ಭೂಸ್ವಾಧೀನ ಪ್ರಕ್ರಿಯೆ: ಸಚಿವರ ಕಾಲಿಗೆ ಬಿದ್ದ ರೈತರು!


Team Udayavani, Aug 9, 2022, 4:09 PM IST

ಭೂಸ್ವಾಧೀನ ಪ್ರಕ್ರಿಯೆ: ಸಚಿವರ ಕಾಲಿಗೆ ಬಿದ್ದ ರೈತರು!

ಮಾಗಡಿ: ನಾರಸಂದ್ರ ಮತ್ತು ಶಿವನಸಂದ್ರ ಬಳಿ ಕೈಗಾರಿಕೆ ಸ್ಥಾಪನೆಗೆ ಕೆಐಎಡಿಬಿಗೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಭೂಮಿ ಕಳೆದುಕೊಳ್ಳುತ್ತಿರುವ ನೂರಾರು ರೈತರು, ಜಿಲ್ಲಾ ಉಸ್ತವಾರಿ ಸಚಿವರ ಡಾ.ಸಿ.ಎನ್‌.ಅಶ್ವತ್ಥ್ನಾರಾಯಣ ಅವರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಮನವಿ ಮಾಡಿದರೂ, ಭರವಸೆಯಷ್ಟೆ ನೀಡಿ ಸಚಿವರು ಮುನ್ನಡೆದರು.

ತಾಲೂಕಿನ ಮರೂರು ಹ್ಯಾಂಡ್‌ ಫೋಸ್ಟ್‌ ಬಳಿ ಜಿಲ್ಲಾ ಉಸ್ತವಾರಿ ಸಚಿವರು ಕುದೂರಿಗೆ ತೆರಳಲು ಮರೂರು ಹ್ಯಾಂಡ್‌ ಫೋಸ್ಟ್‌ ಬಳಿ ಬರುತ್ತಿದ್ದಂತೆ ನೂರಾರು ರೈತರು ಸಚಿವರ ಕಾಲಿಗೆ ಬಿದ್ದು, ಕಣ್ಣೀರಿಟ್ಟು ಕೆಐಎಡಿಬಿಗೆ ಭೂಸ್ವಾಧೀನ ಕೈಬಿಡುವಂತೆ ಮನವಿ ಮಾಡಿ ಅಂಗಲಾಚಿದರು. ಈ ವೇಳೆ ಮಾತನಾಡಿದ ಸಚಿವರು, ನಿಮ್ಮ ಬಗ್ಗೆ ಮಾತ್ರವಲ್ಲ, ನಿರುದ್ಯೊಗಿಗಳ ಬಗ್ಗೆಯು ಚಿಂತಿಸಬೇಕಿದೆ. ಸಭೆ ಕರೆಯುತ್ತೇನೆ ಚರ್ಚಿಸೋಣ ಎಂದು ಕಾರು ಏರಿದರು. ಕಾರಿಗೆ ಮುತ್ತಿಗೆ ಹಾಕಿ ರೈತರು ಮನವಿ ಮಾಡಿದರೂ ಸಚಿವರು ಕ್ಯಾರೆ ಎನ್ನದೆ ಮುನ್ನಡೆದರು.

ರೈತ ಜಯರಾಮಯ್ಯ(ಬಾಬಣ್ಣ)ಮಾತನಾಡಿ, ಈ ದೇಶದಲ್ಲಿ ರೈತರಿಗೆ ಕಣ್ಣೀರು ಬರಿಸಿ ಯಾವ ರಾಜಕಾರಿಣಿಯೂ ಉದ್ಧಾರವಾದ ಉದಾಹರಣೆಯಿಲ್ಲ. ಕೈಗಾರಿಕೆ ಸ್ಥಾಪನೆ ಮಾಡಿದ್ದೆ ಆದರೆ ರೈತರ ಕಣ್ಣೀರಿನ ಶಾಪ ಶಾಸಕರಿಗೆ ತಟ್ಟೆ ತಟ್ಟುತ್ತದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ ಕೇಂದ್ರದ ಬಳಿ ಟೇಬಲ್‌ ಹಾಕಲು ಬಿಡುವುದಿಲ್ಲ, ಎಂದು ಎಚ್ಚರಿಸಿದರು.

ಶಾಸಕರ ಬೆಂಬಲ ಅಗತ್ಯ: ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇವರು ರೈತರ ಪರವಾಗಿದ್ದಾರೆ. ಆದ್ದರಿಂದಲೇ ಈ ಭಾಗದಲ್ಲಿ ರೈತರು ಜೆಡಿಎಸ್‌ಗೆ ಹೆಚ್ಚು ಮತ ನೀಡಿ ಗೆಲ್ಲಿಸಿಕೊಳ್ಳುತ್ತಿರುವುದು. ಅಲ್ಲದೆ, ಮೈಸೂರು ಭಾಗದಲ್ಲಿಯೂ ಜೆಡಿಎಸ್‌ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕ ಎ. ಮಂಜುನಾಥ್‌ ಅವರನ್ನು ಗೆಲ್ಲಿಸಿಕೊಂಡಿದ್ದೇವೆ. ರೈತರ ಹೋರಾಟಕ್ಕೆ ಶಾಸಕ ಎ.ಮಂಜುನಾಥ್‌ ಬೆಂಬಲ ನೀಡಬೇಕಿದೆ ಎಂದರು.

ನಮಗೆ ಉದ್ಯೋಗದ ಅವಶ್ಯಕತೆಯಿಲ್ಲ: ರೈತ ಕುಟುಂಬಗಳು ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಬಂದಿರುವುದು ದುರಾದುಷ್ಟಕರ. ನಾರಸಂದ್ರ ಮತ್ತು ಶಿವನಸಂದ್ರದ ಸುತ್ತಮುತ್ತಲಿನ ಫ‌ಲವತ್ತಾದ ಭೂಮಿಯಿದ್ದು, ಯಾವುದೇ ಕಾರಣಕ್ಕೂ ಕೈಗಾರಿಕೆ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ನಮ್ಮ ಫ‌ಲವತ್ತಾದ ಭೂಮಿಯಿಂದ ಬದುಕು ಕಟ್ಟಿಕೊಂಡಿದ್ದೇವೆ. ಮಕ್ಕಳನ್ನು ಉನ್ನತ ವಿದ್ಯಾಧ್ಯಾಸ ಕೊಡಿಸಿದ್ದೇವೆ. ಅಡಕೆ, ತೆಂಗು, ಶುಂಠಿ, ಏಲಕ್ಕಿ ಬೆಳೆದು ಲಕ್ಷಾಂತರ ರೂ. ಸಂಪಾದಿಸುತ್ತಿದ್ದೇವೆ. ನಮಗೆ ಉದ್ಯೋಗದ ಅವಶ್ಯಕತೆಯಿಲ್ಲ ಎಂದರು.

ಯುವ ಮುಖಂಡ ಕುಮಾರ್‌, ಸಾಗರ್‌ಗೌಡ, ಮುನಿರಾಜು, ಶಂಕರ್‌, ರಾಜಣ್ಣ ರಮೇಶ್‌ ಹಾಗೂ ರೈತರು ಇದ್ದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.