ಡಿಕೆಶಿ ಬ್ರದರ್ ದಬ್ಟಾಳಿಕೆಗೆ ಚುನಾವಣೆಯಲ್ಲಿ ಉತ್ತರ
Team Udayavani, Oct 23, 2017, 7:10 AM IST
ಚನ್ನಪಟ್ಟಣ: “ಡಿಕೆಶಿ ಸಹೋದರರ ದಬ್ಟಾಳಿಕೆಗೆ ತಾಲೂಕಿನ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ’ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಸ್ವಾಭಿಮಾನಿ, ಪ್ರಗತಿಪರ ಚಿಂತಕರ ಸಭೆಯಲ್ಲಿ ಅವರು ಮಾತನಾಡಿದರು. “ನನಗೆ ಡಿಕೆಶಿ ಸಹೋದರರ ಮೇಲೆ ಯಾವ ಹಗೆತನವೂ ಇಲ್ಲ. ಆದರೂ ಅವರು ನನ್ನನ್ನು ರಾಜಕೀಯವಾಗಿ ಪ್ರತಿ ಹಂತದಲ್ಲೂ ತುಳಿಯುತ್ತಾ ಬಂದಿದ್ದಾರೆ. ನನ್ನ ಸಂಯಮವನ್ನು ಪರೀಕ್ಷೆ ಮಾಡುತ್ತಲೇ ಬಂದಿದ್ದಾರೆ’ ಎಂದು ದೂರಿದರು.
ಸಚಿವ ಸ್ಥಾನಕ್ಕೆ ಕತ್ತರಿ: 20-20 ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಘೋಷಣೆಯಾಗಿ ನನ್ನನ್ನು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದರು. ಆದರೆ ಡಿಕೆಶಿ ಬೆಳಗಿನ ವೇಳೆಗೆ ನನ್ನ ಸಚಿವ ಸ್ಥಾನಕ್ಕೆ ಕತ್ತರಿ ಹಾಕಿದ್ದರು. ಜೊತೆಗೆ 2013ರ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಿ, ಟಿಕೆಟ್ ಬೇಡ ಎಂದ ಮಾಜಿ ಶಾಸಕ ಸಾದತ್ ಆಲಿಖಾನ್ಗೆ ನೀಡಿದ್ದರು. ಆದರೂ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿದಾಗ ಮತದಾರರು ನನ್ನ ಕೈಹಿಡಿದರು ಎಂದು ಯೋಗೇಶ್ವರ್ ಹೇಳಿದರು.
ಇದೇ ವೇಳೆ, ಆಗಾಗ ಬಿಜೆಪಿ ಮಂತ್ರ ಪಠಿಸುತ್ತಾ ಬಿಜೆಪಿ ಸೇರುವ ಮುನ್ಸೂಚನೆಯನ್ನೂ ಯೋಗೇಶ್ವರ್ ನೀಡಿದರು. ಶೀಘ್ರದಲ್ಲೇ ಇದೇ ಸ್ಥಳದಲ್ಲಿ ಮತ್ತೂಂದು ಸಭೆ ಕರೆದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !