ರೈತರ ಸಾಲ ಮನ್ನಾ ಇನ್ನೂ ಆಗಿಲ್ಲ


Team Udayavani, Jan 25, 2019, 6:44 AM IST

raitrar.jpg

ರಾಮನಗರ: ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ, ಇನ್ನೂ ಸಾಲ ಮನ್ನಾ ಆಗಿಲ್ಲ, ಇನ್ನೊಂದೆಡೆ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ ರೈತ ಭವನದಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿ, ಡಿಸಿಸಿ ಬ್ಯಾಂಕ್‌ ಅಧಿಕಾರಿಗಳನ್ನು ವಿಚಾರಿಸಿದರೆ ತಮಗಿನ್ನು ಸರ್ಕಾರದಿಂದ ಸಾಲ ಮನ್ನಾ ಮಾಡುವ ಬಗ್ಗೆ ನಿಯಮಾವಳಿಗಳು ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿಗಳಿಗೆ ಮನಸ್ಸೇ ಇಲ್ಲ: ಪ್ರೊ.ನಂಜುಂಡಸ್ವಾಮಿ ಅವರ ಪ್ರಕಾರ ದೊಡ್ಡ ರೈತ, ದೊಡ್ಡ ಸಾಲಗಾರ. ಆದರೆ, ಇಲ್ಲಿ ಮುಖ್ಯಮಂತ್ರಿಗಳಿಗೆ ಇವರ ಸಾಲ ಮನ್ನಾಕ್ಕೆ ಮನಸ್ಸೇ ಇಲ್ಲ. ರೈತರು ಹೈನೋದ್ಯಮ, ಟ್ರ್ಯಾಕ್ಟರ್‌ ಮುಂತಾದ ಕೃಷಿ ಮತ್ತು ಪರ್ಯಾಯ ಕೃಷಿ ಪದ್ಧತಿಗಳಿಗೆ ಮಾಡಿರುವ ಎಲ್ಲಾ ಸಾಲವನ್ನು ಮನ್ನಾ ಮಾಡಬೇಕು. ಎಪಿಎಂಸಿ ಒಳ ಬರಲು ರೈತರಿಗೆ ಪ್ರವೇಶ ಚೀಟಿಯನ್ನು ಕೊಡಬೇಕು. ಎಪಿಎಂಸಿ ಯಾರ್ಡುಗಳು ದಲ್ಲಾಳಿಗಳ ಮಾರುಕಟ್ಟೆಯಾಗಿದೆ. ಈ ಬಗ್ಗೆ ಎಪಿಎಂಸಿ ಸಮಿತಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಕೊಲೆ ಮಾಡುವ ಮಟ್ಟಕ್ಕೆ ಇಳಿದ ಶಾಸಕರು: ರೈತ ಸಂಘದ ರಾಜ್ಯ ಉಪಾಧ್ಯಕ್ಷ ರಾಮು ಮಾತನಾಡಿ, ಇಂದು ಚುನಾಯಿತ ಪ್ರತಿನಿಧಿಗಳು ಕೊಲೆ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಈಗಲ್ಟನ್‌ ರೆಸಾರ್ಟ್‌ನಲ್ಲಿ ಕೈ ಶಾಸಕರ ಮಾರಾಮಾರಿ ಪ್ರಕರಣವನ್ನು ಖಂಡಿಸಿದರು. ಮತದಾರರು ಜಾಗೃತರಾಗಿದ್ದು, ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಮೀಷನ್‌ ಕಡಿವಾಣಕ್ಕೆ ಕಾಯ್ದೆ ಜಾರಿ ಮಾಡಿ: ಎಪಿಎಂಸಿಗಳಲ್ಲಿ ಕಮೀಷನ್‌ ದಂಧೆಯಿಂದ ರೈತರು ಹೈರಾಣಾಗಿದ್ದಾರೆ. ಕಮೀಷನ್‌ ದಂಧೆಗೆ ಕಡಿವಾಣ ಹಾಕಲು ಕಾಯ್ದೆಯನ್ನು ಜಾರಿ ಮಾಡಬೇಕು. ಸಿಎಂ ಕುಮಾರಸ್ವಾಮಿ ಅವರು ಇತ್ತೀಚಿಗೆ ತಮ್ಮ ಭಾಷಣದಲ್ಲಿ ಎಪಿಎಂಸಿಗಳ ಮೂಲಕವೇ ರೈತರ ಉತ್ಪನ್ನಗಳನ್ನು ಖರೀದಿ ಮಾಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಈ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಪ್ರಮುಖರಾದ ಪಾಪಣ್ಣ, ರಾಜಣ್ಣ, ಲೋಕೇಶ್‌, ಪುಟ್ಟಸ್ವಾಮಿ, ಕೃಷ್ಣಯ್ಯ, ಮುನಿರಾಜು ಸೇರಿದಂತೆ ರೈತರು ಹಾಜರಿದ್ದರು.

ಪ್ರಸಕ್ತ ಸಾಲಿನ ಆಯವ್ಯಯ ತಾಯಾರಿಕೆಗೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಈ ಸಂಬಂಧ ರೈತರ ಸಲಹೆಗಳನ್ನು ಕೇಳಲು ಸಭೆ ಕರೆದಿದ್ದಾರೆ. ತಾವು ಸಹ ಈ ಸಭೆಯಲ್ಲಿ ಭಾಗವಹಿಸಲಿದ್ದು, ಭವಿಷ್ಯದಲ್ಲಿ ರೈತ ಮತ್ತೆ ಸಾಲಗಾರನಾಗಬಾರದು ಅಂತಹ ವ್ಯವಸ್ಥೆ ಜಾರಿಗೆ ಆಯವ್ಯಯ ಸಿದ್ಧಪಡಿಸುವಂತೆ ಸಲಹೆ ನೀಡಲಾಗುವುದು. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಕೃಷಿ ಬೆಲೆ ಆಯೋಗ ಸ್ಥಾಪನೆ ಆಗಿದೆ.

ಆದರೆ, ಈ ಆಯೋಗದ ಹೊಣೆ ಕೇವಲ ರಾಗಿ ಮತ್ತು ಭತ್ತಕ್ಕೆ ಮಾತ್ರ ಸೀಮಿತವಾಗಿದೆ. ರೇಷ್ಮೆ ಗೂಡಿನ ಧಾರಣೆ ದಿನೇ ದಿನೆ ಇಳಿಮುಖವಾಗುತ್ತಿದೆ. ಬೇಡಿಕೆಯೂ ಕುಸಿಯುತ್ತಿದೆ. ರೇಷ್ಮೆ ಗೂಡು ಕೃಷಿಯನ್ನು ಉಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ರಾಮು ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.