ಆನೆ ದಾಳಿ: ಅಪಾರ ಪ್ರಮಾಣದ ಬೆಳೆ ಹಾನಿ


Team Udayavani, Nov 18, 2021, 4:34 PM IST

ಬೆಳೆ ನಾಶ – ಆನೆ ದಾಳಿ

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ದೇವರದೊಡ್ಡಿ ಗ್ರಾಮದಲ್ಲಿ ಆನೆಗಳ ದಾಳಿಗೆ ರಾಗಿ ಹೊಲ, ಟೊಮೆಟೋ ಬೆಳೆ ನಾಶವಾಗಿದೆ.

ಬೆಳೆ ಹಾನಿ: ಐದು ಆನೆಗಳ ಹಿಂಡು ದಾಂಧಲೆ ನಡೆಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮರಿಸ್ವಾಮಯ್ಯ ಅವರಿಗೆ ಸೇರಿದ ಟೊಮೊಟೋ ತೋಟ, ಸಿದ್ದಯ್ಯ, ಚಿಕ್ಕಸ್ವಾಮಯ್ಯ, ಬೋರೇ ಗೌಡ ಎಂಬು ವರುಗೆ ಸೇರಿದ ತೆಂಗಿನ ಮರಗಳು, ರಾಜು, ನಾಗೇಶ್‌ ಎಂಬುವರಿಗೆ ಸೇರಿದ ರಾಗಿ ಹೊಲ ಆನೆಗಳ ದಾಳಿಯಿಂದಾಗಿ ನಾಶವಾಗಿವೆ.

ಗ್ರಾಮಸ್ಥರಿಗೆ ಆತಂಕ: ಹದಿನೈದು ದಿನಗಳಿಂದ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿರುವ ಆನೆಗಳು ಪದೇ ಪದೇ ಗ್ರಾಮದ ಕಡೆಗೆ ಬಂದು ತೆಂಗು, ಮಾವು, ಹಲಸು, ಬಾಳೆ, ಭತ್ತದ ಗದ್ದೆ, ರಾಗಿ ಹೊಲವನ್ನು ನಾಶ ಪಡಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮಳೆ ಜೊತೆಗೆ ಆನೆ ಕಾಟ: ನಿರಂತರ ಮಳೆ ಕಾರಣ ಈಗಾಗಲೆ ತಾವು ಬೆಳೆದ ಬೆಳೆ ನಾಶವಾಗುವ ಆತಂಕದಲ್ಲಿರುವ ತಮಗೆ ಆನೆಗಳ ದಾಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು. ಆನೆಗಳ ನಿರಂತರ ದಾಳಿಯಿಂದ ಜೀವನ ಕಷ್ಟವಾಗುತ್ತಿದೆ ಎಂದು ರೈತರು ಅಲವತ್ತುಕೊಂಡಿದ್ದಾರೆ.

ಜೀವ ಭಯದಲ್ಲಿ ಗ್ರಾಮಸ್ಥರು: ಬೆಳೆ ನಾಶ ಒಂದು ಕಡೆಯಾದರೆ ಸಂಜೆ ವೇಳೆ ಮನೆಗಳಿಂದ ಹೊರಕ್ಕೆ ಬರಲು ಸಹ ಭಯವಾಗುತ್ತಿದೆ. ವಿಶೇಷವಾಗಿ ತೋಟ, ಗದ್ದೆಗಳ ಪಕ್ಕದಲ್ಲಿರುವ ರಸ್ತೆಗಳು, ಮನೆಗಳ ವಾಸಿಗಳಿಗೆ ತೊಂದರೆಯಾಗು ತ್ತಿದೆ. ರಾತ್ರಿ, ಬೆಳಗ್ಗೆ ಎನ್ನದೇ ಆನೆಗಳ ಭಯ ಕಾಡುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಆಗಿರುವ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಆನೆಗಳನ್ನು ಚಿಕ್ಕಮಣ್ಣುಗುಡ್ಡೆ ಅರಣ್ಯ ದಿಂದ ಅವುಗಳ ಸ್ವಸ್ಥಾನ ಸೇರಿಸುವ ಕೆಲಸ ಶೀಘ್ರದಲ್ಲೇ ಮಾಡಬೇಕು ಎಂದು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ತಿಮಸಂದ್ರ ಗ್ರಾಮಕ್ಕೆ ಲಗ್ಗೆಯಿಟ್ಟ ಆನೆ ಹಿಂಡು

 ಚನ್ನಪಟ್ಟಣ: ತಾಲೂಕಿನ ತಿಮ್ಮಸಂದ್ರ ಗ್ರಾಮದ ಹೊರವಲಯದಲ್ಲಿ ಬುಧವಾರ ಐದು ಆನೆಗಳ ತಂಡ ಕಾಣಿಸಿಕೊಂಡು ಆತಂಕವುಂಟು ಮಾಡಿದವು. ಬರುವ ಹಾದಿಯಲ್ಲಿ ರೈತರ ಬೆಳೆಗಳನ್ನು ನಾಶಮಾಡಿದ ಆನೆಗಳು, ಕೆರೆಯಲ್ಲಿ ಬೀಡುಬಿಟ್ಟಿದ್ದವು. ವಿಚಾರ ತಿಳಿದ ಗ್ರಾಮಸ್ಥರು ಆನೆಗಳನ್ನು ನೋಡಲು ಮುಗಿಬಿದ್ದಿದ್ದರು.

ಕೆಲವರು ಆನೆಗಳ ಜತೆಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದುದು ಆತಂಕಕ್ಕೆ ಕಾರಣವಾಯಿತು. ಕೂಗಾಟ ಜೋರಾಗಿದ್ದರಿಂದ ಆನೆಗಳು ಬೆದರಿ ಓಡಿದವು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರನ್ನು ಹತ್ತಿರ ಹೋಗದಂತೆ ನೋಡಿಕೊಂಡರು. ಅರಣ್ಯ ಇಲಾಖೆ ಅಧಿಕಾರಿ ದಿನೇಶ್‌ ಅವರು ತಮ್ಮ ಸಿಬ್ಬಂದಿ ಜತೆ ಬಂದು ಆನೆಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಕಳುಹಿಸಲು ಕ್ರಮ ಕೈಗೊಂಡರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.