ದೊಡ್ಡಾಟ ಅಪ್ಪಟ ಶ್ರೇಷ್ಠ ದೇಶೀಯ ಕಲೆ

ತಿಂಗಳ ಬೆಳಕು ಕಾರ್ಯಕ್ರಮ ದೊಡ್ಡಾಟ ಕಲಾವಿದ, ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯ

Team Udayavani, Jun 3, 2019, 10:01 AM IST

rn-tdy-1..

ರಾಮನಗರ: ದೊಡ್ಡಾಟವನ್ನು ಶ್ರೇಷ್ಠ ಕಲೆ, ಅಪ್ಪಟ ದೇಶೀ ಕಲೆ. ರಂಗಭೂಮಿಯಲ್ಲಿ ಜೀವಂತವಾಗಿರುವ ಕಲೆ. ವಿದ್ಯಾವಂತರೂ ಈ ಕಲೆಯನ್ನು ಕಲಿತು ಕಲೆಯನ್ನು ಮುಂದಿನ ಪೀಳಿಗೆಗಳಿಗೆ ಕೊಡುಗೆ ನೀಡ ಬೇಕೆಂದು ದೊಡ್ಡಾಟ ಕಲಾವಿದ ಮತ್ತು ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯಪಟ್ಟರು.

ತಾಲೂಕಿನ ಕೃಷ್ಣಾಪುರದೊಡ್ಡಿಯ ತಾನಿನ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಿಂಗಳ ಬೆಳೆಕು ಕಾರ್ಯಕ್ರಮದ ಅತಿಥಿಯಗಿ ಭಾಗವಹಿಸಿದ್ದ ದೊಡ್ಡಾಟ ಕತೆಗಾರ ಬಸವರಾಜ ಶಿಗ್ಗಾಂವ ದೊಡ್ಡಾಟ ಕಲೆ ಹಾಗೂ ತಮ್ಮ ಜೀವನದ ಪುಟಗಳನ್ನು ತೆರೆದಿಟ್ಟರು.

ತಾವು ನೂರಾರು ದೊಡ್ಡಾಟ ಪ್ರದರ್ಶನ ಕೊಟ್ಟಿದ್ದು, ಕಲೆಯ ಉಳಿವಿಗಾಗಿ ಶಿಷ್ಯ ಬಳಗವನ್ನು ಸೃಷ್ಟಿಸಿದ್ದೇನೆ. ವಿದ್ಯಾವಂತರು ಈ ಕಲೆಯನ್ನು ಕಲಿತು ಪ್ರದರ್ಶನ ನೀಡಬಹುದು. ರಾಜ್ಯದ 24 ಜಿಲ್ಲೆಗಳಲ್ಲಿ ಬಯಲಾಟ, ದೊಡ್ಡಾಟವನ್ನು ಪ್ರದರ್ಶಿಲಾಗುತ್ತದೆ. ಉತ್ತರ ಕರ್ನಾಟಕ ಭಾಗದ ದೊಡ್ಡಾಟಕ್ಕೆ ತನ್ನದೆಯಾದ ಸ್ವರೂಪವಿವೆ. ಇಂತಹ ವಿಶೇಷ ಕಲೆಯನ್ನು ಉಳಿಸುವಲ್ಲಿ ಕಲಾವಿದರ ಪಾತ್ರ ಗಣನೀಯವಾಗಿದೆ ಎಂದರು.

ಅನಕ್ಷರಸ್ಥರ ಪ್ರಯೋಗ ಯಶಸ್ವಿ: ನಾಟ್ಯಶಾಸ್ತ್ರ ಅಧ್ಯಯನ ಮಾಡುವ ಅನೇಕರು ಕಲಾಪ್ರಕರಗಳನ್ನು ಹೊರತರುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಅನಕ್ಷರಸ್ಥ ಜನರು ತಮ್ಮ ಜೀವನದ ಅನುಭವಗಳನ್ನು ದೊಡ್ಡಾಟ, ಬಯಲಾಟದಲ್ಲಿ ತೊಡಗಿಸಿಕೊಂಡು ಅನೇಕ ಪ್ರಯೋಗಗಳನ್ನು ಯಶಸ್ವಿಯಾಗಿ ಮಾಡುತ್ತಾರೆ ಎಂದು ದೊಡ್ಡಾಟ ಕಲಾವಿದರ ಹಿರಿಮೆಯ ಬಗ್ಗೆ ತಿಳಿಸಿಕೊಟ್ಟರು. ಆದರೆ ಇಂದು ಕಲಾವಿದರ ಸೋಗು ಹಾಕಿಕೊಂಡ ಅನೇಕರು ಸರ್ಕಾರದ ಮುಂದೆ ಭಿಕ್ಷುಕರಂತೆ ಅನುದಾನವನ್ನು ಬೇಡುತ್ತಿದ್ದಾರೆ ಎಂದು ವಿಷಾದಿಸಿದರು. ಕಲೆಯನ್ನು ರೂಢಿಸಿಕೊಳ್ಳುವುದರಿಂದ ಸಹನೆಯ ಗುಣ ಬೆಳೆಯುತ್ತದೆ. ಇಲ್ಲಿ ಆಯ್ಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮದಾದರೆ ಕಲೆ ಉಳಿಯುತ್ತದೆ. ದೊಡ್ಡಾಟ ಕಲೆ ಉಳಿವಿಗೆ ನಿರಂತರವಾಗಿ ಕಲಾಸಕ್ತರು ಪ್ರಾಮಾಣಿಕವಾದ ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಕಲೆ ಉಳಿವಿಗೆ ಪ್ರಯತ್ನಿಸುವವರ ಸಂಖ್ಯೆ ಕ್ಷೀಣ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಕಲೆ ಸಹಾಯಕ ಎನ್ನುತ್ತಾರೆ. ಆದರೆ ಕಲೆ ಉಳುವಿಗಾಗಿ ಪ್ರಯತ್ನಿಸುವವರು ಸಂಖ್ಯೆ ಕ್ಷೀಣಿಸುತ್ತಿದೆ. ಕಲೆ ಪ್ರೋತ್ಸಾಹಿಸಿದಾಗ ಪಾರಂಪರಿಕ ಕಲೆ ಉಳಿದು, ಬೆಳೆಯಲು ಸಾಧ್ಯವಾಗುತ್ತದೆ. ಪ್ರಾಮಾಣಿಕ ಕಲಾವಿದನಿಗೆ ಕಲೆಯೇ ಉಸಿರಾಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬದುಕನ್ನು ಕಲೆಗಾಗಿ ಸವೆಸುತ್ತಿದ್ದೇನೆ ಎಂದು ತಿಳಿಸಿದರು.

ಹೋಮಿಯೋಪತಿ ವೈದ್ಯ ಡಾ. ಸತೀಶ್‌ ಮಾತನಾಡಿದರು. ದೊಡ್ಡಾಟ ಕಲಾವಿದರಾದ ವೀರೇಶ್‌ ಬಡಿಗೇರ್‌, ಮಲ್ಲೇಶಪ್ಪ ತಡಸದ, ಹೇಮಂತ್‌ ಕುಮಾರ್‌ ಭಜಂತ್ರಿ, ಕನಕಪ್ಪ, ಬಗರಿಕರ್‌, ಮಲ್ಲೇಶ್‌, ನೀಲಗುರಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಕೆ. ಕಾಳಯ್ಯ, ಉಪನ್ಯಾಸಕ ಕೆ.ಎಸ್‌. ಧನಂಜಯ, ಶಿಕ್ಷಕರಾದ ನೆ.ರ. ಪ್ರಭಾಕರ್‌, ಎಂ.ಎಚ್. ಚನ್ನವೀರಪ್ಪ, ನೃತ್ಯ ಕಲಾವಿದೆ ಚಿತ್ರಾರಾವ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.