ಅರ್ಜಿ ವಿಲೇವಾರಿಗೆ ನಿರ್ಲಕ್ಷ್ಯ ಬೇಡ

ಒಂದು ತಿಂಗಳಲ್ಲಿ ಅರ್ಜಿ ವಿಲೇವಾರಿ ಮಾಡಿ: ತಾಲೂಕು ಪಂಚಾಯ್ತಿ ಇಒ ರಾಮಕೃಷ್ಣ ಸೂಚನೆ

Team Udayavani, Jun 21, 2019, 2:21 PM IST

RN-TDY-1..

ಚನ್ನಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಇಒ ರಾಮಕೃಷ್ಣ ಮಾತನಾಡಿದರು.

ಚನ್ನಪಟ್ಟಣ: ಸಿಎಂ ಜನತಾದರ್ಶನದಲ್ಲಿ ಬಂದಿರುವ ಅರ್ಜಿಗಳನ್ನು 1 ತಿಂಗಳಲ್ಲಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದ್ದು, ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕಾಲಮಿತಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು ಎಂದು ತಾಪಂ ಇಒ ರಾಮಕೃಷ್ಣ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ಸಿಎಂ ರಾಮನಗರದಲ್ಲಿ ಜನಸಂಪರ್ಕ ಸಭೆ ಮಾಡಿದ್ದ ವೇಳೆ ತಾಲೂಕಿನಿಂದ ಕೇವಲ 300 ಅರ್ಜಿಗಳು ಹೋಗಿದ್ದವು. ಆದರೆ, ಈ ಎರಡು ದಿನಗಳಲ್ಲಿ ಸಿಎಂಗೆ ತಾಲೂಕಿನಿಂದ 8 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ ಪಂಚಾಯ್ತಿಗೆ ಸಂಬಂಧಿಸಿದ ದೂರುಗಳು ಎರಡನೇ ಸ್ಥಾನದಲ್ಲಿವೆ, ಪಂಚಾಯ್ತಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವುದಾದರೆ ಮಾಡಿ, ಇಲ್ಲವಾದರೆ ತಾಲೂಕಿನಿಂದ ವರ್ಗ ಮಾಡಿಸಿಕೊಂಡು ಹೋಗಿ ಎಂದು ಕಿಡಿಕಾರಿದರು.

ಪಿಡಿಒಗಳ ಕರ್ತವ್ಯ ಲೋಪ: ಹಲವು ಪಿಡಿಒಗಳು ತಮ್ಮ ಕರ್ತವ್ಯ ಲೋಪದಿಂದ ವರ್ಷಗಟ್ಟಲೇ ಸಾರ್ವಜನಿಕರ ಕೆಲಸ ಮಾಡಿಕೊಡದೆ ಅಲೆಸಿದ್ದಾರೆ. ಇದೀಗ ಸಿಎಂ ಮುಂದೆ ಎಲ್ಲಾ ದಾಖಲೆ ಇಒ ಬಳಿ ಇದೆ ಎಂದು ಸಬೂಬು ಹೇಳಿದ್ದಾರೆ. ನನ್ನ ಬಳಿ ಯಾರು ಏನು ಕೊಟ್ಟಿದ್ದೀರಿ? ಇಲ್ಲಿ ಹೇಳಿ ನೋಡೋಣ ಎಂದು ಕಿಡಿಕಾರಿದರು.

ಕರ್ತವ್ಯ ನಿರ್ವಹಿಸಿಲ್ಲ: ತಾಪಂ ಅಧ್ಯಕ್ಷ ರಾಜಣ್ಣ ಮಾತನಾಡಿ, ಗ್ರಾಪಂಗಳಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎನ್ನುವುದು ಸತ್ಯವಾದ ಮಾತು. ಇದನ್ನು ಸಿಎಂ ಎಚ್‌ಡಿಕೆ ಅವರು ಗಮನಿಸಿದ್ದು, ಇದರ ಜೊತೆಗೆ ಅವರು ಜನತಾ ದರ್ಶನ ಮಾಡಿದ ವೇಳೆ ಗ್ರಾಮದಲ್ಲಿನ ಚರಂಡಿಗಳ ಸ್ವಚ್ಛತೆ ಬಗ್ಗೆ ಸಾರ್ವಜನಿಕರು ಕರೆದು ತೋರಿಸಿದ್ದಾರೆ. ಸಿಎಂ ತಾಲೂಕಿನ ಗ್ರಾಮಗಳಿಗೆ ಅದರಲ್ಲೂ ಗ್ರಾಪಂ ವ್ಯಾಪ್ತಿಗೆ ಜನತಾದರ್ಶನ ಮಾಡಲು ಬರುತ್ತಿದ್ದಾರೆ ಎಂದು ತಿಳಿದಿದ್ದರೂ, ನಿಮ್ಮ ಕರ್ತವ್ಯ ನಿರ್ವಹಿಸಿಲ್ಲ ಎಂದರೆ ಉಳಿದ ದಿನಗಳಲ್ಲಿ ನೀವು ಯಾವ ರೀತಿ ನೀವು ಕೆಲಸ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.

ರಸ್ತೆ ಬದಿ ಕೋಳಿ ತ್ಯಾಜ್ಯ: ತಾಲೂಕಿನ ಕೂಡ್ಲೂರು ಗ್ರಾಮದ ರಸ್ತೆ ಬದಿ ಅಲ್ಲಲ್ಲಿ ಕೋಳಿ ತ್ಯಾಜ್ಯವನ್ನು ಹಾಕಲಾಗುತ್ತಿದೆ. ಜೊತೆಗೆ ನಗರಸಭೆ ಸಿಬ್ಬಂದಿ ಕಸವನ್ನು ಮೂಟೆಗಳಲ್ಲಿ ರಸ್ತೆಯ ಬದಿಯಲ್ಲಿ ಎಸೆದು ಹೋಗುತ್ತಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ಗಬ್ಬುನಾರುತ್ತಿದೆ ಎಂದು ಮಳೂರುಪಟ್ಟಣ ತಾಪಂ ಸದಸ್ಯ ಸಿದ್ದರಾಮು ಆರೋಪ ಮಾಡಿದರು.

ಇದಕ್ಕೆ ತಾಪಂ ಅಧ್ಯಕ್ಷ ರಾಜಣ್ಣ, ತಾಲೂಕಿನ ರಾಮಮ್ಮನ ಕೆರೆ ಏರಿಯ ಮೇಲೆ ಸಾರ್ವಜನಿಕರು ವಾಯು ವಿಹಾರ ಮಾಡಲು ಸಾಧ್ಯವಾಗುತ್ತಿಲ್ಲ. ಆ ರೀತಿಯಲ್ಲಿ ಪಟ್ಟಣದ ಕೋಳಿ ಅಂಗಡಿಗಳ ತ್ಯಾಜ್ಯ ಬಂದು ಬೀಳುತ್ತಿದೆ. ಸಿಎಂ ಆ ಮಾರ್ಗದಲ್ಲಿ ಹೋಗುತ್ತಾರೆ ಎಂದು ನಗರಸಭೆಯವರು ಜೆಸಿಬಿಯಿಂದ ಮಣ್ಣನ್ನು ಉಲಾrಪಲ್ಟ ಮಾಡಿದ್ದರು. ಒಂದು ವೇಳೆ ಎಂದಿನಂತೆ ಇದ್ದಿದ್ದರೆ ಸಿಎಂ ಕೇಳುತ್ತಿದ್ದರು. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಾಪಂ ಇಒ ರಾಮಕೃಷ್ಣ, ಈ ಬಗ್ಗೆ ನಗರಸಭೆ ಆಯುಕ್ತರೊಂದಿಗೆ ಮಾತನಾಡುತ್ತೇನೆ ಎಂದರು. ತಾಪಂ ಉಪಾಧ್ಯಕ್ಷೆ ಸಾಕಮಾದಮ್ಮ, ಗ್ರಾಪಂ ಅಧ್ಯಕ್ಷರು, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.