![court](https://www.udayavani.com/wp-content/uploads/2024/07/court-7-415x231.jpg)
ನಾಗರಿಕರ ಬಳಕೆಗೆ ಸಿಗದ ಇ-ಶೌಚಾಲಯ
Team Udayavani, May 3, 2019, 3:53 PM IST
![ram-2](https://www.udayavani.com/wp-content/uploads/2019/05/ram-2-620x443.jpg)
ರಾಮನಗರ: ನಗರದಲ್ಲಿ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ನಗರಸಭೆಯ ಮೂಲಕ ಸ್ಥಾಪಿಸಿರುವ ಇ-ಶೌಚಾಲಯಗಳು ಸಾರ್ವಜನಿಕ ಬಳಕೆಗೆ ಅವಕಾಶವಿಲ್ಲದಂತಾಗಿದೆ. ಇದಕ್ಕೆ ಇ-ಶೌಚಾಲಯ ನಿರ್ವಹಣೆ ಹೊತ್ತ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದು ಬಂದಿದೆ.
ನಗರದ ನ್ಯಾಯಾಲಯ ರಸ್ತೆಯಲ್ಲಿ, ಛತ್ರದ ಬೀದಿಯಲ್ಲಿ (ಮೇಯಿನ್ ಶಾಲೆ ಬಳಿ), ಜಿಲ್ಲಾ ಕ್ರೀಡಾಂಗಣ ಮತ್ತು ರಾಯರ ದೊಡ್ಡಿ ವೃತ್ತದಲ್ಲಿ ತಲಾ ಒಂದು ಇ-ಟಾಯ್ಲೆಟ್ ಸ್ಪಾಪನೆಯಾಗಿದೆ. ರಾಯರದೊಡ್ಡಿ ಬಳಿಯ ಟಾಯ್ಲೆಟ್ ಹೊರತುಪಡಿಸಿ ಉಳಿದ ಮೂರು ಟಾಯ್ಲೆಟ್ಗಳು ಬಳಕೆಯಾಗುತ್ತಿಲ್ಲ. ಕಾರಣ, ಅವು ಕಾರ್ಯನಿರ್ವಹಿಸುತ್ತಿಲ್ಲ. ಗುರುತಿಸಿಕೊಳ್ಳಲು ಇಚ್ಚಿಸದ ನಗರಸಭೆಯ ಅಧಿಕಾರಿಗಳ ಪ್ರಕಾರ ಮೂರು ಇ- ಟಾಯ್ಲೆಟ್ಗಳಲ್ಲಿ ವಿದ್ಯುತ್ಗೆ ಸಂಬಂಧಿಸಿದಂತೆ ಕೆಲವು ಲೋಪಗಳಿದ್ದು ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಮೈಸೂರು ಮೂಲದ ಗುತ್ತಿಗೆದಾರ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳೇ ದೂರಿದ್ದಾರೆ.
ನಗರಸಭೆಯಿಂದ 8 ಲಕ್ಷ ಮೊತ್ತ ವ್ಯಯ: ಜಿಲ್ಲಾ ಕೇಂದ್ರ ರಾಮನಗರಕ್ಕೆ ದಿನನಿತ್ಯ ಹೊರಗಡೆಯಿಂದ ಬಂದು ಹೋಗುವ ಜನಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಯಾ ಕಟ್ಟಿನಲ್ಲಿ ನಗರಸಭೆ ಇ-ಶೌಚಾಲಯಗಳನ್ನು ಸ್ಥಾಪಿಸಿದೆ. 8 ಲಕ್ಷಕ್ಕೂ ಅಧಿಕ ಮೊತ್ತವನ್ನು ನಗರಸಭೆ ವ್ಯಯಿಸಿದೆ. ಲೋಕಸಭಾ ಚುನಾವಣೆಗೆ ಕೆಲ ದಿನಗಳ ಮುನ್ನ ಇ- ಶೌಚಾಲಯಗಳನ್ನು ಅಧಿಕಾರಿ ವೃಂದವೇ ಉದ್ಘಾಟನೆ ನೆರವೇರಿಸಿದ್ದರು.
ಗುತ್ತಿಗೆದಾರನ ಮೊಬೈಲ್ ಸಂಖ್ಯೆ ನಿರಂತರ ಸ್ವಿಚ್ ಆಫ್: ನ್ಯಾಯಾಲಯ ರಸ್ತೆ, ಛತ್ರದ ಬೀದಿ ಮತ್ತು ಜಿಲ್ಲಾ ಕ್ರೀಡಾಂಗಣದ ಶೌಚಾಲಯ ಘಟಕಗಳು ಆರಂಭದಿಂದಲೂ ಕಾರ್ಯ ನಿರ್ವಹಿಸಲಿಲ್ಲ ಎಂದು ನಾಗರಿಕರು ದೂರಿದ್ದಾರೆ. ಮೈಸೂರು ಮೂಲದ ಗುತ್ತಿಗೆದಾರ ಇ- ಶೌಚಾಲಯಗಳನ್ನು ಸ್ಥಾಪಿಸಿದ್ದು, ಇನ್ನು ಒಂದು ವರ್ಷದ ಕಾಲ ಈ ಘಟಕಗಳನ್ನು ನಿರ್ವಹಿಸಬೇಕಾಗಿದೆ. ಆದರೆ, ಆತ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳಿವೆ.
ಸಮಸ್ಯೆ ಇದ್ದರೆ ನಾಗರಿಕರೇ ನೇರವಾಗಿ ಗುತ್ತಿಗೆದಾರನನ್ನು ಸಂಪರ್ಕಿಸಲು ಮೊಬೈಲ್ ಸಂಖ್ಯೆಯನ್ನು (7624960165) ಘಟಕಗಳ ಮೇಲೆ ನಮೂದಿಸಲಾಗಿದೆ. ಸಂಪರ್ಕಿಸಬೇಕಾದ ಗುತ್ತಿಗೆದಾರನ ಮೊಬೈಲ್ ನಿರಂತರ ಸ್ವಿಚ್ ಆಫ್ ಸಂದೇಶ ಬರುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ವಿಕಲಚೇತನರ ಶೌಚಾಲಯವೂ ಬಂದ್!: ನಗರದ ನ್ಯಾಯಾಲಯ ಸಂಕೀರ್ಣದ ಬಳಿ ಇರುವ ಮಹಾತ್ಮ ಗಾಂಧಿ ಉದ್ಯಾನವನದ ಮುಂಭಾಗ ನಗರ ಸಭೆ ವತಿಯಿಂದ ವಿಕಲ ಚೇತನರ ಶೌಚಾಲಯ ಕಟ್ಟಡವನ್ನು ನಿರ್ಮಿಸಿ ವರ್ಷ ಕಳೆದಿದೆ. ಆದರೆ, ಈ ಶೌಚಾಲಯವೂ ಬಳಕೆಯಾಗುತ್ತಿಲ್ಲ. ಯಾವುದೇ ಸಂದರ್ಭದಲ್ಲಿ ಬೀಗ ಜಡಿದು ಕೊಂಡಿರುವ ಶೌಚಾಲಯದ ಬಗ್ಗೆ ನಗರಸಭೆಯ ಅಧಿಕಾರಿಗಳ ಗಮನ ಸೆಳೆದರು ಉಪಯೋಗವಾಗಿಲ್ಲ ಎಂದು ನಾಗರಿಕರು ಹರಿಹಾಯ್ದಿದ್ದಾರೆ.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.