ಅಧಿಕಾರಿಗಳ ಶ್ರಮದಿಂದ ಅತ್ಯುತ್ತಮ ಫ‌ಲಿತಾಂಶ

ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿಂದ ಸರ್ಕಾರಿ ಶಾಲೆಯಲ್ಲಿ ಪಾಠ | ಮಕ್ಕಳಿಗಾಗಿ ಪ್ರಶ್ನೋತ್ತರ ಮಾಲಿಕೆ ಕೈಪಿಡಿ ತಯಾರು

Team Udayavani, May 1, 2019, 3:11 PM IST

ramanagar-tdy-2…

ರಾಮನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳೆದ ಸಾಲಿನಲ್ಲಿ ರಾಜ್ಯದಲ್ಲಿ 17ನೇ ಸ್ಥಾನದಲ್ಲಿದ್ದ ರಾಮನಗರ ಜಿಲ್ಲೆ ಏಕಾಏಕಿ 2ನೇ ಸ್ಥಾನಕ್ಕೆ ಜಿಗಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಕ ಪರಿಶ್ರಮವಿದೆ. ಈ ಪರಿಶ್ರಮಕ್ಕೆ ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಾಲೆಗಳ ಪೂರಕ ಸಹಕಾರ ಕೂಡ ಇತ್ತು.

ಅಧಿಕಾರಿಗಳಿಂದ ಶಾಲೆಗಳ ದತ್ತು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಧಾರಣೆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಮುಲ್ಲೈ ಮುಹಿಲನ್‌ ಹಲವು ಸುಧಾರಣಾ ಕ್ರಮಗಳಿಗೆ ಸಲಹೆ ನೀಡಿದ್ದರು. ಕಳೆದ ಸಾಲಿನಲ್ಲಿ ಶೇ.60ಕ್ಕಿಂತ ಕಡಿಮೆ ಫ‌ಲಿತಾಂಶ ಕೊಟ್ಟ ಶಾಲೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗೆ ಒಂದೊಂದು ಶಾಲೆಯನ್ನು ದತ್ತು ತೆಗೆದುಕೊಳ್ಳುವಂತೆ ಆದೇಶಿಸಿದ್ದರು. ಹೀಗೆ ಶಾಲೆಯನ್ನು ದತ್ತು ಪಡೆದ ಅಧಿಕಾರಿಗಳು ಶಾಲೆಗಳಿಗೆ ಭೇಟಿ ಕೊಟ್ಟು 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಅವರನ್ನು ಪ್ರೋತ್ಸಾಹಿಸಿದ್ದರು. ಕೆಲವು ಅಧಿಕಾರಿಗಳು ತಮಗೆ ಸುಲಭ ಎನಿಸಿದ ವಿಷಯದಲ್ಲಿ ಪಾಠವನ್ನು ಮಾಡಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸೇರಿದಂತೆ ತಾವು ಎದುರಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳು, ತಮಗಿದ್ದ ಸಮಸ್ಯೆಗಳು, ತೊಂದರೆಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಿದ್ದು, ಹೀಗೆ ಹಲವು ಪ್ರೋತ್ಸಾಹದಾಯಕ ಮಾತುಗಳನ್ನಾಡಿದ್ದು ಅಲ್ಲದೆ, ಅನೇಕ ಸಲಹೆ, ಸೂಚನೆಗಳನ್ನು ನೀಡಿದ್ದರು. ಸ್ವಯಂ ಸಿಇಒ ಅವರೇ ಚನ್ನಪಟ್ಟಣದ ಶಾಲೆಯೊಂದಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಸ್ಫೂರ್ತಿ ತುಂಬಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳ ಈ ಕ್ರಮದಿಂದ ವಿಶೇಷವಾಗಿ ಗ್ರಾಮೀಣ ಮಕ್ಕಳಲ್ಲಿ ಸ್ಫೂರ್ತಿ ತುಂಬಲು ಕಾರಣವಾಗಿತ್ತು.

ಟೊಯೋಟಾ ಸಹಕಾರದಲ್ಲಿ ಪ್ರಶ್ನೋತ್ತರ ಮಾಲಿಕೆ: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿಯಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಸರಾಸರಿಗಿಂತ ಕಡಿಮೆ ಇರುವ ವಿದ್ಯಾರ್ಥಿಗಳು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಪಟ್ಟಿ ಮಾಡಲಾಗಿತ್ತು. ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್ ಸಹಕಾರದಲ್ಲಿ ‘ಪರಿಪೂರ್ಣ ಫ‌ಲಿತಾಂಶದೆಡೆ ನಮ್ಮ ನಡೆ’ ಎಂಬ ಘೋಷ ವಾಕ್ಯದಲ್ಲಿ ಯಶಸ್ಸು ಎಂಬ ವಿಷಯವಾರು ಕಿರು ಹೊತ್ತಿಗೆಗಳನ್ನು ಹೊರ ತಂದಿದ್ದರು. ಫ‌ಲಿತಾಂಶ ಉತ್ತಮೀಕರಣಕ್ಕಾಗಿ ಪ್ರತಿ ವಿಷಯದಲ್ಲಿನ ಪಠ್ಯಗಳನ್ನು ಪ್ರಶ್ನೋತ್ತರ ಮಾಲಿಕೆಯ ರೂಪದಲ್ಲಿ ಮುದ್ರಿಸಿದ ಕೈಪಿಡಿಯನ್ನು ಈ ವಿದ್ಯಾರ್ಥಿಗಳಿಗೆ ಕೊಡಲಾಗಿತ್ತು. ಸಂಪೂರ್ಣ ಪಠ್ಯವನ್ನು ಓದಿ ಗ್ರಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳು ಪ್ರಶ್ನೆ ಮತ್ತು ಉತ್ತರವನ್ನು ಓದಿ ಇಡೀ ಪಠ್ಯವನ್ನು ಅರ್ಥ ಮಾಡಿಕೊಳ್ಳುವಂತೆ ಶಿಕ್ಷಕರು ಕೈಪಿಡಿಯನ್ನು ರೂಪಿಸಿದ್ದರು. ಈ ಕೈಪಿಡಿಯು ಫ‌ಲಿತಾಂಶ ಸುಧಾರಣೆಗೆ ಸಹಕಾರಿಯಾಗಿದೆ ಎಂದು ಕೆಲವು ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಖ್ಯ ಶಿಕ್ಷಕರಿಗೆ ವಿಶೇಷ ಕಾರ್ಯಾಗಾರ: ಇದಲ್ಲದೆ ಕಳೆದ ಸಾಲಿನಲ್ಲಿ ಶೇ.60ಕ್ಕಿಂತ ಕಡಿಮೆ ಫ‌ಲಿತಾಂಶ ಬಂದಿರುವ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿಶೇಷ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳನ್ನು ಕಲಿಕೆಯತ್ತ ಮುಖಮಾಡುವ ವಿಚಾರಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಾಗಿತ್ತು. ವಿಶ್ವಾಸ ಕಿರಣ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ನವೆಂಬರ್‌ 2017ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ವಿಶೇಷ ತರಗತಿ ಆಯೋಜಿಸಲಾಗಿತ್ತು. ಪೂರ್ವ ಸಿದ್ಧತಾ ಪರೀಕ್ಷೆಗಳ ಫ‌ಲಿತಾಂಶ ಶಾಲಾವಾರು ವಿಶೇಷ ಅಧ್ಯಯನ ಮಾಡಿ ಉಪಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶಾಲಾ ಪೂರ್ವ ಮತ್ತು ಶಾಲಾ ನಂತರ ವಿಶೇಷ ತರಗತಿಗಳು, ಸುಮಾರು 40 ಶಾಲೆಗಳಲ್ಲಿ ರಾತ್ರಿ ವೇಳೆ ವಿಶೇಷ ತರಗತಿಗಳನ್ನು ಆಯೋಜಿಸಲಾಗಿತ್ತು.

ಆಯಾ ಶಾಲೆಗಳ ಶಿಕ್ಷಕರು ಆಗಾಗ್ಗೆ ವಿದ್ಯಾರ್ಥಿಗಳ ಪೋಷಕರೊಂದಿಗೆ ದೂರವಾಣಿಯ ಮೂಲಕ ಅಥವಾ ಖುದ್ದು ಮನೆಗೆ ಭೇಟಿ ಕೊಟ್ಟು ವಿದ್ಯಾರ್ಥಿಯ ಕಲಿಕೆಯ ಬಗ್ಗೆ ಚರ್ಚಿಸಿದ್ದಾರೆ. ಇಷ್ಟೇಲ್ಲ ಶ್ರಮದಿಂದಾಗಿಯೇ ಫ‌ಲಿತಾಂಶ ಸುಧಾರಣೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಮತ್ತು ಶಿಕ್ಷಕರ ಅಭಿಪ್ರಾಯ.

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.