ಗ್ಯಾಸ್‌ ಗೋಡೌನ್‌ ಸ್ಥಳಾಂತರಿಸಿ

ಮಾಲಿಕರ ವಿರುದ್ಧ ಘೋಷಣೆ ಕೂಗಿದ ನಿವಾಸಿಗಳು | ಅಧಿಕಾರಿಗಳಿಂದ ಸೂಚನೆ

Team Udayavani, Jun 3, 2019, 10:08 AM IST

rn-tdy-2..

ರಾಮನಗರದ ಅರ್ಕಾವತಿ ಬಡಾವಣೆ ನಿವಾಸಿಗಳು ತಮ್ಮ ಬಡಾವಣೆಯಲ್ಲಿರುವ ಗ್ಯಾಸ್‌ ಗೋಡೌನ್‌ ಘಟಕವನ್ನು ಸ್ಥಳಾಂತರಿಸುವಂತೆ ಪ್ರತಿಭಟನೆ ನಡೆಸಿದರು.

ರಾಮನಗರ:ಜನವಸತಿ ಪ್ರದೇಶದಲ್ಲಿರುವ ಎಚ್.ಪಿ. ಕಂಪನಿಯ ಗ್ಯಾಸ್‌ ಸಿಲಿಂಡರ್‌ಗಳ ಗೋಡೌನ್‌ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಇಲ್ಲಿನ ಅರ್ಕಾವತಿ ಬಡಾವಣೆ ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿದರು.

ನಿವಾಸಿಗಳಿಂದ ಹೋರಾಟದ ಎಚ್ಚರಿಕೆ: ನಗರದ ಅರ್ಕಾವತಿ ಬಡಾವಣೆಯಲ್ಲಿರುವ ಗ್ಯಾಸ್‌ ಗೋಡೌನ್‌ ಘಟಕದ ಎದುರು ಜಮಾಯಿಸಿದ ನಾಗರಿಕರು, ಏಜೆನ್ಸಿ ಮಾಲಿಕ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿರಂತರ ಅಪಾಯದ ಆತಂಕಕ್ಕೆ ಕಾರಣವಾಗಿರುವ ಈ ಘಟಕವನ್ನು ಕೂಡಲೇ ಸ್ಥಳಾಂತರಿಸದಿದ್ದರೆ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಅರ್ಕಾವತಿ ಬಡಾವಣೆಯ ಸರ್ವೆ ನಂ.104ರ ಸರ್ಕಾರಿ ಖರಾಬು ಜಮೀನಿನಲ್ಲಿÃ‌ುವ ಘಟಕದ ಸುತ್ತಮುತ್ತ ಜನವಸತಿ ಕಟ್ಟಡಗಳಿವೆ, ಉದ್ಯಾನವನ ಕೂಡ ಇದೆ. ಒಂದು ವೇಳೆ ಅವಘಡ ನಡೆದಿದ್ದೇ ಆದಲ್ಲಿ ಭಾರೀ ಪ್ರಮಾಣದಲ್ಲಿ ಪ್ರಾಣ ಹಾನಿ ಸಂಭಸುವ ಆತಂಕವಿದೆ ಎಂದು ನಾಗರೀಕರು ಪ್ರತಿಕ್ರಿಯಿಸಿದರು.

ನಿರಪೇಕ್ಷಣಾ ಪತ್ರ ನಿರಾಕರಿಸಿರುವ ನಗರಸಭೆ: ಜನವಸತಿ ಪ್ರದೇಶದಲ್ಲಿ ಅಪಾಯಕಾರಿಯಾಗಿರುವ ಗ್ಯಾಸ್‌ ಗೋಡೌನ್‌ ಘಟಕಕ್ಕೆ ನಾಗರಿಕರ ತೀವ್ರ ವಿರೋಧಕ್ಕೆ ಎಚ್ಚೆತ್ತ ನಗರಸಭೆ ಕಳೆದ ಮೂರು ವರ್ಷದಿಂದ ನಿರಾಕ್ಷೇಪಣಾ ಪತ್ರವನ್ನು ನಿರಾಕರಿಸಿದೆ. ಆದರೂ ಈ ಘಟಕ ಇಲ್ಲೇ ಇದೆ. ಘಟಕವನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಬಡಾವಣೆ ನಿವಾಸಿಗಳು ಜಿಲ್ಲಾಡಳಿತಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿರುÊ‌ುದಾಗಿ, ಹಲವಾರು ಬಾರಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಸ್ಥಳಾಂತರಿಸುವಂತೆ ಸೂಚನೆ: ರಾಮನಗರ ತಹಸೀಲ್ದಾರ್‌ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಗೋದಾಮು ಸ್ಥಳಾಂತರಿಸುವಂತೆ ಎಚ್ಪಿ ಗ್ಯಾಸ್‌ ಏಜೆನ್ಸಿ ಮಾಲಿಕರಿಗೆ ಸೂಚನೆ ನೀಡಿದ್ದಾರೆ. ಆದರೆ, ತಹಸೀಲ್ದಾರ್‌ ಆದೇಶಕ್ಕೂ ಕಿಮ್ಮತ್ತು ನೀಡದೆ ಅಲ್ಲೇ ಮುಂದುವರಿಸುತ್ತಿದ್ದಾರೆ ಎಂದರು.

ಆತಂಕದಲ್ಲೇ ಜೀವನ: ಬಡಾವಣೆ ನಿವಾಸಿಗಳು ಪ್ರತಿ ನಿತ್ಯ ಆತಂಕದಲ್ಲೇ ದಿನದೂಡುವಂತಾಗಿದೆ. ಒಂದು ಸಿಲಿಂಡರ್‌ ಸ್ಫೋಟಗೊಂಡರೆ ಭಾರೀ ಅನಾಹುತ ಸಂಭಸುತ್ತದೆ. ನೂರಾರು ಸಿಲಿಂಡರ್‌ ಒಮ್ಮೆಲೆ ಸ್ಫೋಟಗೊಂಡರೆ ಆಗುವ ಅನಾಹುತ ಊಹೆಗೂ ನಿಲುಕದ್ದು ಆತಂಕ ವ್ಯಕ್ತಪಡಿಸಿದರು. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳು ನಿರ್ಮಾಣವಾಗಿದೆ. ಅನತಿ ದೂರದಲ್ಲೇ ಶಾಲೆ ಕೂಡ ಇದೆ. ಪೊಲೀಸ್‌ ವಸತಿ ಗೃಹ ಹಾಗೂ ಸರಕಾರಿ ಅಧಿಕಾರಿಗಳ ವಸತಿ ಗೃಹಗಳೂ ಇವೆ. ಒಂದು ವೇಳೆ ಪ್ರಾಣ ಹಾನಿ ಸಂಭಸಿದರೆ ಜಿಲ್ಲಾಡಳಿತವೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ನಾಗರೀಕರು ಎಚ್ಚರಿಸಿದರು.

ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೂ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಈ ವಿಚಾರದಲ್ಲಿ ಅವರು ಸಹ ಮೌನ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಪ್ರತಿಭಟನೆಯಲ್ಲಿ ಬಡಾವಣೆಯ ನಿವಾಸಿಗಳಾದ ರಾಜಣ್ಣ, ಪುಟ್ಟರಾಮಣ್ಣ, ಯಶವಂತರಾವ್‌, ಪೂರ್ಣಚಂದ್ರ, ಹನುಮಂತೇಗೌಡ, ಜಗದೀಶ್‌, ಬ್ಯಾಂಕ್‌ ಶಿವಣ್ಣ, ರೈಡ್‌ ನಾಗರಾಜು, ವಕೀಲ ಅಂಬರೀಷ್‌, ಕಿರಣ್‌, ಭೋಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.