ನಾಗರಿಕರ ಬಳಕೆಗೆ ಸಿಗದ ಇ-ಶೌಚಾಲಯ


Team Udayavani, May 3, 2019, 3:53 PM IST

ram-2

ರಾಮನಗರ: ನಗರದಲ್ಲಿ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ನಗರಸಭೆಯ ಮೂಲಕ ಸ್ಥಾಪಿಸಿರುವ ಇ-ಶೌಚಾಲಯಗಳು ಸಾರ್ವಜನಿಕ ಬಳಕೆಗೆ ಅವಕಾಶವಿಲ್ಲದಂತಾಗಿದೆ. ಇದಕ್ಕೆ ಇ-ಶೌಚಾಲಯ ನಿರ್ವಹಣೆ ಹೊತ್ತ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದು ಬಂದಿದೆ.

ನಗರದ ನ್ಯಾಯಾಲಯ ರಸ್ತೆಯಲ್ಲಿ, ಛತ್ರದ ಬೀದಿಯಲ್ಲಿ (ಮೇಯಿನ್‌ ಶಾಲೆ ಬಳಿ), ಜಿಲ್ಲಾ ಕ್ರೀಡಾಂಗಣ ಮತ್ತು ರಾಯರ ದೊಡ್ಡಿ ವೃತ್ತದಲ್ಲಿ ತಲಾ ಒಂದು ಇ-ಟಾಯ್ಲೆಟ್ ಸ್ಪಾಪನೆಯಾಗಿದೆ. ರಾಯರದೊಡ್ಡಿ ಬಳಿಯ ಟಾಯ್ಲೆಟ್ ಹೊರತುಪಡಿಸಿ ಉಳಿದ ಮೂರು ಟಾಯ್ಲೆಟ್‌ಗಳು ಬಳಕೆಯಾಗುತ್ತಿಲ್ಲ. ಕಾರಣ, ಅವು ಕಾರ್ಯನಿರ್ವಹಿಸುತ್ತಿಲ್ಲ. ಗುರುತಿಸಿಕೊಳ್ಳಲು ಇಚ್ಚಿಸದ ನಗರಸಭೆಯ ಅಧಿಕಾರಿಗಳ ಪ್ರಕಾರ ಮೂರು ಇ- ಟಾಯ್ಲೆಟ್‌ಗಳಲ್ಲಿ ವಿದ್ಯುತ್‌ಗೆ ಸಂಬಂಧಿಸಿದಂತೆ ಕೆಲವು ಲೋಪಗಳಿದ್ದು ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಮೈಸೂರು ಮೂಲದ ಗುತ್ತಿಗೆದಾರ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳೇ ದೂರಿದ್ದಾರೆ.

ನಗರಸಭೆಯಿಂದ 8 ಲಕ್ಷ ಮೊತ್ತ ವ್ಯಯ: ಜಿಲ್ಲಾ ಕೇಂದ್ರ ರಾಮನಗರಕ್ಕೆ ದಿನನಿತ್ಯ ಹೊರಗಡೆಯಿಂದ ಬಂದು ಹೋಗುವ ಜನಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಯಾ ಕಟ್ಟಿನಲ್ಲಿ ನಗರಸಭೆ ಇ-ಶೌಚಾಲಯಗಳನ್ನು ಸ್ಥಾಪಿಸಿದೆ. 8 ಲಕ್ಷಕ್ಕೂ ಅಧಿಕ ಮೊತ್ತವನ್ನು ನಗರಸಭೆ ವ್ಯಯಿಸಿದೆ. ಲೋಕಸಭಾ ಚುನಾವಣೆಗೆ ಕೆಲ ದಿನಗಳ ಮುನ್ನ ಇ- ಶೌಚಾಲಯಗಳನ್ನು ಅಧಿಕಾರಿ ವೃಂದವೇ ಉದ್ಘಾಟನೆ ನೆರವೇರಿಸಿದ್ದರು.

ಗುತ್ತಿಗೆದಾರನ ಮೊಬೈಲ್ ಸಂಖ್ಯೆ ನಿರಂತರ ಸ್ವಿಚ್ ಆಫ್: ನ್ಯಾಯಾಲಯ ರಸ್ತೆ, ಛತ್ರದ ಬೀದಿ ಮತ್ತು ಜಿಲ್ಲಾ ಕ್ರೀಡಾಂಗಣದ ಶೌಚಾಲಯ ಘಟಕಗಳು ಆರಂಭದಿಂದಲೂ ಕಾರ್ಯ ನಿರ್ವಹಿಸಲಿಲ್ಲ ಎಂದು ನಾಗರಿಕರು ದೂರಿದ್ದಾರೆ. ಮೈಸೂರು ಮೂಲದ ಗುತ್ತಿಗೆದಾರ ಇ- ಶೌಚಾಲಯಗಳನ್ನು ಸ್ಥಾಪಿಸಿದ್ದು, ಇನ್ನು ಒಂದು ವರ್ಷದ ಕಾಲ ಈ ಘಟಕಗಳನ್ನು ನಿರ್ವಹಿಸಬೇಕಾಗಿದೆ. ಆದರೆ, ಆತ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳಿವೆ.

ಸಮಸ್ಯೆ ಇದ್ದರೆ ನಾಗರಿಕರೇ ನೇರವಾಗಿ ಗುತ್ತಿಗೆದಾರನನ್ನು ಸಂಪರ್ಕಿಸಲು ಮೊಬೈಲ್ ಸಂಖ್ಯೆಯನ್ನು (7624960165) ಘಟಕಗಳ ಮೇಲೆ ನಮೂದಿಸಲಾಗಿದೆ. ಸಂಪರ್ಕಿಸಬೇಕಾದ ಗುತ್ತಿಗೆದಾರನ ಮೊಬೈಲ್ ನಿರಂತರ ಸ್ವಿಚ್ ಆಫ್ ಸಂದೇಶ ಬರುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ವಿಕಲಚೇತನರ ಶೌಚಾಲಯವೂ ಬಂದ್‌!: ನಗರದ ನ್ಯಾಯಾಲಯ ಸಂಕೀರ್ಣದ ಬಳಿ ಇರುವ ಮಹಾತ್ಮ ಗಾಂಧಿ ಉದ್ಯಾನವನದ ಮುಂಭಾಗ ನಗರ ಸಭೆ ವತಿಯಿಂದ ವಿಕಲ ಚೇತನರ ಶೌಚಾಲಯ ಕಟ್ಟಡವನ್ನು ನಿರ್ಮಿಸಿ ವರ್ಷ ಕಳೆದಿದೆ. ಆದರೆ, ಈ ಶೌಚಾಲಯವೂ ಬಳಕೆಯಾಗುತ್ತಿಲ್ಲ. ಯಾವುದೇ ಸಂದರ್ಭದಲ್ಲಿ ಬೀಗ ಜಡಿದು ಕೊಂಡಿರುವ ಶೌಚಾಲಯದ ಬಗ್ಗೆ ನಗರಸಭೆಯ ಅಧಿಕಾರಿಗಳ ಗಮನ ಸೆಳೆದರು ಉಪಯೋಗವಾಗಿಲ್ಲ ಎಂದು ನಾಗರಿಕರು ಹರಿಹಾಯ್ದಿದ್ದಾರೆ.

ಜಿಲ್ಲಾಧಿಕಾರಿಗಳೇ ಇತ್ತ ಗಮನಿಸಿ!

ನಗರ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತಾವಧಿ ಕಳೆದ ಮಾರ್ಚ್‌ ತಿಂಗಳಲ್ಲೇ ಮುಗಿದಿದೆ. ನಗರ ಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಗಳು ಅಧಿಕಾರವಹಿಸಿಕೊಂಡಿದ್ದಾರೆ. ನಾಗರಿಕರ ತೆರಿಗೆ ಹಣ ಹೀಗೆ ನೆನೆಗುದಿಗೆ ಬಿದ್ದಿದ್ದು, ಜಿಲ್ಲಾಧಿಕಾರಿಗಳು ತಕ್ಷಣ ಗಮನಹರಿಸಿ ಇ-ಶೌಚಾಲಯಗಳು ಹಾಗೂ ವಿಕಲಚೇತನರ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಅವಕಾಶಮಾಡಿಕೊಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.