ಬೀಡು ಬಿಟ್ಟ ಕಾಡಾನೆ ಹಿಂಡು: ಜನರಲ್ಲಿ ಆತಂಕ
Team Udayavani, Feb 8, 2021, 12:54 PM IST
ಕನಕಪುರ: ತಾಲೂಕಿನ ದೊಡ್ಡಮುದುವಾಡಿ ಗ್ರಾಮದ ಸುತ್ತಮುತ್ತ ಆರು ಕಾಡಾನೆಗಳ ಗುಂಪು ಬೀಡು ಬಿಟ್ಟಿದ್ದು, ಜನರಲ್ಲಿ ಆತಂಕ ಮೂಡಿದೆ.
ಆಹಾರ ಅರಸಿ ಕಾಡಿನಿಂದ ಗ್ರಾಮದತ್ತ ಕಾಡಾನೆಗಳ ಹಿಂಡು ಬಂದಿವೆ ಎನ್ನಲಾಗಿದೆ. ತಾಲೂಕಿನ ಹಾರೋಹಳ್ಳಿ ದೊಡ್ಡಮುದುವಾಡಿಯ ನದಿಯಲ್ಲಿ ನಾಲ್ಕು ಆನೆ, ಸಮೀಪದ ಹಂದಿಗುಂದಿ ಅರಣ್ಯದಲ್ಲಿ ಎರಡು ಆನೆಗಳು ಬೀಡುಬಿಟ್ಟಿದ್ದು, ವಿಷಯ ತಿಳಿದ ಗ್ರಾಮಸ್ಥರು ಆನೆ ಹಿಂಡು ನೋಡಲು ಮುಗಿಬಿದ್ದರು.
ಆನೆಗಳು ಬೀಡು ಬಿಟ್ಟಿರುವ ದೊಡ್ಡಮುದುವಾಡಿಯ ಮತ್ತಿ ಕುಂಟೆ ಸ್ಥಳವು ಜಿಲ್ಲಾ ಮತ್ತು ತಾಲೂಕಿನ ನಡುವಿನ ಗಡಿಯಾಗಿದ್ದು, ಆನೆಗಳು ಮುತ್ತತ್ತಿ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಬಂದಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಹೈನುಗಾರಿಕೆ ರೈತರ ಬದುಕಿಗೆ ಸಂಜೀವಿನಿ: ಶಾಸಕ
ಜನರ ಓಡಾಟಕ್ಕೆ ಹೆದರಿ ಆನೆಗಳು ಅರ್ಕಾವತಿ ನದಿ ನೀರಿನಲ್ಲಿ ಸಂಜೆಯವರೆಗೂ ಕಾಲ ಕಳೆದಿವೆ. ಸಂಜೆ ಬಳಿಕ ಕಾಡಿಗೆ ಅಟ್ಟಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡು, ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಅರಣ್ಯ ಇಲಾಖೆ ಡಿಸಿಎಫ್ ದೇವರಾಜು, ಎಸಿಎಫ್ ರಾಮಕೃಷ್ಣ, ತಾಲೂಕು ವಲಯ ಅರಣ್ಯಾಧಿಕಾರಿ ದಾಳೇಶ್, ಉಪವಲಯ ಅರಣ್ಯಾಧಿಕಾರಿ ಕೀರಣ್, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ