ರೈತರನ್ನು ಕಚೇರಿಗೆ ಸುತ್ತಿಸಬೇಡಿ: ಶಾಸಕ ಮಂಜು ತಾಕೀತು


Team Udayavani, Jun 24, 2019, 12:03 PM IST

rn-tdy-1..

ಮಾಗಡಿ: ರೈತರನ್ನು ಕಚೇರಿಗೆ ಸುತ್ತಿಸಬೇಡಿ, ಎಲ್ಲಾ ಪಂಪ್‌ಸೆಟ್‌ಗಳಿಗೆ ಅಗತ್ಯ ಟೀಸಿಗಳನ್ನು ಶೀಘ್ರ ಅಳವಡಿಸಿ 2 ತಿಂಗಳೊಳಗಾಗಿ ವಿದ್ಯುತ್‌ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಎ.ಮಂಜು ಬೆಸ್ಕಾಂ ಇಇ ಚಿಕ್ಕೇಗೌಡ ಗೆ ತಾಕೀತು ಮಾಡಿದರು.

ತಾಪಂ ಸಭಾಂಗಣದಲ್ಲಿ ಉಪವಿಭಾಗ ಬೆಸ್ಕಾಂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲೆಲ್ಲೂ ವಿದ್ಯುತ್‌ ಸಮಸ್ಯೆ ತಾಂಡವಾಡುತ್ತಿದೆ. ಸಮರ್ಪಕವಾಗಿ ಉತ್ತಮ ಸೇವೆ ಕೊಡುತ್ತಿದ್ದೇವೆ ಎಂದು ಆತ್ಮವಲೋಕನ ಮಾಡಿಕೊಳ್ಳಬೇಕಿದೆ. ಕಳೆದ ವರ್ಷದಿಂದ ಟೀಸಿಗಾಗಿ ರೈತರು ಅಲೆದು ಅಲೆದು ಸುಸ್ತಾಗಿ ಹೋಗಿದ್ದಾರೆ. ಟೀಸಿ ಸಮಸ್ಯೆ ಇದ್ದರೆ ತನ್ನ ಗಮನಕ್ಕೆ ತನ್ನಿ. ಸರ್ಕಾರದಿಂದ ಏನೆಲ್ಲಾ ಸವಲತ್ತುಗಳು ಬೇಕೋ ಎಲ್ಲವನ್ನೂ ಒದಗಿಸುತ್ತೇನೆಂದು ಹೇಳಿದರು.

ಎಲ್ಲೆಲ್ಲಿ ಸಮಸ್ಯೆಗಳಿವೆ. ಬೆಸ್ಕಾಂ ಸಂಬಂಧ ಪಟ್ಟ ಏರಿಯಾದ ಲೈನ್‌ ಮ್ಯಾನ್‌ಗಳು ಪಟ್ಟಿ ಮಾಡಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದರೆ ಅವರು ರೈತರೊಂದಿಗೆ ಚರ್ಚಿಸಿ ಅವರ ಸಮಸ್ಯೆ ಬಗೆಹರಿ ಸುತ್ತಾರೆ. ಪ್ರತಿ ತಿಂಗಳು ಈ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು. ಮುಂದಿನ ಸಭೆಯಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪರಿಹಾರ ಹುಡು ಕಲಾಗುವುದು ಎಂದು ತಿಳಿಸಿದರು.

ಯೋಜನೆ ಅನುಷ್ಠಾನಗೊಳಿಸಿ: ಕೇಂದ್ರ ಸರ್ಕಾರದ ದೀನದಯಾಳು ಉಪಾಧ್ಯಾಯ ಯೋಜನೆಯಡಿ ಮಾಗಡಿ ಉಪವಿಭಾಗಕ್ಕೆ 1.89 ಕೋಟಿ ರೂ. ಹಣ ಬಿಡುಗಡೆಯಾಗಿದೆ ಎಂದು ಇಇ ಚಿಕ್ಕೇಗೌಡ ಶಾಸಕ ಗಮನಕ್ಕೆ ತಂದರು. ಈ ಕುರಿತು ಶಾಸಕರು ಚರ್ಚಿಸಿ ಕ್ಷೇತ್ರದಲ್ಲಿ ಎಲ್ಲೆಲ್ಲಿ ಬಡವರ ಮನೆಗಳಿಗೆ ವಿದ್ಯುತ್‌ ಸಂಪರ್ಕಗಳು ಬೇಕಿದೆಯೋ ಅಲ್ಲಿಗೆ ತೆರಳಿ ಸರ್ವೇ ಮಾಡಿ ಶೀಘ್ರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ ಎಂದು ಸೂಚಿಸಿದರು. ಈ ವೇಳೆ ಇಇ ಚಿಕ್ಕೇಗೌಡ ಪ್ರತಿಕ್ರಿಯಿಸಿ, 1650 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪ್ರಾವಿಷನ್‌ ಮಾಡಿಕೊಳ್ಳಲಾಗಿದೆ ಎಂದರು.

ಟೀಸಿಗೆ ಸಮಸ್ಯೆಯಿಲ್ಲ: ತಾಲೂಕಿನಲ್ಲಿ ಟೀಸಿಗಳಿಗೆ ಸಮಸ್ಯೆ ಇಲ್ಲ. ರೈತರು ಅಗತ್ಯ ದಾಖಲೆ ನೀಡಿದರೆ ಸಾಕು, ಎಚ್ವಿಡಿಎಸ್‌ ಯೋಜನೆಯಡಿ ಶೀಘ್ರ ಟೀಸಿ ಅಳವಡಿಸಿಕೊಡಲು ಬೆಸ್ಕಾಂ ಇಲಾಖೆ ಸದಾ ಸಿದ್ಧವಿದೆ ಎಂದು ಇಇ ಚಿಕ್ಕೇಗೌಡ ಶಾಸಕರ ಗಮನಕ್ಕೆ ತಂದರು.

ನಿರಂತರ ಜ್ಯೋತಿ: ಇದೊಂದು ವಿಶೇಷ:

ಯೋಜನೆಯಾಗಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಯೋಜನೆ ಹಳ್ಳ ಹಿಡಿಯುತ್ತಿದೆ. ಯಾವುದೇ ಹಳ್ಳಿಗೆ ಹೋದರೂ ಟೀಸಿ ಮತ್ತು ನಿರಂತರ ಜ್ಯೋತಿ ಕುರಿತು ಸಮಸ್ಯೆಗಳನ್ನು ಹೇಳುತ್ತಿದ್ದಾರೆ. ಗುತ್ತಿಗೆದಾರರು ಸುಖಾ ಸುಮ್ಮನೆ ಕಾಲಹರಣ ಮಾಡದೆ, ರೈತರಿಗೆ ತಪ್ಪು ಮಾಹಿತಿ ನೀಡುವುದನ್ನು ಬಿಟ್ಟು, ನಿರಂತರ ಜ್ಯೋತಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಗುತ್ತಿಗೆ ದಾರರಿಗೆ ಶಾಸಕರು ತಾಕೀತು ಮಾಡಿ ದರು. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಜರು ಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ಥಳ ಗುರುತಿಸಿ: ತಾಲೂಕಿನ ತಿಪ್ಪಸಂದ್ರ ಮತ್ತು ಸೋಲೂರು ಹೋಬಳಿ ವ್ಯಾಪ್ತಿಯ ವಿದ್ಯುತ್‌ ಸ್ಟೇಷನ್‌ಗಳು ಬಾಡಿಗೆ ಕಟ್ಟಡದಲ್ಲಿ ಸೇವೆ ನೀಡುತ್ತಿವೆ. ಆಯಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಗುರುತಿಸಿದರೆ ಸ್ಟೇಷನ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗು ವುದು ಎಂದು ಶಾಸಕರು ಬೆಸ್ಕಾಂ ಎಂಜಿನಿಯರ್‌ಗೆ ಸೂಚಿಸಿದರು.

ಇದೇ ವೇಳೆ ವಿವಿಧ ವಿದ್ಯುತ್‌ ಕಾಮಗಾರಿಗಳ ಕುರಿತು ಶಾಸಕರು ಅಧಿಕಾರಿ ವರ್ಗದೊಂದಿಗೆ ಚರ್ಚಿಸಿದರು. ಅಧಿಕಾರಿಗಳ ಸಭೆಯಲ್ಲಿ ಬಿಇಒ ಎಸ್‌.ಸಿದ್ದೇಶ್ವರ್‌, ತಾಪಂ ಇಒ ಚಂದ್ರ, ಎಇಇ ಗುರುಸಿದ್ದಪ್ಪ, ಕಾಮಗಾರಿ ವಿಭಾಗದ ಎಇಇ ಸುಧಾಕರ್‌, ಎಇ ಶಿವರಾಜು, ಎಲ್. ನರಸಿಂಹ ಮೂರ್ತಿ, ಎಂ.ಹರೀಶ್‌, ಎಚ್.ವಿ.ರವಿ, ಅನ್ನ ಪೂರ್ಣ, ಸುಜಾತಾ, ದಿವ್ಯಾ, ಗಿರಿಜಾ ಇದ್ದರು.

ಅಕ್ರಮ ಪಂಪ್‌ ಸೆಟ್ ಪತ್ತೆ ಮಾಡಿ:

ತಾಲೂಕಿನಲ್ಲಿ ಅಕ್ರಮ ಪಂಪ್‌ ಸೆಟ್‌ಗಳು ಪತ್ತೆ ಮಾಡಿ, ಪಟ್ಟಿ ಮಾಡಬೇಕಿದ್ದು ತಾಲೂಕಿನ ಗಡಿ ಭಾಗಗಳಾದ ಕುಣಿಗಲ್, ಹೆಬ್ಬೂರು ಇತರೆಡೆ ವಿದ್ಯುತ್‌ ಸಂಪರ್ಕ ಸೇವೆಯ ಸಮಸ್ಯೆಗಳನ್ನು ನೆರೆ ತಾಲೂಕಿನ ಉಭಯ ಅಧಿಕಾರಿಗಳೊಂದಿಗೆ ಕುಳಿತು ಚರ್ಚಿಸಿ, ಸಮಸ್ಯೆ ಬಗೆಹರಿಸಿ. ಇನ್ನು ಚಿಕ್ಕಕಲ್ಯಾ, ಗವಿನಾಗಮಂಗಲ, ಶ್ರೀಗಿರಿಪುರ ಇತ ರೆಡೆಗಳ ವಿದ್ಯುತ್‌ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಶಾಸಕಎ.ಮಂಜು ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.