ಮಾದಾಪುರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ದಾಖಲೆ ವಿತರಣೆ


Team Udayavani, Mar 13, 2022, 2:34 PM IST

ಮಾದಾಪುರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ದಾಖಲೆ ವಿತರಣೆ

ರಾಮನಗರ: ಕಂದಾಯ ದಾಖಲೆಗಳನ್ನು ಜಿಲ್ಲೆಯ ರೈತರ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌ ಕೆ. ಚಾಲನೆ ನೀಡಿದರು.

ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮನೆ, ಮನೆಗೆ ತೆರಳಿ ದಾಖಲೆಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು ಪಿ.ಎಂ. ಕಿಸಾನ್‌ ಯೋಜನೆಯಡಿ ನೋಂದಣಿ ಮಾಡಿ ಕೊಂಡಿರುವವರಿಗೆ ಉಚಿತವಾಗಿ ಆರ್‌ಟಿಸಿ, ಅಟ್ಲಾಸ್‌, ಜಾತಿ ಮತ್ತು ಆದಾಯ ಪ್ರಮಾಣಪತ್ರ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಪಿ.ಎಂ.ಕಿಸಾನ್‌ ಯೋಜನೆಯಡಿ ನೋಂದಾಯಿಸಿಕೊಳ್ಳದ ಗ್ರಾಮಸ್ಥರು ಮಾ. 21ರಿಂದ 26ರ ವರೆಗೆ ತಮ್ಮ ವ್ಯಾಪ್ತಿಯ ನಾಡ ಕಚೇರಿಗಳಲ್ಲಿ ಉಚಿತವಾಗಿ ದಾಖಲೆ ಗಳನ್ನು ಪಡೆಯಬಹುದು. ಈ ವಿಚಾರದಲ್ಲಿ ಯಾವ ಕುಟುಂಬಕ್ಕೂ ಆತಂಕ ಬೇಡ ಎಂದರು.

ಕಂದಾಯ ದಾಖಲೆ ಮನೆ ಬಾಗಿಲಿಗೆ ಜನಸ್ನೇಹಿ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ ಒಂದು ಬಾರಿಯಾದರೂ ರೈತರು ತಮ್ಮ ದಾಖಲೆ ಪಡೆಯಲು ಸರ್ಕಾರಿ ಕಚೇರಿಗೆತೆರಳುವ ಅವಶ್ಯಕತೆಯಿಲ್ಲ. ಆಡಳಿತ ವರ್ಗವೇ ಅವರ ಮನೆಗೆ ತೆರಳಿ ದಾಖಲೆಗಳನ್ನು ಉಚಿತವಾಗಿ ನೀಡಲಿದೆ. ಇದರಿಂದ ರೈತರು ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬಹುದು. ಜಿಲ್ಲೆಯಲ್ಲಿರುವ 823 ಕಂದಾಯ ಗ್ರಾಮಗಳಲ್ಲಿ ರೈತರ ಮನೆ ಬಾಗಿಲಿಗೆ ದಾಖಲೆಗಳನ್ನು ಒದಗಿಸಲಾಗುತ್ತಿದೆ ಎಂದರು.

ವಿನೂತನ ಯೋಜನೆ ಜಾರಿಗೆ: ಕಂದಾಯ ಇಲಾಖೆ ಸಾರ್ವಜನಿಕರಿಗೆ 54 ವಿವಿಧ ಸೇವೆಗಳನ್ನು ಒದಗಿಸಿತ್ತದೆ. ಗ್ರಾಮೀಣ ಜನರು ಹಾಗೂ ರೈತರಿಗೆ ಉತ್ತಮ ಹಾಗೂ ಪಾರದರ್ಶಕ ಸೇವೆ ನೀಡಲು ಕಂದಾಯ ಇಲಾಖೆ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಜನರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ನೀಡಲು ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ, ಸಾಮಾಜಿಕ ಪಿಂಚಣಿಗಳನ್ನು ಅವರ ಮನೆ ಬಾಗಿಲಿಗೆ ನೀಡಲು ನವೋದಯ ಆ್ಯಪ್‌ ಸೇವೆಗಳು ಜಾರಿಯಲ್ಲಿವೆ ಎಂದರು.

ಈ ಹಿಂದೆ ಆರ್‌.ಟಿ.ಸಿಯನ್ನು ಲಿಖೀತ ರೂಪದಲ್ಲಿ ನೀಡಲಾಗುತ್ತಿತ್ತು. ಇಂದು ಗಣಕೀಕೃತ ರೂಪದಲ್ಲಿ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಕಡಿಮೆ ಸಮಯದಲ್ಲಿ ಸೇವೆ ನೀಡಲು ಎಲ್ಲ ರೀತಿಯಲ್ಲೂ ಪ್ರಯತ್ನಿಸಲಾಗುತ್ತಿದೆ ಎಂದರು.

ಪೋಡಿ ದುರಸ್ತಿ, ಅರಣ್ಯ ಜಮೀನು ಡಿನೋಟಿಫಿಕೇಷನ್‌ ಸೇರಿದಂತೆ ಕೆಲವು ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ರಾಮನಗರ ತಹಶೀಲ್ದಾರ್‌ ವಿಜಯ್ ಕುಮಾರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್‌, ಉಪಾಧ್ಯಕ್ಷೆ ಶೋಭ, ಸದಸ್ಯ ವೆಂಕಟೇಶ್‌ ಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.