ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸೋಣ: ಮಂಜು


Team Udayavani, Feb 17, 2021, 1:11 PM IST

ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸೋಣ: ಮಂಜು

ಮಾಗಡಿ: ನಾನು ಯಾರ ಮರ್ಜಿಗೂ ಕೆಲಸ ಮಾಡಲ್ಲ. ನಾವು, ನೀವು ಸೇರಿ ಜನರ ಸಮಸ್ಯೆ ಬಗೆಹರಿಸುವ ಕೆಲಸ ಮಾಡೋಣ ಎಂದು ಶಾಸಕ ಎ.ಮಂಜುನಾಥ್‌ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ನೇರವಾಗಿ ಉತ್ತರ ಸಿಗಬೇಕು. ಫ‌ಲಾನುಭವಿಗಳು ಹಕ್ಕು ಪತ್ರ ಪಡೆದು 25 ವರ್ಷಗಳಾಗಿದ್ದರೂ, ಅವರ ಹೆಸರಿಗೆ ಖಾತೆ, ಪಹಣೆಯಾಗಿಲ್ಲ. ಜನಪ್ರತಿನಿಧಿಗಳು, ಅಧಿಕಾರಿವರ್ಗ ಒಟ್ಟಾಗಿ ಕ್ಷೇತ್ರದ ಜನರ ಸಮಸ್ಯೆ ನಿವಾರಿಸಲು ಪ್ರಾಮಾಣಿಕ ಕೆಲಸ ಮಾಡೋಣ ಎಂದರು.

ಸರ್ಕಾರಿ ಕೆಚೇರಿಯಲ್ಲಿ ವಿಭಾಗ ಪತ್ರ, ಖಾತೆ, ಪಹಣಿ ಮಾಡದೆ ಸಣ್ಣಪುಟ್ಟ ಸಮಸ್ಯೆಗಳನ್ನು ತೋರಿಸಿ ವಿಳಂಬ ನೀತಿ ಅನುಸರಿಸಿ, ಜನರನ್ನು ಅಲೆಸುತ್ತಿದ್ದಾರೆ ಎಂಬ ಆರೋಪಕೇಳಿ ಬಂದಿದೆ. ಒಂದೆರಡು ಬಾರಿ ಕ್ಷಮೆ ಇರು ತ್ತದೆ.ಮೂರನೇ ಬಾರಿ ಕ್ಷಮೆಯಿಲ್ಲ. ಅರ್ಥ ಮಾಡಿ ಕೊಂಡು ಅಧಿಕಾರಿಗಳು ಕೆಸಲ ಮಾಡಬೇಕು. ಇದಕ್ಕಾ ಗಿಯೇ ಎಲ್ಲಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಮ್ಮುಖ ದಲ್ಲಿಯೇಪರಿಹಾರ ದೊರಕಿಸಿಕೊಡಲು ಜನ ಸ್ಪಂದನಾ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.

ಕಳ್ಳರು, ದರೋಡೆಕೋರರನ್ನು ಹಿಡಿಯಿರಿ: ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ ಹೆಚ್ಚುತ್ತಿದೆ. ರಾತ್ರಿ ಬೀಟ್‌ ಮಾಡುತ್ತಿಲ್ಲ. ತರಕಾರಿ, ಹೂ, ತರಲು ಮಾರುಕಟ್ಟೆ ಬರುವ ಬೈಕ್‌ ಸವಾರರಿಗೆ ಸುಮ್ಮನೇ 500 ರೂ. ದಂಡ ವಿಧಿಸಲಾಗುತ್ತಿದೆ ಎಂದು ಅನೇಕ ದೂರು ಕೇಳಿ ಬರುತ್ತಿದೆ. ದಂಡ ವಿಧಿಸುವುದು ಬಿಡಿ. ಕಳ್ಳರು, ದರೋಡೆಕೋರರನ್ನು ಹಿಡಿದು ಸೂಕ್ತ ಕಾನೂನು ಕ್ರಮಜರುಗಿಸಿ ಎಂದು ಪಿಎಸ್‌ಐಗೆ ತಾಕೀತು ಮಾಡಿದರು.

ಹಕ್ಕುಪತ್ರಗಳ ವಿತರಣೆ: ಯಾರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆಯೋ, ಅಂತವರಿಗೆ ದಾಖಲೆ ನೀಡಲು ಸರ್ಕಾರ ಆದೇಶದ 94(ಸಿ) ಹಕ್ಕುಪತ್ರ ವಿತರಿಸಲಾಗಿದೆ. ತಾಲೂಕಿನಲ್ಲಿಅರ್ಹರಿಗೆ 80 ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕಸಬಾ ಹೋಬಳಿ 24, ಮಾಡಬಾಳ್‌ ಹೋಬಳಿ 16, ಕುದೂರು ಹೋಬಳಿ 36, ತಿಪ್ಪಸಂದ್ರ ಹೋಬಳಿ ನಾಲ್ಕು ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು. ನೂರಾರು ಸಾರ್ವಜನಿಕರು ಶಾಸಕರಿಗೆ ತಮ್ಮ ಅಹವಾಲು ಸಲ್ಲಿಸಿದರು. ಹೆಚ್ಚು ಜನ ಸೇರಿದೆ ಎಂದು ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ವಾರಕ್ಕೊಮ್ಮೆ ಹೋಬಳಿ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ರೂಪಿಸಲಾಗಿದೆ. ಜನರು ಅಲ್ಲಿಯೇ ತಮ್ಮ ದೂರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಪ್ರಸಾದ್‌, ತಾಪಂ ಇಒ ಟಿ.ಪ್ರದೀಪ್‌,ಶಿರಸ್ತೇದಾರ್‌ ಜಗದೀಶ್‌, ಪಿಎಸ್‌ಐ ಶ್ರೀಕಾಂತ್‌, ವಲಯಆರಣ್ಯಾಧಿಕಾರಿ ಪುಷ್ಪ ಲತಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಬಿ.ಎನ್‌. ನಾಗರಾಜು, ಪುರಸಭಾಧ್ಯಕ್ಷೆಭಾಗ್ಯಮ್ಮ ನಾರಾಯಣಪ್ಪ, ಸದಸ್ಯ ರಾದ ಎಂ.ಎನ್‌. ಮಂಜುನಾಥ್‌, ಅನಿಲ್‌ಕುಮಾರ್‌, ಕೆ.ವಿ.ಬಾಲರಘು,ಕಾಂತರಾಜು, ನಾಗರತ್ನಮ್ಮ, ಹೇಮಲತಾ, ತಾಲೂಕು ಜೆಡಿಎಸ್‌ ಯುವಾಧ್ಯಕ್ಷ ವಿಜಯಕುಮಾರ್‌, ಉಮೇಶ್‌, ರಂಗಣ್ಣ, ನರಸಿಂಹಯ್ಯ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.