![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಕಸ ವಿಲೇವಾರಿ ಘಟಕಕ್ಕೆ ರೈತರ ವಿರೋಧ
Team Udayavani, Sep 25, 2020, 12:37 PM IST
![rn-tdy-1](https://www.udayavani.com/wp-content/uploads/2020/09/rn-tdy-1-16-620x372.jpg)
ಸಾಂದರ್ಭಿಕ ಚಿತ್ರ
ಕನಕಪುರ: ಕೃಷಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಕಸ ವಿಲೇವಾರಿ ಘಟಕ ನಿರ್ಮಾಣ ತಡೆಯಲು ಬಂದ ರೈತರ ಮೇಲೆ ಕೆಲವು ರಾಜಕಾರಣಿಗಳು ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ಸ್ಥಳಿಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಸಾತನೂರು ಹೋಬಳಿ ಸೂರನಹಳ್ಳಿ ಗ್ರಾಮದ ಸರ್ವೆ ನಂ.17ರ ಬಳಿ ಇರುವ ಬಾಪೂಜಿ ಕಾಲೋನಿ ಬಳಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಕಾಮಗಾರಿ ಆರಂಭಿಸುತ್ತಿದ್ದಂತೆ ಸ್ಥಳಕ್ಕೆ ಬಂದ ರೈತರು ಪ್ರತಿಭಟನೆ ಆರಂಭಿಸಿದರು.
ಪ್ರಭಾವಿ ರಾಜಕಾರಣಿಗಳ ಬೆಂಬಲವಿದೆ ಎಂದು ಸ್ಥಳಿಯ ರಾಜಕಾರಣಿಗಳು ಬಡವರಕೃಷಿ ಭೂಮಿಯಲ್ಲಿಕಸ ವಿಲೇವಾರಿ ಘಟಕ ನಿರ್ಮಿಸಿ ನಮ್ಮ ಜೀವನಕ್ಕೆ ಆಧಾರವಾಗಿರುವ ಕೃಷಿ ಭೂಮಿ ಕಿತ್ತುಕೊÙಲು Û ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.
ಇಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಯಾದರೆ, ಸುತ್ತಮುತ್ತಲ ಕೆರೆಕುಂಟೆಗಳು ಮಲೀನವಾಗುತ್ತವೆ.ಈ ಕಸವಿಲೇವಾರಿಘಟಕ ಸ್ಥಾಪಿಸಲು ಮುಂದಾಗಿರುವ ಜಮೀನಿನ ಪಕ್ಕದಲೇ ಆನೇಕ ಗ್ರಾಮಗಳಿಗೆ ಸಂಪರ್ಕ ಕಲಿಸುವ ರಸ್ತೆ ಇದೆ. ಪುಣ್ಯ ಪ್ರಸಿದ್ಧ ಕಬ್ಟಾಳಮ್ಮನ ದೇವಾಲಯಕ್ಕೆ ಬರುವ ಬರುವ ಭಕ್ತರಿಗೂ ಇದರಿಂದ ತೊಂದರೆ ತಪ್ಪಿದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಅನುಮೋದನೆ ಪಡೆದು ಪ್ರಸ್ತುತ ಘಟಕವನ್ನು ಹೊಸಕಬ್ಟಾಳು ಗ್ರಾಮದ ಸರ್ವೆ ನಂ.26ರ ಜಾಗದಲ್ಲಿ ಘಟಕ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಅಲ್ಲಿನ ಸ್ಥಳಿಯ ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲ್ಲಿ ಕಾಮಗಾರಿ ನಡೆಸಲು ಬಂದಿದ್ದಾರೆ. ಕಾಮಗಾರಿ ಆರಂಭಕ್ಕೂ ಮುನ್ನ ಇಲ್ಲಿನ ಸಾಧಕ ಬಾಧಕಗಳನ್ನು ತಿಳಿಯದೆ ಘಟಕ ಸ್ಥಾಪಿಸಲು ಮುಂದಾಗಿರುವುದು ಸರಿಯಲ್ಲ. ರೈತ ವಿರೋಧಿ ಕಾಮಗಾರಿಯನ್ನು ನಿಲ್ಲಿಸದಿದ್ದರೆ, ವಿಧಾನಸೌಧ ಹಾಗೂ ಕಂದಾಯ ಸಚಿವರ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಸವೇಗೌಡ, ಸೋಮಶೇಖರ್, ಗೌರಮ್ಮ, ಭಾಗ್ಯ ಶಿವಶಂಕರ್, ಶಿವಮ್ಮಬೋರೇಗೌಡ,ಭಾಗ್ಯಮ್ಮ ತಮ್ಮಯ್ಯ, ಪ್ರಭು, ಪ್ರಶಾಂತ್, ಗ್ರಾಪಂ ಮಾಜಿ ಸದಸ್ಯ ಸಿದ್ದರಾಜು, ಮಲ್ಲೇಶ್, ಮಲ್ಲಿಕಾರ್ಜುನ್ ಹಲವರಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.