ಸಾಲ ಕೊಟ್ರೆ ಮನ್ನಾ  ಯಾವಾಗ ಅಂತಾರೆ


Team Udayavani, Mar 4, 2019, 10:35 AM IST

dk.jpg

ಕುದೂರು: ರೈತರಿಗೆ ಸಾಲ ನೀಡಿದರೆ ಸರ್ಕಾರ ಯಾವಾಗ ಮನ್ನಾ ಮಾಡುತ್ತದೆ ಎಂದುಹೇಳುತ್ತಾರೆ. ಆದರೆ, ಸ್ತ್ರೀಶಕ್ತಿ ಸಂಘಗಳಿಗೆನೀಡಿದರೆ ಸಾಲ ಶೇ.100 ಪಾವತಿಸುತ್ತಾರೆ. ಅವರ ನಿಷ್ಠೆ ತೋರುತ್ತದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಕುದೂರು ಹೋಬಳಿಯ ನಾರಸಂದ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಮುದಾಯ ಬಂಡಾವಳ ವಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ 2 ವರ್ಷಗಳಿಂದ 112 ಕೋಟಿ ರೂ. ರೈತರ ಸಾಲ ಮನ್ನಾವಾಗಿದೆ. ಇಷ್ಟು ಆಗಿದ್ದರೂ ಮತ್ತೆ ಯಾವಾಗ ಸಾಲ ಕೊಡುತ್ತಿರಾ ರಾಹುಲ್‌ ಗಾಂಧಿ ಸರ್ಕಾರ ಬರುತ್ತಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಾ, ಯಾರು ಸಾಲ ಮನ್ನಾಮಾಡುತ್ತಾರೆ. ಇದನ್ನೇ ಕೇಳುತ್ತಾರೆ ವಿನಃ ಕೃತಜ್ಞತೆಯನ್ನು ತೋರಿಸುವುದೇ ಇಲ್ಲ. ಆದರೆ, ಸ್ತ್ರೀ ಶಕ್ತಿ ಸಂಘಗಳಿಗೆ ನೀಡಿದ ಸಾಲವನ್ನು ಪಾವತಿ ಮಾಡುತ್ತಾರೆ. ಸರ್ಕಾರ ಇಂತಹವರಿಗೆ ಹೆಚ್ಚಿನ ಒತ್ತನ್ನು ಕೊಡಬೇಕು ಎಂದು ಹೇಳಿದರು.

ಸಣ್ಣಕೈಗಾರಿಕೆ ಸ್ಥಾಪಿಸಿ: ರಾಜ್ಯ ಸರ್ಕಾರಶೂನ್ಯ ಬಡ್ಡಿ ದರದಲ್ಲಿ ತಮ್ಮ ಉಳಿತಾಯದ ಆಧಾರದ ಮೇಲೆ ಸಾಲ ವಿತರಣೆಮಾಡುತ್ತಿದ್ದು, ಸ್ತ್ರೀಶಕ್ತಿ ಸಂಘದವರು ಸಣ್ಣ ಕೈಗಾರಿಕೆಗಳ ಮೂಲಕ ಹೆಚ್ಚಿನ ಪದಾರ್ಥಗಳನ್ನು ಉತ್ಪಾದಿಸಿ ಸರ್ಕಾರದ ಮೂಲಕವೇ ಮಾರಾಟ ಮಾಡಿ ಅರ್ಥಿಕವಾಗಿ ಸ್ತ್ರೀ mಶಕ್ತಿ ಸಂಘಗಳು ಮುಂದೆ ಬರಲಿ ಎಂದರು.

ರಸ್ತೆ ಕಾಮಗಾರಿಗೆ ಚಾಲನೆ: ಶಾಸಕ ಎ. ಮಂಜುನಾಥ್‌ ಮಾತನಾಡಿ, ಎಸ್‌.ಎಂ.ಕೃಷ್ ಮಖ್ಯಮಂತ್ರಿಗಳಾಗಿದ್ದಾಗ ಸ್ತ್ರೀ ಶಕ್ತಿ ಸಂಘಗಳನ್ನು ಆರಂಭಿಸಿದ್ದರು. ಈಗ ಸ್ತ್ರೀ ಶಕ್ತಿ ಸಂಘಗಳು ಬಹಳಷ್ಟು ಬಲಿಷ್ಠವಾಗಿದ್ದು, ಸಂಜೀವಿನಿ ಯೋಜನೆಯಡಿ ಒಕ್ಕೂಟದಿಂದ 10 ಲಕ್ಷ ರೂ.ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ನೀಡಲಾಗಿದೆ. ಈ ಹಣದಲ್ಲ ಹೈನುಗಾರಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಆದಾಯ ಬರುವ ಉದ್ಯಮಗಳಲ್ಲಿ ತೊಡಗಿಸಿ ಸಾಲ ಪಾವತಿ ಮಾಡಬೇಕು. ಮಾಡ್‌ಬಾಳ್‌ನಲ್ಲಿ ಬಿಡಿಸಿಸಿ ಬ್ಯಾಂಕ್‌ನ ಹೊಸ ಖಾತೆ ತೆರೆಯಬೇಕು. ಮುಂದಿನ ಗುರುವಾರ ಮುಖ್ಯಮಂತ್ರಿ  ಎಚ್‌.ಡಿ.ಕುಮಾರಸ್ವಾಮಿಅವರಿಂದ ನಾಲ್ಕುಪಥದ ರಸ್ತೆ ಕಾಮಗಾರಿಗೆಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸಾಲ ಮನ್ನಾ ಹಾಗಲ್ಲ: ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಸ್‌.ರವಿ ಮಾತನಾಡಿ, 15 ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಬಿಡಿಸಿಸಿ ಬ್ಯಾಂಕ್‌ ವತಿಯಿಂದ ಸಾಲ ಕೊಡುತ್ತಿದ್ದೇವೆ. ಬೇರೆ ಸಂಸ್ಥೆಗಳಲ್ಲಿ  ವಾರ್ಷಿಕ 14 ರಿಂದ 15 ರೂ. ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತಿದ್ದಾರೆ. ನಮ್ಮ ಬಳಿಯೇ ಸ್ತ್ರೀ ಶಕ್ತಿ ಸಂಘಗಳು ಸಾಲ ಪಡೆಯಬೇಕು. ಯಾವುದೇ ಕಾರಣಕ್ಕೂ ಸಾಲ ಮನ್ನಾವಾಗು ವುದಿಲ್ಲ. ತಿಪ್ಪಸಂದ್ರ ಹೋಬಳಿಯಲ್ಲಿ ಬಿಡಿಸಿಸಿ ಬ್ಯಾಂಕ್‌ ಶಾಖೆ ತೆರೆಯುವುದು ಅವಶ್ಯಕತದೆ ಎಂದು ಹೇಳಿದರು.ಜಿಪಂ ಸದಸ್ಯ ಎಚ್‌.ಎನ್‌.ಅಶೋಕ್‌ಮಾತನಾಡಿ, ಹಿಂದಿನ ಕಾಂಗ್ರೆಸ್‌ ಸರ್ಕಾರ ಹಾಗೂ ಈಗಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾಗಡಿ ತಾಲೂಕಿನಲ್ಲಿ 2 ವರ್ಷದ ಅವಧಿಯಲ್ಲಿ 112 ಕೋಟಿ ರೂ.ಸಾಲ ಮನ್ನಾವಾಗಿದ್ದು, ಈ ವರ್ಷ 72 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. 2 ಸರ್ಕಾರಗಳು ರೈತರ ಮೇಲೆ ಇಟ್ಟಿರುವ ಕಾಳಜಿಯನ್ನು ತಿಳಿಯಬಹುದು ಎಂದು ತಿಳಿಸಿದರು.

ಗಾರ್ಮೆಂಟ್ಸ್‌ ಸ್ಥಾಪಿಸಿ: ಜಿಪಂ ಸದಸ್ಯೆ ದಿವ್ಯಾ ಗಂಗಾಧರ್‌ ಮಾತನಾಡಿ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲವನ್ನು ಕೊಡುತ್ತಿದ್ದಾರೆ. ಇದರ ಬದಲು ಸಂಸದ ಡಿ.ಕೆ.ಸುರೇಶ್‌ ಮತ್ತು ಶಾಸಕ ಎ.ಮಂಜು ನಾಥ್‌ ತಿಪ್ಪಸಂದ್ರ ಹೋಬಳಿಯಲ್ಲಿ ಒಂದು ಗಾರ್ಮೆಂಟ್ಸ್‌ ನಿರ್ಮಾಣ ಮಾಡಿದರೇ ಭಾಗದ ಮಹಿಳೆಯರಿಗೆ ಅರ್ಥಿಕ ಬೆಂಬಲ ನೀಡಿದಂತಾಗುತ್ತದೆ. ಸಾಲ ಪಡೆಯುವುದು ತಪ್ಪುತ್ತದೆ, ಇದನ್ನು ಕೂಡಲೇ ಮಾಡಬೇಕು ಎಂದು ಒತ್ತಾಯಿಸಿದರು.

ಸೌಲಭ್ಯ ವಿತರಣೆ: ಮಾಗಡಿ ತಾಲೂಕಿನ ಸಂಕೀಘಟ್ಟ, ಸಾತನೂರು, ನೇತೇನಹಳಿÉ, ಸೀಗೆಕುಪ್ಪೆ, ಗ್ರಾಪಂನ ಸ್ತ್ರೀ ಶಕ್ತಿ ಸಂಘಗಳಿಗೆ ಸಂಜೀವಿನಿ ಯೋಜನೆಯಡಿ ಸಮುದಾಯ ಬಂಡಾವಳ ನಿಧಿಯ 10 ಕೋಟಿ ರೂ. ಸಾಲದ ಚೆಕ್‌ನ್ನು ವಿತರಿಸಲಾಯಿತು.

ಮಾದಿ ಗೊಂಡನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆಂಚೇಗೌಡ ಕುದೂರು ಹೋಬಳಿ ವ್ಯಾಪ್ತಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಯಡಿ ಬಾಂಡ್‌ ವಿತರಿಸಿದರು. ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಮೂರ್ತಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ರವೀಶಯ್ಯ, ಬಮೂಲ್‌ ನಿರ್ದೇಶಕ ನರಸಿಂಹಮೂರ್ತಿ, ಜಿಪಂ ಸದಸ್ಯ ಅಣ್ಣೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯನಾಯ್ಕ, ತಾಪಂ ಅಧ್ಯಕ್ಷ ಶಿವರಾಜು, ನಾರಸಂದ್ರ ಗ್ರಾಪಂ ಅಧ್ಯಕ್ಷೆ ರಂಗಮ್ಮ ಇತರರು ಇದ್ದರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.