ಕಾಡಾನೆ ದಾಳಿ: ಅಧಿಕಾರಿಗಳ ವಸತಿಗೃಹಕ್ಕೆ ರೈತರ ಮುತ್ತಿಗೆ

ಕಾಡಾನೆ ದಾಳಿಯಿಂದ ಬೆಳೆ ನಾಶವಾದರೆ ಸೂಕ್ತ ಪರಿಹಾರ ನೀಡುತ್ತಿಲ್ಲ

Team Udayavani, Feb 21, 2023, 6:31 PM IST

ಕಾಡಾನೆ ದಾಳಿ: ಅಧಿಕಾರಿಗಳ ವಸತಿಗೃಹಕ್ಕೆ ರೈತರ ಮುತ್ತಿಗೆ

ಕನಕಪುರ: ನಿರಂತರ ಕಾಡಾನೆ ದಾಳಿಗೆ ಬೇಸತ್ತ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಸತಿಗೃಹಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಕೋಡಿಹಳ್ಳಿಯಲ್ಲಿ ನಡದಿದೆ.

ತಾಲೂಕಿನ ಕೋಡಿಹಳ್ಳಿಯ ಪ್ಲಾಂಟೇಶನ್‌ ಅರಣ್ಯಇಲಾಖೆ ಅಧಿಕಾರಿಗಳ ವಸತಿಗೃಹಕ್ಕೆ ನೂರಾರು ರೈತರು ಬೀಗ ಜಡಿದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಕೋಡಿಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 70 ಕಾಡಾನೆಗಳ ಹಿಂಡು ಕಳೆದ ಒಂದು ತಿಂಗಳಿನಿಂದ ಕಾಣಿಸಿಕೊಂಡಿದ್ದು, ರೈತರ
ಜಮೀನುಗಳಿಗೆ ನುಗ್ಗಿ ದಾಂಧಲೆ ಮಾಡಿ ಬೆಳೆಯನ್ನೆಲ್ಲ ನಾಶ ಮಾಡುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕಿರಲಿಲ್ಲ. ನಿರಂತರ ಕಾಡಾನೆ ದಾಳಿಯಿಂದ ಬೇಸತ್ತ ರೈತರು, ಸೋಮವಾರ ತಾಳ್ಮೆ ಕಳೆದುಕೊಂಡಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.

ಅರಣ್ಯ ಇಲಾಖೆ ಕಚೇರಿ ಎದುರು ಜಮಾವಣೆಗೊಂಡಿದ್ದ ಕೂತುಗಳೆ, ಹೊನ್ನಿಗನಹಳ್ಳಿ, ಪ್ಲಾಂಟೇಷನ್‌, ಬೆಟ್ಟೆಗೌಡನದೊಡ್ಡಿ, ಗರಳಾಪುರ ಗ್ರಾಮದ ರೈತರು ನಿರಂತರವಾಗಿ ಕಾಡಾನೆ ದಾಳಿ ಬಗ್ಗೆ ಮಾಹಿತಿ ನೀಡಿದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆ ಹಾವಳಿಗೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ಅರಣ್ಯ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕಿಲ್ಲ: ರೈತರ ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದಂತೆ ಎಚ್ಚೆತ್ತ ವಲಯ ಅರಣ್ಯ ಅಧಿಕಾರಿ ದಾಳೇಶ್‌ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಮನವೂಲಿಸಲು ಪ್ರಯತ್ನಿಸಿದರು. ಈ ವೇಳೆ ರೈತರು ಮಾತನಾಡಿ, ಕಾಡಾನೆಗಳು ನಿರಂತರವಾಗಿ ದಾಳಿ ಮಾಡುತ್ತಿವೆ.

ಆದರೂ, ನಿಮ್ಮ ಅಧಿಕಾರಿಗಳು ಏನೂ ಕ್ರಮ ಕೈಗೊಂಡಿಲ್ಲ. ಕಾಡಾನೆ ದಾಳಿಯಿಂದ ಬೆಳೆ ನಾಶವಾದರೆ ಸೂಕ್ತ ಪರಿಹಾರ ನೀಡುತ್ತಿಲ್ಲ, ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡುತ್ತಿಲ್ಲ. ಕಾಡಾನೆ ದಾಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಒತ್ತಾಯಿಸಿದರು.

ಸೂಕ್ತ ಪರಿಹಾರ ನೀಡುತ್ತೇವೆ: ವಲಯ ಅರಣ್ಯ ಅಧಿಕಾರಿ ದಾಳೇಶ್‌ ಮಾತನಾಡಿ, ನಿಮ್ಮ ಸಮಸ್ಯೆ, ನಿಮ್ಮ ಕಷ್ಟ ನನಗೆ ಅರ್ಥವಾಗುತ್ತದೆ. ಆದರೆ, ಕಾಡುಪ್ರಾಣಿಗಳನ್ನು ನಾವು ಹೀಗೆ ಇರಬೇಕೆಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಅವುಗಳನ್ನು ನಿಯಂತ್ರಿಸಿ ಕಾಡಿಗೆ ಓಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಕಾಡಾನೆಗಳನ್ನು ಶಾಶ್ವತವಾಗಿ ತಡೆಗಟ್ಟಲು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸುವ ಕೆಲಸ ಪ್ರಗತಿಯಲ್ಲಿದ್ದು, ಕೆಲವು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕಾಡು ಪ್ರಾಣಿಗಳನ್ನು ಕಾಡಿಗೆ ಓಡಿಸುತ್ತೇವೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ಕೊಡಿಸಿ ಕೊಡಲಾಗುವುದು. ರೈತರು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳಬಾರದೆಂದು ರೈತರನ್ನು ಮನವೂಲಿಸುವಲ್ಲಿ ಯಶಸ್ವಿಯಾದರು. ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.