Farmers: ರೇಷ್ಮೆಗೂಡಿನ ಬೆಲೆ ಕುಸಿತ; ಕಂಗಾಲಾದ ರೈತ


Team Udayavani, Feb 1, 2024, 4:40 PM IST

Farmers: ರೇಷ್ಮೆಗೂಡಿನ ಬೆಲೆ ಕುಸಿತ; ಕಂಗಾಲಾದ ರೈತ

ರಾಮನಗರ: ಜಿಲ್ಲೆಯ ಪ್ರಮುಖ ಬೆಳೆಯಾಗಿರುವ ರೇಷ್ಮೆ ಮತ್ತೆ ಬೆಲೆ ಕುಸಿತಕ್ಕೆ ಸಿಲುಕಿದ್ದು, ಕೆಲ ದಿನಗಳಿಂದ ಗಣನೀಯವಾಗಿ ರೈತರು ಬೆಳೆದ ರೇಷ್ಮೆಗೂಡಿನ ಬೆಲೆ ಕಡಿಮೆಯಾಗಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ದೊರೆಯುತ್ತಿರುವ ರೇಷ್ಮೆಗೂಡಿನ ಬೆಲೆ 5 ವರ್ಷಗಳ ಹಿಂದಿನ ಬೆಲೆಗೆ ಸರಿಸಮಾನವಾಗಿದ್ದು, ಬೆಲೆ ಏರಿಕೆಯ ಸಮಯದಲ್ಲಿ ಸಾಲ ಸೋಲ ಮಾಡಿ ಬೆಳೆ ಬೆಳೆದ ರೈತರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಸಿಬಿಗೋಲ್ಡ್‌ ತಳಿಯ ರೇಷ್ಮೆ ಗೂಡಿಗೆ ಪ್ರತಿ ಕೆ.ಜಿ.ಗೆ ಸರಾಸರಿ 387 ರೂ. ಬೆಲೆ ಸಿಗುತ್ತಿದ್ದು, ದಿನೇ ದಿನೆ ಬೆಲೆ ಕುಸಿತವಾಗುತ್ತಿದೆ. ಕೆಲ ತಿಂಗಳ ಹಿಂದೆ ರೇಷ್ಮೆಗೂಡಿನ ಬೆಲೆ 700 ರೂ.ಆಸುಪಾಸು ಇತ್ತು. ಇದೀಗ ದೊರೆಯುತ್ತಿರುವ ಬೆಲೆಯಿಂದ ಬೆಳೆ ಬೆಳೆಯಲು ಮಾಡಿದ ಖರ್ಚು ರೈತರಿಗೆ ಸಿಗದಂತಾಗಿದೆ.

ಪ್ರತಿ ಕೆ.ಜಿ.ಗೆ 400 ರೂ. ಖರ್ಚು: ಹೆಚ್ಚಿದ ಕೂಲಿಹಣ, ವಿದ್ಯುತ್‌ ಸಮಸ್ಯೆ, ರಸಗೊಬ್ಬರ, ಔಷಧಗಳ ಬೆಲೆ ಹೆಚ್ಚಳ, ಚಾಕಿ ಹುಳುಗಳ ಬೆಲೆ ಹೆಚ್ಚಳ ಹೀಗೆ ಹಲವು ಕಾರಣಗಳಿಂದಾಗಿ ಪ್ರತಿ ಕೆ.ಜಿ. ರೇಷ್ಮೆಗೂಡನ್ನು ಉತ್ಪಾದನೆ ಮಾಡರು ರೈತರಿಗೆ 350 ರೂ.ಗಳಿಂದ 400ರೂ. ವರೆಗೆ ಖರ್ಚಾಗುತ್ತದೆ. ಸ್ವಂತ ಜಮೀನಿದ್ದು ಹಿಪ್ಪುನೇರಳೆ ಸೊಪ್ಪನ್ನು ತಾವೆ ಬೆಳೆದರೆ ಖರ್ಚಿನ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದು, ಬೇರೆಯವರ ಬಳಿ ಸೊಪ್ಪನ್ನು ಖರೀದಿ ಮಾಡಿದರೆ ರೈತರ ಖರ್ಚು ಇನ್ನೂ ಹೆಚ್ಚಾಗಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಬೆಳೆ ಬೆಳೆಯಲು ಮಾಡಿದ ಖರ್ಚಿಗೂ ಸಿಗದಾಗಿದೆ ಎಂಬುದು ರೈತರ ಅಭಿಪ್ರಾಯವಾಗಿದೆ.

ಬೆಲೆ ಕುಸಿತ ಯಾಕೆ?: ರೇಷ್ಮೆ ಬೆಲೆ ಕುಸಿತವಾಗಿರುವುದಕ್ಕೆ ಮುಖ್ಯಕಾರಣ ರೇಷ್ಮೆ ಉತ್ಪಾದನೆ ಹೆಚ್ಚಾಗಿದ್ದು, ಬೇಡಿಕೆ ಕುಸಿತಗೊಂಡಿರುವುದು. ರೇಷ್ಮೆ ನೂಲಿನ ಬೇಡಿಕೆ ಕುಸಿತಗೊಂಡಿದೆ. ಇದರೊಂದಿಗೆ ರೇಷ್ಮೆ ಗೂಡಿನ ಉತ್ಪಾದನೆಯೂ ಹೆಚ್ಚಾಗಿದೆ. ಈ ಕಾರಣದಿಂದಾಗಿ ರೇಷ್ಮೆಗೂಡಿನ ಬೆಲೆ ಕಡಿಮೆಯಾಗುತ್ತಿದ್ದು ಇದಕ್ಕೆ ಹೊರದೇಶದಿಂದ ರೇಷ್ಮೆ ಬರುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯ ರೀಲರ್‌ಗಳು ಹೇಳುತ್ತಿದ್ದಾರೆ.

ಸರ್ಕಾರ ಮಧ್ಯ ಪ್ರವೇಶಿಸಲಿ: ರೇಷ್ಮೆ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. 2011ರಲ್ಲಿ ರೇಷ್ಮೆ ಗೂಡಿಗೆ ಪ್ರತಿಕೆಜಿಗೆ 300ರೂ.ಬೆಲೆ ಇರಬೇಕು ಎಂದು ಸರ್ಕಾರ ನಿಗದಿ ಮಾಡಿದ್ದು, ಅದಕ್ಕಿಂತ ಕಡಿಮೆಯಾದಲ್ಲಿ ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಜಾರಿಗೆ ತಂದಿತ್ತು. 13 ವರ್ಷ ಕಳೆದರೂ ಈ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಸರ್ಕಾರ 500 ರೂ.ಗಳಿಗೆ ರೇಷ್ಮೆಗೂಡಿನ ದರವನ್ನು ನಿಗದಿಪಡಿಸಿ ಬೆಲೆ ಕುಸಿತ ಕಂಡಲ್ಲಿ ಬೆಂಬಲ ಬೆಲೆ ನೀಡುವ ಯೋಜನೆಯನ್ನು ಜಾರಿಗೆ ತರಲಿ ಎಂದು ರೇಷ್ಮೆ ಬೆಳೆಗಾರರು ಆಗ್ರಹಿಸಿದ್ದಾರೆ.

ರೇಷ್ಮೆ ಬೆಲೆ 400ಕ್ಕಿಂತ ಕಡಿಮೆ ಸಿಗುತ್ತಿದ್ದು, ರೈತರಿಗೆ ಏನೇನೂ ಸಿಗದಂತಾಗಿದೆ. ಒಂದು ಕೆ.ಜಿ.ಗೂಡಿಗೆ ಕನಿಷ್ಠ 500 ರೂ.ಬೆಲೆ ಸಿಕ್ಕರೆ ನಾವು ಮಾಡಿದ ಖರ್ಚು ಸರಿಯೋಗುತ್ತದೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ರೇಷ್ಮೆಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಬೇಕು. ●ಕೆಂಪೇಗೌಡ ಹುಲುವಾಡಿ, ರೇಷ್ಮೆ ಬೆಳೆಗಾರ

ರೇಷ್ಮೆ ಗೂಡಿನ ಬೆಲೆ ತೀರಾ ಕಡಿಮೆಯಾಗಿಲ್ಲ. ಕಳೆ ವರ್ಷಕ್ಕೆ ಹೋಲಿಕೆ ಮಾಡಿದರೆ ಕಡಿಮೆ ಎನಿ ಸುತ್ತಿದೆ ಅಷ್ಟೇ. ಜಿಲ್ಲೆಯಲ್ಲಿ ರೇಷ್ಮೆ ಗೂಡಿನ ಉತ್ಪಾದನೆ ಹೆಚ್ಚಾಗಿದ್ದು, ಕಳೆದ ಸಾಲಿಗಿಂತ ಹೆಚ್ಚು ಗೂಡು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಲೆ ಸ್ವಲ್ಪ ಕಡಿಮೆ ಎನಿಸಿದರೂ. ಸರಾಸರಿ ಗಣನೆಗೆ ತೆಗೆದು ಕೊಂಡರೆ ಬೆಲೆ ತೀರಾ ಕಡಿಮೆಯಾಗಿಲ್ಲ. –ಮಲ್ಲಿಕಾರ್ಜುನ್‌, ಉಪನಿರ್ದೇಶಕರು, ರೇಷ್ಮೆ ಗೂಡಿನ ಮಾರುಕಟ್ಟೆ ರಾಮನಗರ

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.