600 ಮಂದಿಗೆ ಆಹಾರ ಕಿಟ್‌ ವಿತರಣೆ


Team Udayavani, Apr 26, 2020, 1:13 PM IST

rn-tdy-1

ಕನಕಪುರ: ಸಾಮಾಜಿಕ ಅಂತರ ಕಾಪಾಡಿಕೊಂಡು ಗೊಂದಲಕ್ಕೆ ಕಾರಣವಾಗದಂತೆ ಆಹಾರ ಪದಾರ್ಥಗಳನ್ನು 600 ಮಂದಿಗೆ ವಿತರಿಸಿದ ಕೀರ್ತಿಗೆ ತಾಲೂಕಿನ ಕೋಡಿಹಳ್ಳಿ ಗ್ರಾಪಂ ಪಾತ್ರವಾಗಿದೆ. ಗ್ರಾಪಂನ ಈ ಮಾದರಿ ಕಾರ್ಯಕ್ಕೆ ಸ್ವಯಂ ಜಿಪಂ ಸಿಇಒ ಇಕ್ರಂ ಟ್ವೀಟರ್‌ ಮೂಲಕ ಪ್ರಶಂಸಿದ್ದಾರೆ.

ಕೋಡಿಹಳ್ಳಿ ಮಾರ್ವಾಡಿಗಳ ಸಂಘದ ಸದಸ್ಯರು ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ಸಹಾಯ ಮಾಡುವ ಮನಸ್ಸಿದೆ ಎಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದ್ದರು. ಪಡಿತರ ವ್ಯವಸ್ಥೆಯಿಂದ ಸರ್ಕಾರ ಹೇಗೂ ಅಕ್ಕಿ, ರಾಗಿ ಕೊಟ್ಟಿದೆ. ಆದರೆ ಅಡುಗೆಗೆ ಬೇಕಾದ ಸಾಂಬರ್‌ ಪದಾರ್ಥಗಳು, ಉಪ್ಪು, ಎಣ್ಣೆ, ಗೋದಿ ಇತ್ಯಾದಿ ಪದಾರ್ಥಗಳಿಗೆ ನಾಗರಿಕರು ಅಂಗಡಿಗಳಿಗೆ ಹೋಗಲೇ ಬೇಕಿರುವುದನ್ನು ಮನಗಂಡು 10 ಅವಶ್ಯ ಪದಾರ್ಥಗಳ ಕಿಟ್‌ಗಳನ್ನು ಪಂಚಾಯ್ತಿ ಅಧಿಕಾರಿಗಳು ಸಿದ್ಧಪಡಿಸಿಕೊಂಡರು. ಕಿಟ್‌ ಗಳಿಗೆ ಬೇಕಾದ ಪದಾರ್ಥಗಳಿಗೆ ಮಾವಾರ್ಡಿಗಳ ಸಂಘದ ಸದಸ್ಯರ ಕೊಡುಗೆಯ ಜೊತೆಗೆ ತಾವು ಸಂಪನ್ಮೂಲ ಕ್ರೋಢೀಕರಿಸಿದ ಪಂಚಾಯಿತಿ ಅಧಿಕಾರಿಗಳು ಕೋಡಿಹಳ್ಳಿ ಶಾಲೆ ವಿಶಾಲ ಮೈದಾನದಲ್ಲಿ ಪ್ರತಿ ವ್ಯಕ್ತಿ ಕನಿಷ್ಠ 5 ಮೀ. ಅಂತರ ಕಾಯ್ದುಕೊಳ್ಳುವಂತೆ ಗುರುತು ಹಾಕಿ ಫ‌ಲಾನುಭವಿಗಳನ್ನು ವ್ಯವಸ್ಥಿತವಾಗಿ ಕೂರಿಸಿದರು. ವಿಧವೆಯರು, ಅಂಗವಿಕಲರು, ಹೊರ ರಾಜ್ಯದ ಕಾರ್ಮಿಕರು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳು, ಪರಿಶಿಷ್ಟ ಜಾತಿ, ಪಂಗಡಗಳ ಕುಟುಂಬಗಳನ್ನು ಹೀಗೆ ಸುಮಾರು 600 ಕುಟುಂಬಗಳಿಗೆ ಕಿಟ್‌ ವಿತರಿಸಲಾಗಿದೆ.

ಸಂಸದ ಡಿ.ಕೆ.ಸುರೇಶ್‌, ಆ ಭಾಗದ ಜಿಪಂ ಸದಸ್ಯ ಜಯರತ್ನ ರಾಜೇಂದ್ರ, ತಾಪಂ ಉಪಾಧ್ಯಕ್ಷೆ ಅನ್ನಪೂರ್ಣ ಸೊಮಶೇಖರ್‌, ಸದಸ್ಯ ರಮೇಶ್‌, ಕೆ.ಎಸ್‌.ಲೋಕೇಶ್‌, ಪಿಡಿಒ ಎಸ್‌.ಎಂ.ಕೃಷ್ಣಮೂರ್ತಿ ಮತ್ತು ಮಾರ್ವಾಡಿ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸ್ಥಳೀಯ ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಸಿಬ್ಬಂದಿ ಶ್ರಮ ಗಣ್ಯರು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.