ಚನ್ನಪಟ್ಟಣದಲ್ಲಿಯೂ ಆಟಿಕೆ ಕ್ಲಸ್ಟರ್‌ ಸ್ಥಾಪಿಸಿ


Team Udayavani, Sep 13, 2020, 2:16 PM IST

ಚನ್ನಪಟ್ಟಣದಲ್ಲಿಯೂ ಆಟಿಕೆ ಕ್ಲಸ್ಟರ್‌ ಸ್ಥಾಪಿಸಿ

ರಾಮನಗರ: ಕರಕುಶಲಕರ್ಮಿಗಳ ತವರೂರು, ಬೊಂಬೆ ನಾಡು ಚನ್ನಪಟ್ಟಣದಲ್ಲಿಯೂ ಆಟಿಕೆ ಕ್ಲಸ್ಟರ್‌ ಸ್ಥಾಪಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಸರ್ಕಾರವನ್ನು ಆಗ್ರಹಿಸಿದರು.

ಇಲ್ಲಿನ ಕನಕಪುರ ರಸ್ತೆಯ ಶಾಂತಿನಿಕೇತನ ರೆಸಿಡೆನ್ಸಿಯಲ್‌ ಪಿಯು ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ಕಿ ಬಾತ್‌ನಲ್ಲಿ ಚನ್ನಪಟ್ಟಣದ ಆಟಿಕೆಗಳಬಗ್ಗೆ ಪ್ರಸ್ತಾಪಿಸಿದ್ದಾರೆ. ಇದು ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೆ ಹೆಗ್ಗಳಿಕೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಶಿಲಾನ್ಯಾಸದ ಸಂದರ್ಭದಲ್ಲಿ ಮೋದಿಯವರಿಗೆ ನೀಡಿದ ಶ್ರೀರಾಮನ ವಿಗ್ರಹವೂ ಚನ್ನಪಟ್ಟಣದ್ದು ಎಂದರು.

ಇದೀಗ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ವಿಶ್ವ ದರ್ಜೆಯ ಸೌಕರ್ಯವುಳ್ಳ ಆಟಿಕೆ ಕ್ಲಸ್ಟರ್‌ ಸ್ಥಾಪಿಸಲು ಉದ್ದೇಶಿಸಿದ್ದಾರೆ. ಬೊಂಬೆ ನಾಡಿನಲ್ಲಿ 15 ಸಾವಿರ ಕರಕುಶಲ ಕರ್ಮಿಗಳಿದ್ದಾರೆ. ಇಲ್ಲೂ ಆಟಿಕೆಗಳ ಕ್ಲಸ್ಟರ್‌ ಸ್ಥಾಪಿಸಲಿ ಎಂಬುದಷ್ಟೇ ಹೋರಾಟದ ಉದ್ದೇಶ ಎಂದರು.

ಪ್ರಧಾನಿ ಭೇಟಿ: ಇಲ್ಲಿನ ಡೀಸಿ ಕಚೇರಿ ಎದುರು ಗೊಂಬೆಗಳ ಪ್ರಾತ್ಯಕ್ಷಿಕೆ ಮಾಡಿ ಕರ ಕುಶಲ ಕಾರ್ಮಿಕರ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಮುಖ್ಯ ಮಂತ್ರಿಗಳು, ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಬೊಂಬೆ ಉದ್ಯಮದ ಸಮಸ್ಯೆ ವಿವರಿಸಲಾಗುವುದು ಎಂದರು.

ಕರಕುಶಲ ಕೈಗಾರಿಕೆ ನಿಗಮದ ಅಧಿಕಾರಿ ದೇವರಮನಿ ಮಾತನಾಡಿ, ಐಟಿ ಬಿಟಿ ಕಂಪನಿಗಳಲ್ಲಿ ಗ್ಲಾಸ್‌ ಮುಂತಾದ ವಸ್ತುಗಳ ಬಳಕೆಯಾಗುತ್ತಿದೆ. ಮರದಲ್ಲಿ ಮಾಡಿರುವ ದಿನಬಳಕೆ ವಸ್ತು ಉಪಯೋಗಿಸುವುದರಿಂದ ಬೊಂಬೆ ಉದ್ಯಮವನ್ನು ಜೀವಂತವಾಗಿಸ ಬಹುದು ಎಂದರು.

ತಾಲೂಕು ಹ್ಯಾಂಡಿಕ್ರಾಫ್ಟ್ ನ ಅಧ್ಯಕ್ಷ ಎನ್‌.ರಮೇಶ್‌, ರೈತ ಸಂಘದ ಸುಜೀವನ್‌ಕುಮಾರ್‌ ಮಾತನಾಡಿದರು. ಗಂಟಲು ಕ್ಯಾನ್ಸರ್‌ನಿಂದ ಗಂಟಲಿನ ಅನ್ನನಾಳ ತೊಂದರೆಗೆ ಒಳಗಾದವರಿಗೆ ಮರದಲ್ಲಿ ಮಾಡಿರುವ ನಳಿಕೆ ಕಂಡುಹಿಡಿದಿರುವ ಕೌಸರ್‌ ಮತ್ತು ಕುಸುರಿ ಕೆಲಸದಲ್ಲಿ ನೈಪುಣ್ಯತೆ ಹೊಂದಿ ರಾಜ್ಯ ಪ್ರಶಸ್ತಿ ಪಡೆದಿರುವ ಕೆಂಚಯ್ಯ, ಶಾಂತಿನಿಕೇತನ ರೆಸಿಡೆನ್ಸಿಯಲ್‌ನ ಮಾಲೀಕರಾದ ಕುಮಾರ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆ ಜಿಲ್ಲಾಧ್ಯಕ್ಷ ಬೇವೂರುಯೋಗೀಶ್‌ ಗೌಡ, ರಾಜ್ಯ ಉಪಾಧ್ಯಕ್ಷ ಬೆಂಕಿಶ್ರೀಧರ್‌, ಡಾ.ರಾಜ್‌ ಕಲಾ ಬಳಗದ ಎಲೆಕೇರಿ ಮಂಜು ನಾಥ್‌, ಕರವೇ ಹೋರಾಟಗಾರ ಬಾಬ್‌ ಜಾನ್‌, ದಸಂಸ ವೆಂಕಟೇಶ್‌ (ಶೇಠು) ಸ್ವರಾಜ್‌ ಸಂಘಟನೆ ಸುಕನ್ಯಾ, ರಾಜ್ಯ ಉಪಾಧ್ಯಕ್ಷ ರಂಜಿತ್‌ಗೌಡ, ವಿಧಾನಸೌಧದ ರಮೇಶ್‌, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.