Karnataka Polls ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು: ಡಿಕೆ ಶಿವಕುಮಾರ್
Team Udayavani, May 10, 2023, 10:08 AM IST
ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತ ಮನೆದೇವರ ಪೂಜೆ ಮಾಡಿದರು. ಪತ್ನಿ ಉಷಾ ಶಿವಕುಮಾರ್, ಪುತ್ರ ಆಕಾಶ್ ಜೊತೆಗೆ ಕನಕಪುರದ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಡಿಕೆಶಿ, ಇಂದು ಮನೆ ದೇವರು ಕೆಂಕೇರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದೇವೆ. ನನ್ನ ಸ್ವಗ್ರಾಮದಲ್ಲಿ ಮತದಾನ ಮಾಡುತ್ತೇನೆ. ನನ್ನ ಮಗ ಆಕಾಶ್ ಕೆಂಪೇಗೌಡ ಮೊದಲನೇ ಬಾರಿಗೆ ಮತದಾನ ಮಾಡುತ್ತಿದ್ದಾನೆ. ಉತ್ಸಾಹದಿಂದ ಮತದಾನ ಮಾಡಲು ಬಂದಿದ್ದಾನೆ ಎಂದರು.
ಇದನ್ನೂ ಓದಿ:ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ
ರಾಜ್ಯದ ಎಲ್ಲಾ ಮತದಾರರೂ ಕೂಡಾ ತಪ್ಪದೇ ಮತದಾನ ಮಾಡಬೇಕು. ರಾಜ್ಯದಲ್ಲಿ ಬದಲಾವಣೆ ತರಬೇಕು. ಯುವಕರು ವಿದ್ಯಾವಂತರಿದ್ದಾರೆ, ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಮೊದಲ ಬಾರಿಗೆ ಮತ ಹಾಕುವವರು ಹೆಚ್ಚು ಜನ ಇರುವುದು ಬಹಳ ಸಂತೋಷ, ಅವರಿಗೆ ಶುಭವಾಗಲಿ. ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದರು.
ಇಂದು ಮತದಾನ ನಡೆಯುತ್ತಿದೆ. 13ನೇ ತಾರೀಕು ಮತ ಎಣಿಕೆ ನಡೆಯುತ್ತದೆ. ಮತದಾರರ ಆಶೀರ್ವಾದ ಯಾರಿಗೆ ಎಂಬ ಉತ್ತರ ಸಿಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ