ರೈತ ಸಭೆ: ನಿಗದಿತ ಸಮಯಕ್ಕೆ ಬಾರದ ಅಧಿಕಾರಿಗಳು


Team Udayavani, Mar 6, 2023, 2:35 PM IST

tdy-9

ಮಾಗಡಿ: ತಾಲೂಕು ಕಚೇರಿಯಲ್ಲಿ ನಡೆದ ರೈತರ ಸಭೆಗೆ ಅಧಿಕಾರಿಗಳು ನಿಗದಿತ ಸಮಯ ಮೀರಿ ಎರಡು ಗಂಟೆಯಾದರೂ ಬಾರದ ಹಿನ್ನಲೆ, ರೈತ ಸಂಘದ ಪದಾಧಿಕಾರಿಗಳು ಸಭೆ ಬಹಿಷ್ಕರಿಸಿ ಹೊರ ನಡೆಯುವ ವೇಳೆ ತಹಶೀಲ್ದಾರ್‌ ಸುರೇಂದ್ರಮೂರ್ತಿ ರೈತರನ್ನು ಮನವೊಲಿಸಿ ಸಭೆ ನಡೆಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ನಿಗದಿಯಾಗಿದ್ದ ಸಭೆಗೆ ತಹಶೀಲ್ದಾರ್‌ ಒರತು ಪಡಿಸಿ ಬೆಸ್ಕಾಂ ಎಇಇ, ಆರೋಗ್ಯಾಧಿಕಾರಿ, ಕೆಎಸ್‌ಆರ್‌ಟಿಸಿ ಮ್ಯಾನೇಜರ್‌, ಅಬಕಾರಿ ಅಧಿಕಾರಿಗಳು ಎರಡು ಗಂಟೆ ಸಮಯ ಕಳೆದರೂ, ಬಾರದ ನಿಟ್ಟಿನಲ್ಲಿ ರೈತ ಸಂಘದ ಅಧ್ಯಕ್ಷ ಲೋಕೇಶ್‌ ಸೇರಿದಂತೆ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಅಧ್ಯಕ್ಷ ಲೋಕೇಶ್‌ ಮಾತನಾಡಿ, ಭರ್ಗಾವತಿ ಕೆರೆಗೆ ಕಲುಷಿತ ನೀರು ಸೇರುತ್ತಿದ್ದು, ಎಂಎಸ್‌ಐಎಲ್‌ಗ‌ಳಲ್ಲಿ ಅಕ್ರಮ, ನಕಲಿ ಮದ್ಯ ಮತ್ತು ಪ್ರತಿ ಗ್ರಾಮಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಇದರಿಂದ ಇತ್ತೀಚೆಗೆ ಒರ್ವ ನಿಧನರಾಗಿದ್ದಾರೆ. ಮಾಗಡಿ-ತಾಳೇಕೆರೆಯವರೆಗೆ ಆವೈಜ್ಞಾನಿಕ ಕೆಶಿಫ್ ರಸ್ತೆ ನಿರ್ಮಾಣದಿಂದ ಪ್ರಾಣ ಹಾನಿ ನಡೆಯುತ್ತಿದ್ದು, ಈ ರಸ್ತೆಗಾಗಿ ಆ್ಯಂಬುಲೆನ್ಸ್‌ ನಿಗದಿಪಡಿಸುವಂತಾಗಿದೆ ಎಂದು ಆರೋಪಿಸಿದರು.

ಮಾಗಡಿ-ಕುಣಿಗಲ್‌ ಮಾರ್ಗದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವ ವೇಳೆ ಸರ್ಕಾರಿ ಬಸ್‌ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಕೃಷಿ ಇಲಾಖೆಯಲ್ಲಿ 50 ಮಂದಿಗೆ ಮಾತ್ರ ಬೆಳೆವಿಮೆ ಮಾಡಿಸಿದ್ದು, ಉಳಿದವರಿಗೆ ಮಾಡಿಸದ ಕಾರಣ ಬೆಳೆ ಹಾನಿಯಿಂದ ನಷ್ಟ ಅನುಭವಿಸುತ್ತಿದ್ದಾರೆ. ರೆಕಾರ್ಡ್‌ ರೂಂನಲ್ಲಿರುವ ಹಳೆಯ ದಾಖಲೆಗಳನ್ನು ಹಣ ನೀಡಿದವರಿಗೆ ದಾಖಲೆ ಮಾಡಿಕೊಡುತ್ತಿದ್ದಾರೆ. 3 ವರ್ಷದಿಂದ ಬೆಸ್ಕಾಂ ಒಂದು ಟೀಸಿ ಅಳವಡಿಸಿಲ್ಲ: 3 ವರ್ಷದಿಂದ ಬೆಸ್ಕಾಂ ಒಂದು ಟೀಸಿ ಅಳವಡಿಸಿಲ್ಲ. 40 ವರ್ಷದಿಂದ ಉಳುಮೆ ಮಾಡಿಕೊಂಡು ಬಂದಿ ರುವ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಇದರಿಂದ ಅನ್ನ ದಾತನ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಂದು ಆರೋಪಿಸಿದರು.

ಮಾ. 6ರಂದು ಸೋಮೇಶ್ವರ ಕಾಲೋನಿ ಬಳಿ ರಸ್ತೆ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ತಹಶೀಲ್ದಾರ್‌ ಅಧಿಕಾರಿಗಳ-ರೈತರ ಸಭೆ ಕರೆದಿದ್ದು ತಹಶೀಲ್ದಾರ್‌ ಅವರ ಆದೇಶಕ್ಕೆ ಅಧಿಕಾರಿಗಳಿಗೆ ಕಿಮ್ಮತ್ತು ಇಲ್ಲದಂತಾಗಿ ಬಹುತೇಕ ಅಧಿಕಾರಿಗಳು ಸಭೆಗೆ ಭಾಗವಹಿಸದೆ ರೈತರನ್ನು ನಿರ್ಲಕ್ಷ್ಯಸಿದ್ದು, ನಮ್ಮ ಕುಂದುಕೊರತೆ ಶೀಘ್ರವೇ ಬಗೆಹರಿಸುವುದಾಗಿ ತಹಶೀಲ್ದಾರ್‌ ಭರವಸೆ ನೀಡಿದ್ದು , ಭರವಸೆಯಾಗೆ ಉಳಿದರೆ ರಸ್ತೆ ತಡೆದು ಬೃಹತ್‌ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಸಿದರು.

ಕಾಡುಪ್ರಾಣಿಗಳ ಹಾವಳಿ: ರೈತ ಮುಖಂಡ ಬೈರೇ ಗೌಡ ಮಾತನಾಡಿ, ಕಾಡುಪ್ರಾಣಿಗಳಿಗೆ ಬಲಿಯಾಗುವ ರೈತರ ಕುರಿ, ಮೇಕೆ, ಹಸುಗಳಿಗೆ ಅರಣ್ಯ ಇಲಾಖೆ ಮಕ್ಕಿಕಾಮಕ್ಕಿ ಪರಿಹಾರ ನೀಡುತ್ತಿದೆ. ರೈತರು ಉಳುಮೆ ಮಾಡುವ ಜಮೀನಿನ ಬಳಿ ಕಂದಾಯ ಅಧಿಕಾರಿಗಳು ತೆರಳದಂತೆ ಅರಣ್ಯಾಧಿಕಾರಿ ಗೀತಾಂಜಲಿ ಆದೇಶಿಸಿದರೂ, ಕಿಮ್ಮತ್ತು ಇಲ್ಲದಂತಾಗಿದೆ. ಗ್ರಾಮ ಮತ್ತು ಶಾಲೆಗಳ ಬಳಿ ಪ್ರತ್ಯಕ್ಷದಿಂದ ರೈತರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಬೀತರಾಗಿದ್ದಾರೆ ಎಂದು ಆರೋಪಿಸಿದರು.

ರೈತರ ಎಲ್ಲಾ ಸಮಸ್ಯೆಗೆ ಪರಿಹಾರ: ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಮಾತನಾಡಿ, ಕಾನೂನು ರೀತಿ ಪರಿಶೀಲನೆ ಮಾಡಿ ಅರ್ಹ ಫ‌ಲಾನುಭವಿಗಳಿಗೆ ಉಳುಮೆ ಚೀಟಿ ನೀಡಲು ಕ್ರಮಕೈಗೊಳ್ಳಲಾಗುವುದು. ರೆಕಾರ್ಡ್‌ ರೂಂನಲ್ಲಿ ನಿರ್ವಹಣೆ ಇಲ್ಲದೆ ರೆಕಾರ್ಡ್ ಗಳು ನಾಶವಾಗಿದ್ದು, ಉಳಿದ ದಾಖಲೆಗಳನ್ನು ನಿರ್ವಹಣೆ ಮಾಡಿ ಜನಸಾಮಾನ್ಯರಿಗೆ ದಾಖಲೆ ಸಿಗುವಂತೆ ಮಾಡಲಾಗುವುದು. ಇಲಾಖೆಯಲ್ಲಿ ಅನಧಿಕೃತವಾಗಿ ಯಾರು ಕೆಲಸ ಮಾಡುತ್ತಿಲ್ಲ. ರೈತರ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ಡಾಬಾಗಳಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ಇಲ್ಲ: ಅಬಕಾರಿ ಇಲಾಖೆಯ ಎಂ.ನಾರಾಯಣ್‌ ಮಾತನಾಡಿ, ತಾಲೂಕಿನ ಯಾವುದೇ ಮದ್ಯದಂಗಡಿಗಳಲ್ಲಿ ಎಂಆರ್‌ಪಿ ದರಕ್ಕಿಂತ ಹೆಚ್ಚು ಮಾರಾಟ ಮಾಡುವಂತಿಲ್ಲ, ಡಾಬಾಗಳಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ಇಲ್ಲ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವರ ವಿರುದ್ಧ ಕೇಸ್‌ ದಾಖಲಿಸಲಾಗಿದ್ದು, ದೂರು ಬಂದ ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.

ಶಿರಸ್ತೆದಾರ್‌ ಶಿವಮೂರ್ತಿ, ಟಿಎಚ್‌ಒ ಎಂ.ಸಿ. ಚಂದ್ರಶೇಖರಯ್ಯ, ಅಕ್ಷರ ದಾಸೋಹ ಗಂಗಾಧರ್‌, ರೈತ ಸಂಘದ ಯುವ ಅಧ್ಯಕ್ಷ ರವಿಕುಮಾರ್‌, ಶಿವಲಿಂಗಯ್ಯ, ನಿಂಗಣ್ಣ, ಜಯಣ್ಣ, ಬುಡಾನ್‌ ಸಾಬ್‌, ದಿವಾಕರ, ಮುನಿರಾಜು, ರಾಜಣ್ಣ, ರಾಮಕೃಷ್ಣಯ್ಯ, ಹನುಮಂತಯ್ಯ, ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.