ಸರ್ಕಾರ ನಂಬಿದರೆ ಜೀವ ಉಳಿಯದು


Team Udayavani, Apr 25, 2021, 1:32 PM IST

ಸರ್ಕಾರ ನಂಬಿದರೆ ಜೀವ ಉಳಿಯದು

ಚನ್ನಪಟ್ಟಣ: ಈ ಸರ್ಕಾರವನ್ನು ನಂಬಿಕೊಂಡು ಕುಳಿತುಕೊಂಡರೆ ನಿಮ್ಮ ಜೀವ ಉಳಿಯದು, ಕೋವಿಡ್‌ ನಿಯಮಗಳನ್ನು ಪಾಲಿಸುವ ಜತೆಗೆ, ನಿಮ್ಮ ಎಚ್ಚರಿಕೆಯಲ್ಲಿ ನೀವು ಇರುವುದು ಒಳ್ಳೆಯದು ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸರ್ಕಾರ ಯಾವುದಕ್ಕೂ ಸಜ್ಜಾಗಿಲ್ಲ. ಕೋವಿಡ್ ಎರಡನೇ ಅಲೆಯ ಭೀತಿ ಇದ್ದರೂ ಉದಾಸೀನ ಮಾಡಿದೆ.ಕೋವಿಡ್‌ ಪ್ರಕರಣಗಳು ಹೆಚ್ಚಾದ ನಂತರನಿಯಂತ್ರಣಕ್ಕಾಗಿ ಪರಡಾಡುತ್ತಿದೆ. ಮೊದಲೇಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೆ ಇಷ್ಟೊಂದು ಅನಾಹುತಗಳು ಆಗುತ್ತಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ವ್ಯಾಕ್ಸಿನ್‌ ಬಂತೆಂದು ಮೈಮರೆತರು: ವ್ಯಾಕ್ಸಿನ್‌ ಬಂತೆಂದು ಸರ್ಕಾರ ಮೈಮರೆಯಿತು. ಕೋವಿಡ್ ಕಟ್ಟು ಪಾಡುಗಳನ್ನು ಸಡಿಲಿಸಿತು. ಸರ್ಕಾರ ಮೈಮರೆತಿದ್ದರಿಂದಲೇ ಪ್ರಕರಣಗಳು ಹೆಚ್ಚಾಗುತ್ತಿದ್ದು,ಈಗ ಆಗುತ್ತಿರುವ ತೊಂದರೆಗಳಿಗೆ ಸರ್ಕಾರವೇ ಹೊಣೆಯಾಗಿದೆ ಎಂದು ಕಿಡಿಕಾರಿದರು.

ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕಡೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಉತ್ತಮ ಮತ್ತು ಸ್ವತ್ಛ ಆಡಳಿತದ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್‌ಅನ್ನು ಬೆಂಬಲಿಸಲು ಜನ ಉತ್ಸುಕರಾಗಿದ್ದಾರೆ. ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ನಂತರನಡೆಯುತ್ತಿರುವ ಮೊದಲ ನಗರಸಭೆ ಚುನಾವಣೆ ಇದಾಗಿದ್ದು, ನಗರದ ಮತದಾರರು ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಕಳೆದ ಬಾರಿ ಊಟ ನೀಡಿದವರಿಗೆ ದುಡ್ಡು ನೀಡಿಲ್ಲ:

ಜಿಲ್ಲೆಯಲ್ಲಿ ಕೋವಿಡ್‌ ಸೋಕಿಂತರ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದು ಆತಂಕಕಾರಿಯಾಗಿದೆ.ಜಿಲ್ಲೆಯ ವಿವಿಧ ಕೋವಿಡ್‌ ಸೆಂಟರ್‌ಗಳಲ್ಲಿ 800ರೋಗಿಗಳು ದಾಖಲಾಗಿದ್ದಾರೆ. ಐಸಿಯು, ಆಕ್ಸಿಜನ್‌ವ್ಯವಸ್ಥೆ ಸರಿಯಾಗಿಲ್ಲ. ಜನ ರಾಜರಾಜೇಶ್ವರಿ ಆಸ್ಪತ್ರೆ ಬೇಡವೆನ್ನುತ್ತಿದ್ದಾರೆ.

ಆಸ್ಪತ್ರೆಯಲ್ಲಿರುವವರಿಂದ ಊಟದ ಕುರಿತು ದೂರುಗಳು ಬರುತ್ತಿವೆ. ಹೋದ ಸಾರಿ ಕೋವಿಡ್‌ಸೆಂಟರ್‌ಗಳಿಗೆ ಊಟ ಸಪ್ಲೆç ಮಾಡಿದವರಿಗೆ ಇನ್ನೂ ದುಡ್ಡು ಕೊಟ್ಟಿಲ್ಲ. ಒಟ್ಟಿನಲ್ಲಿ ಕೋವಿಡ್‌ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಎಸ್‌.ರವಿ, ಕೆಪಿಸಿಸಿ ಸದಸ್ಯ ಟಿ.ಕೆ.ಯೋಗೀಶ್‌ ಜಿಪಂಸದಸ್ಯ ಗಂಗಾಧರ್‌, ಗ್ರಾಮಾಂತರ ಕಾಂಗ್ರೆಸ್‌ ಅಧ್ಯಕ್ಷ ಪ್ರಮೋದ್‌, ನಗರ ಘಟಕದ ಅಧ್ಯಕ್ಷ ಸುನೀಲ್‌, ಮಾಜಿ ಅಧ್ಯಕ್ಷ ಶಿವಮಾಧು, ಕುಮಾರ್‌, ನಗರಸಭೆ ಮಾಜಿ ಸದಸ್ಯ ಮುದ್ದುಕೃಷ್ಣ ಮುಂತಾದವರು ಇದ್ದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.