ಹೈನುಗಾರಿಕೆಯಿಂದ ಗ್ರಾಮೀಣ ಯುವಕರಿಗೆ ಉದ್ಯೋಗ: ರವಿ
Team Udayavani, Feb 10, 2020, 4:13 PM IST
ಕನಕಪುರ: ಹೈನುಗಾರಿಕೆಯಲ್ಲಿ ರೈತರು ಸಬಲತೆ ಸಾಧಿಸಲು ಬೆಂಗಳೂರು ಹಾಲು ಒಕ್ಕೂಟ ಬಹಳ ಸಹಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ತಾಲೂಕಿನ ಮರಳವಾಡಿಯಲ್ಲಿ ರಾಜ್ಯ ಹಾಲು ಒಕ್ಕೂಟದ ಮಹಾ ಮಂಡಳಿ ಹಾಗೂ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಸಹಯೋಗದೊಂದಿಗೆ ದಕ್ಷಿಣ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಬ್ಸಿಡಿ ದರದಲ್ಲಿ ದೇಶಿ ತಳಿ ರಾಸುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕಿನ ಹಲವಾರು ನಿರುದ್ಯೋಗ ಯುವಕರು ಉದ್ಯೋಗ ಹರಸಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ.ಅಂತಹ ನಿರುದ್ಯೋಗ ಯುಕರಿಗೆ ಸ್ಥಳಿಯವಾಗಿ ಉದ್ಯೋಗ ಒದಗಿಸಿ ಕೂಟ್ಟು ಹೈನುಗಾರಿಕೆ ಉದ್ಯಮಕ್ಕೆ ಉತ್ತೇಜನ ನೀಡಲು ಹಾಲು ಉತ್ಪಾದಕ ರೈತರಿಗೆ ಸಬ್ಸಿಡಿ ದರದಲ್ಲಿ ದೇಶಿ ತಳಿ ರಾಸುಗಳನ್ನು ವಿತರಿಸಲಾಗುತ್ತಿದೆ ಎಂದರು. ಮೊದಲ ಹಂತವಾಗಿ ಮರಳವಾಡಿಯಲ್ಲಿ 200 ರಾಸುಗಳನ್ನು ವಿತರಿಸಲಾಗುತ್ತಿದ್ದು, 80 ಸಾವಿರದ ರಾಸುಗಳನ್ನು 50 ರಷ್ಟು ಸಬ್ಸಿಡಿ ದರದಲ್ಲಿ ಅಂದರೆ ರೈತರು 40 ಸಾವಿರ ಪಾವತಿಸಿದರೆ, ಸಂಘದ ವತಿಯಿಂದ 40 ಸಾವಿರ ಕೋಟ್ಟು ಉತ್ತಮ ತಳಿಯ ರಾಸುಗಳನ್ನು ನೀಡಲಾಗುತ್ತಿದೆ. ಅಲ್ಲದೆ ರೈತರು ರಾಸು ಖರೀದಿಸಲು ಸಂಘದ ವತಿಯಿಂದ ಶೇ.3 ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಸಪ್ಪ, ಇಕ್ಬಾಲ್ ಹುಸೇನ್,ನಾಗರಾಜು, ಮುನಿ ಹುಚ್ಚೇಗೌಡ, ರಾಮಕೃಷ್ಣ, ಯದುನಂದನ್ಗೌಡ,ಗೌತಮ್ಗೌಡ, ಅಶೋಕ್, ಜಗದೀಶ್, ವೆಂಕಟಸ್ವಾಮಿ, ವರದರಾಜು ಸೇರಿದಂತೆ ಆನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
MUST WATCH
ಹೊಸ ಸೇರ್ಪಡೆ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ