ಮಾದಕ ವಸ್ತುಗಳು ಆರೋಗ್ಯಕ್ಕೆ ಮಾರಕ

ಯುವಕರಿಗೆ ಮನೋರೋಗ ತಜ್ಞ ಡಾ.ಆದರ್ಶ್‌ ಎಚ್ಚರಿಕೆ

Team Udayavani, Jun 29, 2019, 11:09 AM IST

rn-tdy-2..

ರಾಮನಗರ: ಸ್ನೇಹಿತರ ಒತ್ತಾಯಕ್ಕೋ ಅಥವಾ ಒತ್ತಡಕ್ಕೆ ಮಣಿದು ಮಾದಕ ವಸ್ತುಗಳನ್ನು ಸೇವಿಸಿದರೆ ಅದು ಮುಂದೆ ವ್ಯಸನವಾಗಿ ವಿವಿಧ ರೀತಿಯ ಮಾನಸಿಕ ಮತ್ತು ದೈಹಿಕ ಖಾಯಿಲೆಗಳಿಗೆ ಕಾರಣವಾಗುತ್ತವೆ ಎಂದು ಮನೋರೋಗ ತಜ್ಞ ಡಾ.ಎ.ಎಂ.ಆದರ್ಶ ಎಚ್ಚರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಮನಗರ ಜಿಲ್ಲೆ ಮಾನಸಿಕ ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘಗಳ ವತಿಯಿಂದ ತಾಲೂಕಿನ ಅವ್ವೇರಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿ, ಹವ್ಯಾಸಕ್ಕೆಂದು ಆರಂಭವಾಗುವ ಮಾದಕ ವಸ್ತುಗಳ ಸೇವನೆ ವ್ಯಸನವಾಗುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ ಮಾದಕ ವಸ್ತುಗಳ ಸೇವನೆಯ ವಯಸ್ಸು 17 ವಯೋಮಾನದ ಯುವಕರಲ್ಲಿದೆ. ಮಾದಕ ವಸ್ತುಗಳ ಸೇವನೆಯಿಂದ ಶೇ.30ರಿಂದ 40 ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ಕಾನೂನು ಉಲ್ಲಂಘಿಸಿದರೆ ಶಿಕ್ಷೆ: ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರುದ್ಧ ಕಾಯ್ದೆಗಳು ಜಾರಿಯಲ್ಲಿವೆ. ಕಾನೂನು ಉಲ್ಲಂಘಿಸಿ ಮಾಡುವ ಕೃತ್ಯಗಳಿಗೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕಾಯ್ದೆಗಳ ಬಗ್ಗೆ ವಿವರಣೆ ನೀಡಿದರು.

ಪೋಷಕರು ಮಕ್ಕಳ ಮೇಲೆ ನಿಗಾವಹಿಸಿ: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ.ಮಂಜುನಾಥ್‌ ಮಾತನಾಡಿ, ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಕೂಡ ಕಾನೂನು ಅಪರಾದ. ಮೇಲಾಗಿ ವಸ್ತುಗಳನ್ನು ಸಾಗಿಸುವಾಗ ಅದನ್ನು ಬಳಸುವ ಅಪಾಯವೂ ಇದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು ಎಂದರು.

ಕುಟುಂಬಗಳಲ್ಲಿ ಜಾಗೃತಿ ಮೂಡಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಪ್ರಕಾಶ್‌ ಮಾತನಾಡಿ, ಬೀಡಿ, ಸಿಗರೇಟು, ಮಾದಕ ದ್ರವ್ಯಗಳ ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಏರ್ಪಡಿಸಿರುವ ಜಾಗೃತಿ ಕಾರ್ಯಕ್ರಮ ಇಂದಿನ ಯುವ ಸಮುದಾಯಕ್ಕೆ ಮಾರ್ಗದರ್ಶಿಯಾಗಿದೆ. ಮಾದಕ ಪದಾರ್ಥಗಳ ಸೇವನೆಯಿಂದಾಗುವ ಪರಿಣಾಮಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ತಮ್ಮ ಕುಟುಂಬಗಳಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.

ಎಸ್‌ಆರ್‌ಎಸ್‌ ಕ್ಷೇತ್ರದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀಲ್, ಕಾಲೇಜು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು. ವೀಣಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಪವಿತ್ರ ಸ್ವಾಗತಿಸಿದರು. ಮನೋಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ.ಎಸ್‌. ವಂದಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದಕ್ಷಿಣಾ ಮೂರ್ತಿ ನಿರೂಪಿಸಿದರು.

ಜಾಗೃತಿ ಜಾಥಾ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಜನರಲ್ಲಿ ಮಾದಕ ವಸ್ತಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಅವ್ವೇರಹಳ್ಳಿ ಗ್ರಾಪಂ ಆವರಣದಲ್ಲಿ ಆಟೋರಿಕ್ಷಾ ಪ್ರಚಾರಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸವಿತಾ ದೇವರಾಜು ಚಾಲನೆ ನೀಡಿದರು.

ತಾಪಂ ಸದಸ್ಯ ರೇಣುಕಾ ಪ್ರಸಾದ್‌, ಮಾಜಿ ಗ್ರಾಪಂ ಅಧ್ಯಕ್ಷ ಎಚ್.ಎಸ್‌. ದೇವರಾಜು, ಹಿರಿಯ ಆರೋಗ್ಯ ಪರೀಕ್ಷಕ ದಾಸಪ್ಪ, ಕಂಟ್ರಾಕ್ಟರ್‌ ತಮ್ಮಣ್ಣ, ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರು, ವಲಯ ಅರಣ್ಯಾಧಿಕಾರಿ ಎ.ಎಲ್.ದಾಳೇಶ್‌, ಪಿಡಿಒ ವೆಂಕಟೇಶ್‌, ಮುಖಂಡ ಕಂಟ್ರಾಕ್ಟರ್‌ ಶಿವಲಿಂಗಯ್ಯ, ಶಿಕ್ಷಕರಾದ ಲತಾ, ಪುಷ್ಪ, ಲಿಂಗರಾಜಯ್ಯ ಹಾಜರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.