Channapatna ಅಪ್ಪಕೆರೆಯಲ್ಲಿ ಗಜಪಡೆಯ ನೀರಾಟ; ನೋಡಲು ಜನರ ದಂಡು
Team Udayavani, Aug 23, 2023, 11:17 AM IST
ರಾಮನಗರ: ಜಿಲ್ಲೆಯ ಚನ್ನಪಟ್ಟಣ ನಗರ ಸಮೀಪದ ಅಪ್ಪಕೆರೆ ಗ್ರಾಮದ ಕೆರೆಯಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಗಜಪಡೆಯ ನೀರಾಟ ನೋಡಲು ಜನರು ಮುಗಿಬಿದ್ದಿದ್ದಾರೆ.
ತೆಂಗಿನ ಕಲ್ಲಿ ಅರಣ್ಯ ಪ್ರದೇಶದಿಂದ ನಗರದತ್ತ ಬಂದಿರುವ ಗಜಪಡೆಯು ಚನ್ನಪಟ್ಟಣ ನಗರದಿಂದ ಕೇವಲ 1 ಕಿ.ಮೀ ದೂರದಲ್ಲಿ ಬೀಡುಬಿಟ್ಟಿವೆ.
ಇದನ್ನೂ ಓದಿ:Chandrayaan 3: ಶಿಶಿರನ ಮೇಲಿನ ನೀರನ್ನು ಯಾಕೆ ಹುಡುಕಬೇಕು? ಅದಕ್ಕೆ ಯಾಕಿಷ್ಟು ಮಹತ್ವ?
ಅಪ್ಪಕೆರೆ ಕೆರೆಯಲ್ಲಿ ಆರು ಆನೆಗಳಿದ್ದು, ನಗರದತ್ತ ಬಂದ ಆನೆಗಳನ್ನು ಕಂಡು ಚನ್ನಪಟ್ಟಣದ ಜನತೆ ಭಯಭೀತರಾಗಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳ ಸಮೀಪ ಹೋಗದಂತೆ ಜನರಿಕೆ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆ ಕಾಡಾನೆಗಳನ್ನ ಕಾಡಿಗಟ್ಟಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಅಲ್ಲಿಯವರೆಗೆ ಕೆರೆಯಲ್ಲೇ ಗಜಪಡೆ ವಾಸ್ತವ್ಯ ಹೂಡುವಂತೆ ನೋಡಿಕೊಳ್ಳುವುದಾಗಿ ಅರಣ್ಯಾಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು