ದನಗಳ ಜಾತೆ ಉಳಿಸಲು ರೈತರೇ ಜಾಗೃತರಾಗಿ


Team Udayavani, Apr 10, 2019, 12:58 PM IST

cattle

ಮಾಗಡಿ: ಪಾರಂಪರಿಕ ದನಗಳ ಜಾತ್ರೆಗಳು ಜೀವಂತವಾಗಿ ಉಳಿಯಬೇಕಾದರೆ ರೈತರು ಜಾಗೃತರಾಗಬೇಕಿದೆ. ಇಂದಿನ ದಿನಗಳಲ್ಲಿ ದನಗಳ ಜಾತ್ರೆಗಳು ಕಣ್ಮರೆಯಾಗುತ್ತಿರುವುದು ವಿಪರ್ಯಾಸ ಎಂದು ಸಾಹಿತಿ ದೊಡ್ಡಬಾಣಗೆರೆ ಮಾರಣ್ಣ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಹೊಸಪೇಟೆ ಬಳಿ ತಿರುಮಲೆ ಶ್ರೀರಂಗನಾಥಸ್ವಾಮಿ ದನಗಳ ಜಾತ್ರೆಯಲ್ಲಿ ಚೇತಕ್‌ ಅನಿಮಲ್‌ ವೆಲ್‌ಪೇರ್‌ ಟ್ರಸ್ಟ್‌ ಹಾಗೂ ತಾಲೂಕು ರೈತ ಸಂಘದಿಂದ ನಡೆದ ರೈತರಿಗೆ ಸನ್ಮಾನ ಮತ್ತು ದನಗಳಿಗೆ ಉಚಿತ ಔಷಧ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾರಂಪರಿಕ ದನಗಳ ಜಾತ್ರೆಗಳು ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಣ್ಮರೆಯಾಗುತ್ತಿವೆ. ಇದರಿಂದ ರೈತರು ತುಂಬ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಪ್ರತಿ ತಾಲೂಕಿನಲ್ಲಿ ದನಗಳ ಜಾತ್ರೆಗೆ ಕನಿಷ್ಠ 100 ಎಕರೆ ಜಮೀನು ಮೀಸಲಿಡಬೇಕಿದೆ ಎಂದು ಆಗ್ರಹಿಸಿದರು.

ಪ್ರಾಣಿಗಳ ಸೇವೆ ದೇವರಿಗೆ ಪೂಜೆಗೆ ಸಮ: ಕರ್ನಾಟಕದ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ರೈತರು ದನಗಳನ್ನು ಚೆನ್ನಾಗಿ ಸಾಕಿ ಬೆಳೆಸುತ್ತಾರೆ. ಉತ್ತರ ಕರ್ನಾಟಕದ ಕೃಷ್ಣೆ ಕಣಿವೆ ರೈತರು ರಾಸುಗಳನ್ನು ಖರೀದಿಸಿ ಬೇಸಾಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಮೂಖ ಪ್ರಾಣಿಗಳ ಸೇವೆ ಮಾಡುವುದು ದೇವರಿಗೆ ಪೂಜೆಗೆ ಸಮವಾಗಿದೆ. ಪಾರಂಪರಿಕ ಜಾತ್ರೆಗಳನ್ನು ಉಳಿಸಲು ಚೇತಕ್‌ ಅನಿಮಲ್‌ ವೇಲ್‌ಪೇರ್‌ ಟ್ರಸ್ಟ್‌ ಜಾತ್ರೆಯಲ್ಲಿನ ದನ ಜನಗಳಿಗೆ ಉಚಿತವಾಗಿ ನೀರು, ಔಷಧ ನೀಡುತ್ತಿರುವುದು ಜೊತೆಗೆ ರೈತರಿಗೆ ಸ್ಫೂರ್ತಿ ನೀಡಲು ಪ್ರಗತಿಪರ ರೈತರನ್ನು ಸನ್ಮಾನಿಸುವ ಕಾರ್ಯಕ್ರಮ ಶ್ಲಾಘನೀಯ ಎಂದು ತಿಳಿಸಿದರು.

ದೇಶಿ ತಳಿ ಉಳಿಸುವುದು ರೈತರ ಧರ್ಮ: ಚೇತಕ್‌ ಅನಿಮಲ್‌ ವೇಲ್‌ಪೇರ್‌ ಟ್ರಸ್ಟ್‌ ಅಧ್ಯಕ್ಷೆ ಸುಜಾತಾ ಮಾತನಾಡಿ, ಜಾನವಾರುಗಳಿದ್ದರೆ ಮಾತ್ರ ರೈತರ
ಬದುಕು ಹಸನಾಗುತ್ತದೆ. ಅದರಲ್ಲೂ ದೇಶಿ ತಳಿಗಳನ್ನು ಜೀವಂತವಾಗಿ ಉಳಿಸುವುದು ರೈತರ ಧರ್ಮವಾಗಿದೆ. ವಿದೇಶಿ ತಳಿ ಸಾಕುವುದರಿಂದ ತಾತ್ಕಾಲಿಕವಾಗಿ ಆರ್ಥಿಕ ವೃದ್ಧಿಸಬಹುದು. ಆದರೆ, ದೇಶಿ ತಳಿ ಅಭಿವೃದ್ಧಿ ಪಡಿಸಿದರೆ ರೋಗ ಮುಕ್ತ ಜೀವನ ನಡೆಸಬಹುದು. ಕ್ಯಾನ್ಸರ್‌ ರೋಗ ತಡೆಗೆ ದೇಶಿ ತಳಿಯ ಅವಶ್ಯವಿದೆ. ದನಗಳ ರೋಗ ಮುಕ್ತಿಗಾಗಿ ಉಚಿತ ಔಷಧ ವಿತರಣೆ ಮಾಡಲಾಗುತ್ತಿದೆ. ರೈತರು ಸಹ ಜಾತ್ರೆಗಳು ಜೀವಂತ ಉಳಿವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದರು.

ರೈತರ ನೋವಿಗೆ ಸ್ಪಂದಿಸುವ ಜನರಿಲ್ಲ: ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಮಾತನಾಡಿ, ರೈತರ ಸಮಸ್ಯೆಗಳಿಗೆ ರಾಜಕಾರಣಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಮೊದಲು ದನಗಳ ಜಾತ್ರೆ ಬಂರು ಎಂದರೆ ಸಾಕು ಸುತ್ತಮುತ್ತಲ ಜನರು ರೈತರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು, ವಸತಿ, ರಾಸುಗಳಿಗೆ ನೆರಳಿನ ವ್ಯವಸ್ಥೆ ಮಾಡುತ್ತಿದ್ದರು. ಕಾಲ ಬದಲಾದಂತೆ ರೈತರ ನೋವಿಗೆ ಸ್ಪಂದಿಸುವ ಜನರೇ ಇಲ್ಲದಂತಾಗಿದೆ ಎಂದು ಹೇಳಿದರು.

ಜಾಗ ಭೂ ದಾಹಿಗಳ ಪಾಲು: ಜಾತ್ರೆ ನಡೆಸುತ್ತಿದ್ದ ಜಾಗ ಭೂದಾಹಿಗಳ ಪಾಲಾಗಿದೆ. ಗುಂಡುತೊಪುಗಳು ಸಹ ಇಲ್ಲದಂತಾಗಿದೆ. ಕಲ್ಯಾಣಿಗಳು ಕಣ್ಮರೆಯಾಗಿವೆ. ಹೀಗೆ ಮುಂದುವರಿದರೆ ದನಗಳಿಗಲ್ಲ, ಜನರು ನಿಲ್ಲುವುದಕ್ಕೂ ಸುಂಕ ಕೊಡಬೇಕಾದ ಪರಿಸ್ಥಿತಿ ಬರಬಹುದು. ಸರ್ಕಾರ ಎಚ್ಚೆತ್ತುಕೊಂಡು ಜಾತ್ರೆಗೆ ಬರುವ ರೈತರಿಗೆ ಸ್ಥಳ ಮೀಸಲಿಟ್ಟು ಅನುಕೂ ಕಲ್ಪಿಸಬೇಕಾಗಿದೆ ಎಂದು ತಿಳಿಸಿದರು. ಈ ವೇಳೆಯಲ್ಲಿ ಜಡೇದೇವರ ಮಠದ ಇಮ್ಮಡಿ ಬಸವರಾಜ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ತಿರುಮಲೆ ಮಲ್ಲಿಗೆ ನಾಗರಾಜು, ಪಟೇಲ್‌ ನಾಗರಾಜು, ಸೀತಾರಾಮಗೌಡ, ಮಧುಗೌಡ, ಬೆಳಗವಾಡಿ ಗಂಗಯ್ಯ, ರಂಗಸ್ವಾಮಿ, ಹನುಮಂತಯ್ಯ, ದೊಡ್ಡರಂಗಯ್ಯ, ಲಕ್ಷ್ಮೀಪತಿ, ದೇವರಾಜು, ಮೂರ್ತಿ ರಂಗಸ್ವಾಮಯ್ಯ, ಕುಮಾರ್‌, ರವಿ, ಜಗದೀಶ್‌, ಶಿವಣ್ಣ ಇತರರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.