ ಎಂ.ವಿಶ್ವೇಶ್ವರಯ್ಯ ಅವರ ತಲೆಗೆ ಕಟ್ಟಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರನ್ನು ಮೂಲೆಗುಂಪು ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಜಲಕಣ್ಣನ್ನು ಸದ್ಬಳಕೆ ಮಾಡಿಕೊಂಡು ಕನ್ನಂಬಾಡಿ ಕಟ್ಟೆ, ಗೋಪಾಲಸ್ವಾಮಿ ಜಲಾಶಯ, ತಿಪ್ಪಗೊಂಡನಹಳ್ಳಿ ಜಲಾಶಯ, ಚಿತ್ರದುರ್ಗದ ಮಾರಿ ಕಣಿವೆ ಡ್ಯಾಂ ಕಟ್ಟಿ ರೈತರ ಕೋಟ್ಯಂತರ ಎಕರೆ ಒಣ ಭೂಮಿಗೆ ನೀರು ಕಲ್ಪಿಸಿದ್ದಾರೆಂದರು.

ಕಾರ್ಖಾನೆ ಆರಂಭಿಸಿದರು: ಏಷ್ಯಾ ಖಂಡದ ಮೊಟ್ಟ ಮೊದಲ ಜಲವಿದ್ಯುತ್‌ ಯೋಜನೆ ಪ್ರಾರಂಭ ಮಾಡಿ ಕತ್ತಲಲ್ಲಿದ್ದವರಿಗೆ ಮೊಟ್ಟ ಮೊದಲು ಬೆಳಕನ್ನು ಕೊಟ್ಟ ಕೀರ್ತಿ ನಾಲ್ವಡಿ ಅವರದ್ದು. ಸಾವಿರಾರು ಶಾಲೆಗಳು, ಗ್ರಾಮ ನ್ಯಾಯಾಲಯ, ಪಂಚಾಯ್ತಿ, ದುಡಿಯುವ ಕೈಗಳಿಗೆ ಉದ್ಯೋಗ ಕೊಡಲು ಹಲವು ಕಾರ್ಖಾನೆಗಳನ್ನು ಸ್ಥಾಪಿಸಿದರು. ಜನರ ಆರೋಗ್ಯಕ್ಕಾಗಿ ಮೈಸೂರು ಮತ್ತು ಬೆಂಗಳೂರಿನಲ್ಲಿ ನೂರಾರು ಆಸ್ಪತ್ರೆ ಹೆಬ್ಟಾಳದಲ್ಲಿ ಕೃಷಿ ವಿವಿ, ತಮಿಳುನಾಡನ್ನು ಅವಲಂಬಿಸಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯದಲ್ಲಿ 1916ನೇ ಇಸವಿಯಲ್ಲಿ ಮೈಸೂರು ವಿವಿ ಪ್ರಾರಂಭ ಮಾಡಿದ್ದಾರೆಂದರು. ರಾಜ್ಯದಲ್ಲಿ ಯಾರಾದರೂ ಡಿಗ್ರಿ ಪದವಿ ಪಡೆದವರು ಇದ್ದರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಹೇಳಬೇಕು. ಅವರ ಸ್ಮರಣೆ ಮಾಡಬೇಕು. ಆದರೆ, ಈ ಎಲ್ಲ ಸಾಧನೆಗಳನ್ನು ಕೊಡುಗೆಗಳನ್ನು ಸರ್‌ ಎಂ.ವಿಶೇಶ್ವರಯ್ಯ ಅವರ ಕೊಡುಗೆ ಎಂದು ಬಿಂಬಿಸಿ ಅವರ ಪ್ರತಿಮೆಗಳನ್ನು ನಿರ್ಮಾಣ ಮಾಡಿದ್ದಾರೆಂದರು.

ದುರ್ದೈವ: ಸರ್‌ ಎಂ.ವಿಶ್ವೇಶ್ವರಯ್ಯನವರು ಎಲೆಕ್ಟ್ರಿಕಲ್‌ ಎಂಜಿನಿಯರ್‌ ಅಲ್ಲ. ಟೆಕ್ನಿಕಲ್‌ ಎಂಜಿನಿಯರ್‌ ಅಲ್ಲ. ಆದರೂ ಬೆಂಕಿಕಡ್ಡಿ ಕಾರ್ಖಾನೆಯಾದಿಯಾಗಿ ನೋಟು ಮುದ್ರಣ ಇಲಾಖೆಯಲ್ಲೂ ವಿಶ್ವೇಶ್ವರಯ್ಯ ಅವರ ಪುತ್ಥಳಿ ಫೋಟೋ ಇಟ್ಟು ಅವರನ್ನು ಅಳತೆಗೂ ಮೀರಿ ವೈಭವೀಕರಿಸಿದ್ದಾರೆ. ಇಡೀ ಸಮಾಜದ ವ್ಯವಸ್ಥೆಯನ್ನು ರೂಪಿಸಿದ ನಾಲ್ವಡಿ ಕೃಷ್ಣ ಕೃಷ್ಣರಾಜ ಒಡೆಯರ್‌ ಅವರೇ ನಿರ್ಮಾಣ ಮಾಡಿದ ರಸ್ತೆಗಳಿಗೆ ಅವರ ಹೆಸರನ್ನು ಇಡಿ ಎಂದು ಬೀದಿಗಿಳಿದು ಪ್ರತಿಭಟನೆ ಮಾಡುವ ದುಸ್ಥಿತಿ ಬಂದಿರುವುದು ದುರ್ದೈವ ಎಂದರು. ಅವಕಾಶ ಕೊಡಲ್ಲ: ಜಯ ಕರ್ನಾಟಕ ಸಂಘಟನೆ ಎ.ಪಿ.ಕೃಷ್ಣಪ್ಪ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ತಮ್ಮ ತನು ಮನ ಧನ ಸರ್ವಸ್ವವನ್ನೂ ಧಾರೆ ಎರೆದು ಇಡೀ ಸಮಾಜಕ್ಕೆ ಹಲವಾರು ಕೊಡುಗೆ ಕೊಟ್ಟಿದ್ದಾರೆ. ತಮ್ಮ ಪತ್ನಿಯ ಒಡವೆ ಅಡವಿಟ್ಟು ಕೆ.ಆರ್‌. ಎಸ್‌ ಜಲಾಶಯ ನಿರ್ಮಾಣ ಮಾಡಿದವರು. ಇಂತಹ ಮಹಾನ್‌ ನಾಯಕರ ಹೆಸರನ್ನು ಹೇಳಲು ಸರ್ಕಾರ ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಮೈಸೂರು ಬೆಂಗಳೂರು ಹೆದ್ದಾರಿ ರಸ್ತೆಗೆ ಕೆಲವು ರಾಜಕಾರಣಿಗಳ ಹೆಸರನ್ನು ಇಡಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದರು.

ನಾಲ್ವಡಿಯವರಂತೆ ಸಮಾಜ ಸೇವೆಗೆ ಯಾವುದೇ ರಾಜಕಾರಣಿ ತೊಡಗಿಸಿಕೊಂಡವರಲ್ಲ. ಹಾಗಾಗಿ ಬೆಂಗಳೂರು -ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರನ್ನು ಇಡಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆ ವೀರೇಶ್‌, ರೈತ ಸಂಘದ ಮುಖಂಡ ಶ್ರೀನಿವಾಸ್‌, ರೈತ ಸಂಘದ ತಾಲೂಕು ಅಧ್ಯಕ್ಷ ಶಿವರಾಜು, ದಲಿತ ಮುಖಂಡ ನೀಲಿ ರಮೇಶ್‌, ಬರಡನಹಳ್ಳಿ ಕಿರಣ್‌, ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.