ವಿದ್ಯುತ್, ಕಂದಾಯ ಬಿಲ್ ಮನ್ನಾ ಮಾಡಿ
Team Udayavani, May 28, 2021, 4:47 PM IST
ರಾಮನಗರ: ಕೋವಿಡ್ ಮಹಾಮಾರಿಯ ಈ ಸಂದರ್ಭದಲ್ಲಿ ಬಡ, ಮಧ್ಯಮ ಕಟುಂಬಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿ ರುವುದರಿಂದ ರಾಜ್ಯದ ಈ ವರ್ಗದ ಕುಟುಂಬಗಳ ವಿದ್ಯುತ್ ಬಿಲ್, ನೀರಿನ ಬಿಲ್, ಮನೆ ಕಂದಾಯ ಮನ್ನಾ ಮಾಡುವಂತೆ ಸಂಸದ ಡಿ.ಕೆ.ಸುರೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಅವರು, ಕೋವಿಡ್ ಕರ್ಫ್ಯೂ ಕಾರಣ ಬಡ ಮತ್ತು ಮಧ್ಯಮ ವರ್ಗದ ಕುಟುಂಬ ಮಾಸಿಕ ವೇತ ನ ಸಿಗದೆ, ದಿನನಿತ್ಯ ದುಡಿಯುವಂತಾಗಿದೆ. ಆರ್ಥಿಕ ಪ್ಯಾಕೇಜ್ ಎಲ್ಲರಿಗೂ ತಲುಪದೆ ಇರುವುದರಿಂದ ಈ ವರ್ಗದ ಕುಟುಂಬಗಳ 3 ತಿಂಗಳಿನ ವಿದ್ಯುತ್ ಬಿಲ್, ನೀರಿನ ಬಿಲ್ ಮತ್ತು 1 ವರ್ಷದ ಮನೆ ಕಂದಾಯ ಮನ್ನಾ ಮಾಡುವುದರಿಂದ ಸ್ಪಲ್ಪ ಮಟ್ಟಿನ ಪರಿಹಾರ ಒದಗಿಸಿ ಒತ್ತಡ ರಹಿತ ಜೀವನ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ.
ಜವಾ ಬ್ದಾರಿಯುತ ಸರ್ಕಾರ ಈ ಸಂಕಷ್ಟದ ಸಮಯದಲ್ಲಿ ಈ ಕುಟುಂಬಗಳು ಆರ್ಥಿಕ ಹೊರೆಯಿಂದ ಹೊರಬರಲು ಅನುಕೂಲ ಮಾಡಿಕೊಡಬೇಕು ಎಂದು ಸಂಸದರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.
ಖರೀದಿ ಕೇಂದ್ರ ತೆರೆಯಿರಿ: ರಾಜ್ಯದಲ್ಲಿ ಕೋವಿಡ್ ಸೋಂಕು ಕಾರಣ ರೈತರು ತಾವು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಮತ್ತು ವ್ಯವಸ್ಥಿತ ಮಾರುಕಟ್ಟೆ ಇಲ್ಲದೆ ಉತ್ಪನ್ನ ಮಾರಾಟ ಮಾಡಲು ತೊಂದರೆ ಅನುಭವಿಸುತ್ತಿ ದ್ದಾರೆ. ರೈತರು ತಮ್ಮ ಜೀವನೋಪಾಯಕ್ಕಾಗಿ ಬೆಳೆಯುವ ಬೆಳೆಗಳನ್ನೇ ಅವಲಂಬಿಸಿದ್ದಾರೆ.
ಸಾಲ-ಸೋಲ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ, ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ಇಲ್ಲದೆ ಉತ್ಪನ್ನ ವ್ಯರ್ಥವಾಗು ತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ತಾಲೂಕು ಕೇಂದ್ರಗಳು ಮತ್ತು ಅವಶ್ಯವಿರುವ ಸ್ಥಳಗಳಲ್ಲಿ ಎಂಎಸ್ಪಿ ಖರೀದಿ ಕೇಂದ್ರ ಸ್ಥಾಪಿಸಿ ರಾಜ್ಯದ ರೈತರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅನುಕೂಲ ಕಲ್ಪಿಸಬೇಕು. ಅವರು ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು