ಪ್ರತಿಭಟನೆ ನಿರತ ರೈತರು ಭಯೋತ್ಪಾದಕರಲ್ಲ

ಐಎಎಸ್‌, ಐಪಿಎಸ್‌ ಅಧಿಕಾರಿಗಳು ರೈತರ ಮಕ್ಕಳೆಂಬುದನ್ನು ಮರೆಯದಿರಿ : ಬಡಗಲಪುರ ನಾಗೇಂದ್ರ 

Team Udayavani, Feb 6, 2021, 4:57 PM IST

farmer protest

ಮಾಗಡಿ: ರೈತ ವಿರೋಧಿ ಕಾಯ್ದೆ ತಿದ್ದುಪಡಿ ವಾಪಸ್ಸಿಗೆ ಹೋರಾಟ ನಡೆಸುತ್ತಿರುವವರು ಅಪ್ಪಟ ರೈತರೇ ಹೊರತು, ಭಯೋತ್ಪಾದಕರಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಪಟ್ಟಣದ ಕಲ್ಯಾಗೇಟ್‌ ವೃತ್ತದಲ್ಲಿ ತಾಲೂಕು ರೈತಸಂಘ ಮತ್ತು ಹಸಿರು ಸೇನೆಯಿಂದ ವಿಶ್ವ ರೈತರ ದಿನಾಚರಣೆ ಪ್ರಯುಕ್ತ  ಪ್ರಗತಿಪರ ರೈತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ರೈತರ ಚಳವಳಿ ಹತ್ತಿಕ್ಕಲು ರಸ್ತೆಗೆ ಕಾಂಕ್ರೀಟ್‌ ಹಾಕಿ ಕಬ್ಬಿಣ್ಣದ ಸರಳು ಹಾಕಿದ್ದಾರೆ. ದೇಶದ ಅಧಿಪತಿಗಳ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

ದೇಶದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ರೈತರ ಮಕ್ಕಳು ಎಂಬುದನ್ನು ಮರೆಯಬಾರದು. ರೈತ ಪರವಾಗಿ ಅಧಿಕಾರಿಗಳು ನಿಲ್ಲಬೇಕೇ ಹೊರತು, ರಾಜಕಾರಿಣಿಗಳ ಗುಲಾಮರಾಗಬಾರದು. ಸಿನಿಮಾ ನಟರು, ಕ್ರೀಡಾಪಟುಗಳು, ಶಿಕ್ಷಣ ತಜ್ಞರು ರೈತರ ಹೋರಾಟ ಬೆಂಬಲಿಸಿದ್ದಾರೆ. ರೈತ ವಿರೋಧಿ ಕಾಯ್ದೆ ವಾಪಸ್ಸಿಗೆ ಒತ್ತಾಯಿಸಿದ್ದಾರೆ. ಆದರೂ, ಕೇಂದ್ರ ರೈತರ ಧಮನಕಾರಿ ಕೆಲಸಕ್ಕೆ ನಿಂತಿದೆ ಎಂದು ದೂರಿದರು.

ಗಣರಾಜ್ಯೋತ್ಸವದಂದು ಬಾರಿ ರಕ್ಷಣಾ ಪಡೆ ಹೊಂದಿದ್ದರೂ, ನಾಲ್ಕು ದ್ವಾರ ದಾಟಿ ಕೆಂಪುಕೋಟೆ ಮೇಲೆ ಬೇರೆ ಧ್ವಜ ಹಾರಿಸಲು ಹೇಗೆ ಸಾಧ್ಯ. ಧ್ವಜ ಹಾರಿಸಿದವರನ್ನು ಹುಡುಕಿಕೊಟ್ಟರೆ ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಇದೆಲ್ಲ ಸರ್ಕಾರದ ಕುತಂತ್ರ. ಮಸೂದೆಯ ಬಿಲ್‌ ವಾಪಸ್‌ ಮಾಡುವಾಗ ಒಮ್ಮೆಯೂ ರೈತರೊಂದಿಗೆ ಚರ್ಚಿಸಿಲ್ಲ ಎಂದು ಬೇಸರಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ರೈತರ ಹೋರಾಟದಲ್ಲಿ ಕಲ್ಲು ತೂರಿದವರು ಆರ್‌ಎಸ್‌ ಎಸ್‌ ಮತ್ತು ಬಿಜೆಪಿ ಗೂಂಡಾಗಳು. ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಸರ್ಕಾರಗಳು ಜನರನ್ನು ಎತ್ತಿಕಟ್ಟುತ್ತಿವೆ. ರೈತರ ಜೀವನಕ್ಕೆ ಕಂಟಕವಾಗಿರುವ ಕಾಯ್ದೆ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್‌ ಮಾತನಾಡಿ, ಸರ್ಕಾರ ರೈತರನ್ನು ಮಿಶ್ರ ಬೆಳೆ ಬೆಳೆಯಿರಿ ಎಂದು   ಪ್ರೋತ್ಸಾಹಿಸುತ್ತದೆ. ಮಿಶ್ರ ಬೆಳೆ ಬೆಳೆದರೆ ಇದ್ದರೆ ರಾಗಿ ಖರೀದಿಸಲ್ಲ ಎನ್ನುತ್ತಾರೆ. ಈ ಗೊಂದಲ ನಿವಾರಣೆಯಾಗಬೇಕು. ತೊಗರಿ, ಅವರೆ, ತೆಂಗು, ಮಾವಿನ ತೋಟದ ನಡುವೆ ರಾಗಿ ಬೆಳೆದಿದ್ದರೆ ಪಹಣಿಯಲ್ಲಿ ಏಕೆ ರಾಗಿ ಬೆಳೆ ನಮೂದಿಸುವುದಿಲ್ಲ. ಮಾವು ಎಂದು ನಮೂದಿಸಿ ರೈತರನ್ನು ದಿಕ್ಕು ತಪ್ಪಿಸಿರಾಗಿ ಖರೀದಿ ವೇಳೆ ಗೊಂದಲ ಸೃಷ್ಟಿಸುತ್ತಿದೆ ಎಂದರು.

ಇದನ್ನೂ ಓದಿ :ಸಾಗರಕ್ಕೆ ಬುದ್ಧಿ ಕಲಿಸಿದ ಗುಬ್ಬಿ

ರಾಜ್ಯ ಸಂಘದ ಉಪಾಧ್ಯಕ್ಷ ಎಂ.ರಾಮು, ಪುಟ್ಟಸ್ವಾಮಯ್ಯ, ರಾಮೇಗೌಡ, ಚೆನ್ನರಾಯಪ್ಪ, ಲಂಚಮುಕ್ತ ನಿರ್ಮಾಣ ವೇದಿಕೆ  ಜಿಲ್ಲಾಧ್ಯಕ್ಷ ಅರುಣ್‌ ಕುಮಾರ್‌, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ಕಾರ್ಯದರ್ಶಿ ಮಂಜುನಾಥ್‌, ಕವಿತಾ, ಲಕ್ಷ್ಮಮ್ಮ ಡಿ.ಜಿ.ಗಂಗಾಧರಯ್ಯ ಮತ್ತಿತರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.