ಆನೆಗಳ ದಾಳಿಗೆ ತೆಂಗು, ಬಾಳೆ ನಾಶ


Team Udayavani, Jun 18, 2020, 6:47 AM IST

destroy banabna

ಚನ್ನಪಟ್ಟಣ: ಕಾಡಾನೆಗಳ ಗುಂಪೊಂದು ದಾಳಿ ನಡೆಸಿ, ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಲೇಟ್‌ ನಾಥೇಗೌಡ ಎಂಬುವರ ಪುತ್ರ  ಶಿವಲಿಂಗಯ್ಯ, ತಮ್ಮಣ್ಣಗೌಡ ಎಂಬುವರ ಪುತ್ರ ಶ್ರೀನಿವಾಸ್‌, ತಿಮ್ಮೇಗೌಡ ಎಂಬುವರ ಪುತ್ರ ಗೋವಿಂದೇಗೌಡ ಬೆಳೆದಿದ್ದ ಬಾಳೆತೋಟ, ಮಾವು, ಅಡಿಕೆ, ತೆಂಗನ್ನು ನಾಶಪಡಿಸಿವೆ.

ಸುಮಾರು 7 ಆನೆಗಳಿದ್ದ ಗುಂಪು ಮುತ್ತತ್ತಿ ಅರಣ್ಯ ಪ್ರದೇಶದಿಂದ ಬಂದಿವೆ ಎನ್ನಲಾಗಿದೆ. ಕೆಲ ದಿನಗಳಲ್ಲಿ ಗೊನೆ ಬಿಡಲಿದ್ದ ಸಾವಿರಾರು ಬಾಳೆ ಗಿಡಗಳನ್ನು ಕಿತ್ತು ತಿಂದು ನಂತರ ತುಳಿದು ನಾಶಪಡಿಸಿವೆ. ಮಾವಿನ ಮರದ ರೆಂಬೆಗಳು ಹಾಗೂ ಮಾವಿನ ಗಿಡಗಳನ್ನು ಬುಡ ಸಹಿತ ಕಿತ್ತಿರುವ  ಆನೆಗಳು, ಹತ್ತಾರು ತೆಂಗಿನ ಮರಗಳನ್ನು ಉರುಳಿಸಿವೆ.

ಕೋವಿಡ್‌ 19 ಸಂಕಷ್ಟದ ಸಂದರ್ಭದಲ್ಲಿ ಸಾಲ ಮಾಡಿ ಕಷ್ಟಪಟ್ಟು ಬೆಳೆದ ಬಾಳೆ, ಅಡಿಕೆ, ಮಾವು ಫಸಲನ್ನು ಕಾಡಾನೆಗಳ ಗುಂಪು ಈ ರೀತಿ ದಾಳಿ ಮಾಡಿ ಹಾಳು ಮಾಡಿರುವುದರಿಂದ  ರೈತರಿಗೆ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ಕಳೆದ ವಾರದಿಂದಲೂ ಈ ಜಾಗದಲ್ಲಿ ಆನೆಗಳ ಕಾಟ ಹೇಳತೀರದ್ದಾಗಿದ್ದು, ರೈತರು ಬೆಳೆದ ಫಸಲನ್ನು ರಕ್ಷಣೆ ಮಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬೇಸಾಯ  ರಕ್ಷಣೆ ಜೊತೆಗೆ ಪ್ರಾಣಗಳನ್ನು ಪಣಕ್ಕಿಡಬೇಕಾಗಿದೆ. ದಿನದಿನಕ್ಕೂ ದಾಳಿ ಹೆಚ್ಚಾಗುತ್ತಿರುವುದರಿಂದ ಹತ್ತಾರು ಗ್ರಾಮದ ಜನರು ಮನೆಯಿಂದ ತಮ್ಮ ತೋಟ ತುಡಿಕೆಗಳಿಗೆ ತೆರಳಲು ಭಯ ಪಡುತ್ತಿದ್ದಾರೆ. ಕಾಡಾನೆಗಳು ಸ್ಥಳೀಯ ಅರಣ್ಯ  ಪ್ರದೇಶದಲ್ಲಿಯೇ ವಾಸವಿದ್ದು, ರಾತ್ರಿಯ ಸಂದರ್ಭದಲ್ಲಿ ರೀತಿ ದಾಳಿ ಮಾಡುತ್ತಿವೆ ಎಂದಿರುವ ರೈತರು ಅರಣ್ಯ ಇಲಾಖೆಯವರು ಗಮನಹರಿಸಿ ಆನೆಗಳ ಹಾವಳಿಯನ್ನು ನಿಯಂತ್ರಣ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.