ದೇವೆಗೌಡರ ಕಾಲಿಗೆರಗಿದ ಡಿ.ಕೆ.ಸುರೇಶ್


Team Udayavani, Mar 25, 2019, 3:44 PM IST

deve-kal

ಕನಕಪುರ: ಹಳೆ ಮೈಸೂರು ಭಾಗದಲ್ಲಿ ರಾಜಕೀಯ ದೃವೀಕರಣಕ್ಕೆ ಹೆಬ್ಟಾಗಿಲಾದ ರಾಮನಗರ ಜಿಲ್ಲೆಯಲ್ಲಿ ಬದ್ಧ ವೈರಿಗಳಂತೆ ಕಾದಾಡುತ್ತಿದ್ದ ಎಚ್‌ಡಿಡಿ ಮತ್ತು ಡಿಕೆಶಿ ಕುಟುಂಬ ಕಾದಾಟ ಬಿಟ್ಟು ಕೈ ಜೋಡಿಸಿದೆ. ಸಂಸದ ಡಿ.ಕೆ.ಸುರೇಶ್‌ ಇತ್ತೀಚೆಗೆ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಗರಿಗೆದರಿದ ಚುನಾವಣೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ರಾಜಕಾರಣಿಗಳ ನಡೆಗಳು ಕನಕಪುರದಲ್ಲಿ ಚರ್ಚೆಗೆ ಮುನ್ನುಡಿ ಬರೆದಿದೆ. ಮತ್ತೂಂದೆಡೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಯನ್ನು ಸಹಿಸಿಕೊಳ್ಳದ ತಳಮಟ್ಟದ ಕಾರ್ಯಕರ್ತರಲ್ಲಿ ಅಸಮಧಾನ ಹುಟ್ಟು ಹಾಕಿರುವುದು ಎರಡು ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ ಪರಿಣಮಿಸಿದೆ.

ದೇವೇಗೌಡರ ಕಾಲಿಗೆ ಬಿದ್ದ ಮರ್ಮ ಏನು?: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಮತ್ತು ಅದಕ್ಕೂ ಹಿಂದೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಮಾತಿನ ಯುದ್ಧ ಮಾಡುತ್ತಿದ್ದರು. ಕಾಂಗ್ರೆಸ್‌ ಪ್ರಮುಖರು ಮಾಜಿ ಪ್ರಧಾನಿ ದೇವೇಗೌಡರನ್ನು ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯನಿಗೆ ಹೋಲಿಕೆ ಮಾಡಿ ಜರಿಯುತ್ತಿದ್ದವರು, ಇಂದು ಈ ಎಲ್ಲಾ ವೈರತ್ವವನ್ನು ಬದಿಗಿಟ್ಟುರುವುದು,

ಎಚ್‌ಡಿಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಕನಕಪುರ ರಾಜಕಾರಣದ ಮಟ್ಟಿಗೆ ಚರ್ಚೆಯ ವಿಷಯವಾಗಿದೆ. ಸಂಸದರಾಗಿ ಪುನರಾಯ್ಕೆಗೆ ಡಿ.ಕೆ.ಸುರೇಶ್‌ ದೇವೇಗೌಡರ ಕಾಲು ಹಿಡಿದಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದ ವಿಧನಸಭಾ ಚುನಾವಣೆಯಲ್ಲಿ 47ರಿಂದ 50 ಸಾವಿರ ಮತಗಳು ಜೆಡಿಎಸ್‌ಗೆ ಹೋಗಿವೆ. ಪಕ್ಷ ಕಾಯುವ ಒಬ್ಬ ಮುಖಂಡನೂ ಇಲ್ಲದ ಕ್ಷೇತ್ರದಲ್ಲಿ ಅಷ್ಟು ಮತಗಳು ಹೇಗೆ ಹೋದವು ಎಂದು ಡಿ.ಕೆ.ಸು ತಮ್ಮ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

ಅವು ಸ್ವಾಭಿಮಾನದ ಮತಗಳೂ ನೀವು ಜೆಡಿಎಸ್‌ ಕಾರ್ಯಕರ್ತರ ಜೊತೆಯಲ್ಲಿ ಗಲಾಟೆ ಮಾಡಿ, ಕಟ್ಟಿಕೊಂಡ ವೈರತ್ವದ ಮತಗಳು ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನೇ ತರಾಟೆಗೆ ತೆಗೆದುಕೊಂಡಿದ್ದರು. ಈ ಚುನಾವಣೆಯಲ್ಲಿ ಆ ಸ್ವಾಭಿಮಾನದ ಮತಗಳು ತಮ್ಮತ್ತ ಸೆಳೆಯಲು ಡಿ.ಕೆ.ಸುರೇಶ್‌ ದೇವೇಗೌಡರ ಮುಂದೆ ಸಾಷ್ಟಾಂಗ ಹಾಕಿದ್ದಾರೆ ಎಂಬ ಮಾತುಗಳು ತಾಲೂಕಿನಲ್ಲಿ ಕೇಳಿ ಬಂದಿದೆ.

ಕಾನೂನು ಕುಣಿಕೆಗೂ ಎಚ್‌ಡಿಕೆ ಮುಂದಾಗಿದ್ದರು: ಎಚ್‌.ಡಿ.ಕುಮಾರಸ್ವಾಮಿ ಹಿಂದೊಮ್ಮೆ ಡಿಕೆಶಿಯವರನ್ನು ಕಾನೂನು ಕುಣಿಕೆಗೆ ಸಿಲುಕಿಸಿ ಕನಕಪುರದ ಆಪ್ತರಿಂದ ಹೈಕೋರ್ಟ್‌ ಮತ್ತು ಸುಪ್ರಿಂ ಕೋರ್ಟ್‌ನಲ್ಲಿ ಪ್ರಕರಣ ಹಾಕಿಸಿದ್ದರು. ರಾಜ್ಯದ ಪ್ರತಿಷ್ಠಿತ ಮಠಾಧೀಶರೊಬ್ಬರ ಮಧ್ಯಸ್ಥಿತಿಕೆಯಿಂದ ರಾಜಿ ಸಂಧಾನದ ಮೂಲಕ ಈ ಪ್ರಕರಣಕ್ಕೆ ಅಂತ್ಯ ಕಂಡಿತ್ತು. ಇಷ್ಟು ವಿರೋಧ ಇದ್ದ ಇಬ್ಬರು ಇಂದು ಒಟ್ಟಾಗಿರುವುದು ಕಾರ್ಯಕರ್ತರನ್ನು ದಂಗಾಗಿಸಿದೆ.

ಕಾರ್ಯಕರ್ತರಿಗೆ ಮುಜುಗರ: ರಾಜ್ಯ ರಾಜಕಾರಣದಲ್ಲಿ ನುರಿತ ರಾಜಕಾರಣಿ ಮತ್ತು ರಾಜಕೀಯ ಪಟ್ಟುಗಳ ಚಾಣಾಕ್ಷರು ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್‌ ತನ್ನ ಚಾಣಾಕ್ಷ ನಡೆಗಳಿಂದಲೇ ತಮ್ಮ ರಾಜಕೀಯ ನೆಲೆಗಟ್ಟನ್ನು ಬದ್ರಮಾಡಿಕೊಂಡರೆ ಇತ್ತ ಸಹೋದರ ಡಿ.ಕೆ. ಸುರೇಶ್‌ ಅವರ ನಡೆಯಿಂದಲೇ ಕಾರ್ಯಕರ್ತರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುವಂತೆ ಮಾಡುತ್ತಿದ್ದರು.

ಇಂದು ಎಚ್‌ಡಿಡಿ ಕಾಲಿಗೆ ಬಿದ್ದದ್ದು ಮತ್ತು ತಲೆ ತಗ್ಗಿಸಿ ನಿಂತದ್ದನ್ನು ಕಂಡ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ ಕಾರ್ಯಕರ್ತರನ್ನು ಲೇವಡಿ ಮಾಡುತ್ತಿರುವುದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಮುಜುಗರ ತರಿಸಿದ್ದು, ಅನ್ನುವ ಹಾಗಿಲ್ಲ ಅನುಭವಿಸುವ ಹಾಗಿಲ್ಲ ಎನ್ನುವಂತಾಗಿದೆ. ಕಾರ್ಯಕರ್ತರ ಸ್ಥಿತಿ.

ಡಿ.ಕೆ.ಶಿ ಹುಟ್ಟನ್ನೇ ಪ್ರಶ್ನಿಸಿದ್ದರು?: ಕಳೆದ ಕೆಲ ವರ್ಷಗಳಿಂದ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅಂದು ಸಹ ಮುಖ್ಯಮಂತ್ರಿಯಾಗಿದ್ದರೂ ಅಂದು ಡಿಕೆಶಿ ವಿರುದ್ಧ ಯಾವ ಮಟ್ಟದ ವೈರತ್ವ ಇತ್ತು ಎಂದರೆ ಬಹಿರಂಗವಾಗಿ ಡಿಕೆಶಿ ಹುಟ್ಟನ್ನೇ ಪ್ರಶ್ನಿಸಿ, ರಾಜ್ಯವ್ಯಾಪಿ ಚರ್ಚೆ ಹುಟ್ಟುಹಾಕಿ ಸಾತನೂರಿನಲ್ಲಿ ನಾಟಕೀಯ ಬೆಳವಣಿಗೆಗಳು ನಡೆದು ಹೊಗಿದ್ದವು. ಇಂದು ಅವೆಲ್ಲವನ್ನು ಮರೆತು ಕೈಕೈ ಜೋಡಿಸಿರುವುದು ಕಾರ್ಯಕರ್ತರಿಗೆ ಅರಗಿಸಿಕೊಳ್ಳಲಾಗದ ಸತ್ಯವಾಗಿದೆ.

* ಉಮೇಶ್‌ ಬಾಣಗಹಳ್ಳಿ

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.