ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಳ್ಳಿ
Team Udayavani, Jun 23, 2019, 2:40 PM IST
ಕನಕಪುರದ ಚಿಕ್ಕಮುದುವಾಡಿಯಲ್ಲಿ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನದ ಪ್ರಯುಕ್ತ ನಡೆದ ರೈತ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನವನ್ನು ಗಣ್ಯರು ಉದ್ಘಾಟಿಸಿದರು.
ಕನಕಪುರ: ರೈತರು ತಮ್ಮ ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಂಡು ಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಧನಂಜಯ ಹೇಳಿದರು.
ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದುವಾಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ನಡೆದ ರೈತ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಬಲೀಕರಣಕ್ಕಾಗಿ ಈವರೆಗಿನ ಅನೇಕ ಸರ್ಕಾರಗಳು ಕೃಷಿ ವಿಜ್ಞಾನಿಗಳಿಂದ ಅನೇಕ ತಂತ್ರಜ್ಞಾನದ ಅವಿಷ್ಕಾರ ಮಾಡಿದೆ. ಅದನ್ನು ರೈತರು ಬಳಸಿಕೊಂಡು ಲಾಭದಾಯಕ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಂಡು ಸದೃಢರಾಗಬೇಕು. ದೇಶದ ಆಹಾರ ಸಮಸ್ಯೆಯನ್ನು ನೀಗಬೇಕು. ಈ ನಿಟ್ಟಿನಲ್ಲಿ ಅನ್ನದಾತ ತನ್ನ ಕಾಯಕ ಮುಂದುವರಿಸಬೇಕು ಎಂದರು.
ಹೈನುಗಾರಿಕೆ ರೈತರ ಬದುಕಿನ ಒಡನಾಡಿ: ಪಶುಸಂಗೋಪನೆ ಇಲಾಖೆಯ ಡಾ.ನಿಂಗರಾಜು ಮಾತನಾಡಿ, ಇಂದು ಹೈನುಗಾರಿಕೆ ಜಿಲ್ಲೆಯ ಅನೇಕ ರೈತರ ಬದುಕಿನ ಒಡನಾಡಿಯಾಗಿದ್ದು, ಅದರಿಂದ ನಿರ್ದಿಷ್ಟ ಲಾಭದತ್ತ ಮುನ್ನಡೆಯುತ್ತಿದ್ದಾರೆ. ಇದಕ್ಕೆ ಸರ್ಕಾರವೂ ಸಹ ಸಹಾಯಧನದ ರೂಪದಲ್ಲಿ ಹೈನುಗಾರಿಕೆ ಮಾಡುವ ರೈತರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜಿಲ್ಲೆ ಮತ್ತು ತಾಲೂಕು ಹೈನುಗಾರಿಕೆಯಲ್ಲಿ ಮಹತ್ವ ಹೆಜ್ಜೆಗಳನ್ನು ಇಟ್ಟಿದ್ದು, ಅದನ್ನು ಮತ್ತಷ್ಟು ವೃದ್ಧಿಸಿಕೊಂಡು ಆರ್ಥಿಕವಾಗಿ ಮುನ್ನಡೆಯಬೇಕು ಎಂದರು.
ಉತ್ತಮ ಕೃಷಿಕರಾಗಿ: ಮಾಗಡಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಪ್ರೀತು ಮಾತನಾಡಿ, ರೈತರು ಆರೋಗ್ಯವಾಗಿದ್ದರೆ ಅವರು ಮಾಡುವ ಕೃಷಿ ಆರೋಗ್ಯಕರವಾಗಿರುತ್ತದೆ. ಮಣ್ಣಿನಲ್ಲಿ ಸಮಗ್ರ ಪೋಷಕಾಂಶದ ನಿರ್ವಹಣೆ ಅಗತ್ಯವಾಗಿರ ಬೇಕು. ಅದಕ್ಕಾಗಿ ರೈತರು ಪ್ರಥಮವಾಗಿ ಮಣ್ಣು ಪರೀಕ್ಷೆ ಮಾಡಿಸಿ, ನಂತರ ಮಣ್ಣಿಲ್ಲಿ ಇರುವ ಪೋಷಕಾಂಶದ ಕೊರತೆಯನ್ನು ನೀಗಿ, ನಂತರ ಅವರ ಜಮೀನಿನಲ್ಲಿ ಯಾವ ಬೆಳೆ ಉತ್ತಮ ಎಂದು ದೃಢಪಡಿಸಿಕೊಂಡು ಅಂತಹ ಬೆಳೆಯನ್ನು ಬೆಳೆಯುವ ಮೂಲಕ ಉತ್ತಮ ಕೃಷಿಕರಾಗಬೇಕು ಎಂದರು. ರಾಮನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಅಶೋಕ್, ರೇಷ್ಮೆ ಇಲಾಖೆಯ ವಿಸ್ತರಣಾಧಿಕಾರಿ ಸುರೇಶ್, ತೋಟಗಾರಿಕೆ ಇಲಾಖೆಯ ಸುರೇಶ್ಕುಮಾರ್, ತಿಗಳರಹೊಸಹಳ್ಳಿ ಗ್ರಾಮದ ಸಾವಯವ ಕೃಷಿಕರಾದ ಲಕ್ಷ್ಮೀನಾರಾಯಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’