Ramnagar: ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಮಾರಣಾಂತಿಕ ಅಪಘಾತಗಳು


Team Udayavani, Dec 12, 2023, 12:47 PM IST

tdy-5

ರಾಮನಗರ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚಿದೆಯಾ..? ಹೌದು ಎನ್ನುತ್ತಿದೆ ಕಳೆದ ಮೂರು ವರ್ಷಗಳ ಮಾರಣಾಂತಿಕ ಅಪಘಾತಗಳ ಅಂಕಿ ಅಂಶ.

ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಮಾರ ಣಾಂತಿಕ ಅಪಘಾತಗಳ ಸಂಖ್ಯೆ 290 ಇತ್ತು. 2021- 22ನೇ ಸಾಲಿನಲ್ಲಿ ಈ ಸಂಖ್ಯೆ 263ಕ್ಕೆ ಕುಸಿದಿತ್ತಾದರೂ, 2022-23ನೇ ಸಾಲಿನಲ್ಲಿ 345ಕ್ಕೆ ಹೆಚ್ಚಳಗೊಂಡಿದೆ. ವರ್ಷದಿಂದ ವರ್ಷಕ್ಕೆ ಮಾರಣಾಂತಿಕ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಹೆಚ್ಚು ವಂತೆ ಮಾಡಿದೆ. ಇನ್ನು 2022-23ನೇ ಸಾಲಿನ ಅಪ ಘಾತಗಳ ಪ್ರಮಾಣವನ್ನು ಮಾರ್ಚ್‌ ಅಂತ್ಯಕ್ಕೆ ಗಣನೆ ಮಾಡಿದ್ದು, 2023ರ ಮಾರ್ಚ್‌ಬಳಿಕ ಸಂಭವಿಸಿದ ಅಪ ಘಾತಗಳನ್ನು ಸಾರಿಗೆ ಹಾಗೂ ಪೊಲೀಸ್‌ ಇಲಾಖೆ ಇನ್ನೂ ಲೆಕ್ಕಹಾಕಿಲ್ಲ.

ಎಕ್ಸ್‌ಪ್ರೆಸ್‌ ವೇ ಬಳಿಕ ಹೆಚ್ಚಿದ ಅಪಘಾತ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ವಾದ ಬಳಿಕ ಮಾರಣಾಂತಿಕ ಅಪಘಾತಗಳ ಪ್ರಮಾಣ ಹೆಚ್ಚಾ ಗಿದ್ದು, ಈ ಹಿಂದೆ 300ರ ಒಳಗಿದ್ದ ಮಾರ ಣಾಂತಿಕ ಅಪಘಾತಗಳ ಸಂಖ್ಯೆ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ ಬಳಿಕ 300ರ ಗಡಿದಾಟಿದೆ. ಎಕ್ಸ್‌ ಪ್ರಸ್‌ ವೇನಲ್ಲಿ ಸಾರ್ವ ಜನಿಕ ವಾಹನಗಳ ಸಂಚಾರ ಅಧಿಕೃತವಾಗಿ ಆಗಸ್ಟ್‌ ತಿಂಗಳಿಂದ ಪ್ರಾರಂಭ ಗೊಂಡಿದ್ದು, ಆಗಸ್ಟ್‌- 2022ರಿಂದ ಮಾರ್ಚ್‌-2023ರ ವರೆಗೆ ಎಕ್ಸ್‌ಪ್ರೆಸ್‌ ವೇನಲ್ಲಿ 98 ಮಾರಣಾಂತಿಕ ಅಪಘಾತಗಳು ಸಂಭ ವಿಸಿದೆ. ಏಪ್ರಿಲ್‌ನಿಂದ ನವೆಂಬರ್‌ ಅಂತ್ಯದ ವರೆಗೆ 50ಕ್ಕೂ ಹೆಚ್ಚು ಅಪಘಾತಗಳು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದ್ದು, ಉಳಿದಂತೆ  ಜಿಲ್ಲೆಯಲ್ಲಿ 140ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ.

ಎಚ್ಚೆತ್ತುಕೊಳ್ಳ ಬೇಕಿದೆ ಪೊಲೀಸ್‌ ಇಲಾಖೆ: ರಾಮನಗರ ಜಿಲ್ಲೆಯಲ್ಲಿ ಮಾರಣಾಂತಿಕ ಅಪಘಾತ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕಿದ್ದು, ಸಂಚಾರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕಾರ್ಯೋ ನ್ಮುಖಗೊಳ್ಳಬೇಕಿದೆ. ಅಪಘಾತ ಹೆಚ್ಚಾದ ತಕ್ಷಣ ರಸ್ತೆಯಲ್ಲಿ ನಿಂತು ದಂಡ ಹಾಕುವುದನ್ನು ಬಿಟ್ಟು ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಜೊತೆಗೆ ಸಂಚಾರ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕಿದೆ.

ರಾಜ್ಯದಲ್ಲೂ ಹೆಚ್ಚುತ್ತಿದೆ ಮಾರಣಾಂತಿಕ ಅಪಘಾತಗಳು:

ರಾಮನಗರ ಜಿಲ್ಲೆ ಮಾತ್ರವಲ್ಲ ರಾಜ್ಯದಲ್ಲಿ ಸಹ ಮಾರಣಾಂತಿಕ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವುದು ಸಾರಿಗೆ ಇಲಾಖೆಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 2020-21ನೇ ಸಾಲಿನಲ್ಲಿ 9082, 2022-23ನೇ ಸಾಲಿನಲ್ಲಿ 9458, 2022-23ನೇ ಸಾಲಿನಲ್ಲಿ 10633 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿವೆ. ಇನ್ನು ಅಪಘಾತಕ್ಕೆ ಕಾರಣವಾದ ಅಡ್ಡಾದಿಟ್ಟಿ ಚಾಲನೆ ಮಾಡಿ ಪ್ರಯಾಣಿಕರಿಗೆ ಉಪದ್ರವ ನೀಡುತ್ತಿರುವ ಪ್ರಯಾಣಿಕರ ಚಾಲನಾ ಪರವಾನಗಿ ಯನ್ನು ರದ್ದುಪಡಿಸುವ ಕಾರ್ಯಕ್ಕೂ ಸಾರಿಗೆ ಇಲಾಖೆ ಮುಂದಾಗಿದ್ದು 2020-21ರಲ್ಲಿ 1417, 2021-22ರಲ್ಲಿ 2350, 2022-23ರಲ್ಲಿ 2198 ಮಂದಿಯ ಚಾಲನಾ ಪರವಾನಗಿಯನ್ನು ರದ್ದು ಪಡಿಸಲಾಗಿದೆ.

ಗ್ರಾಮೀಣ ಬೈಕ್‌ ಅಪಘಾತ ಹೆಚ್ಚು :  ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಹೊರತು ಪಡಿಸಿದರೆ ಜಿಲ್ಲೆಯ ಉಳಿದ ಕಡೆ ಸಂಭವಿಸುವ ರಸ್ತೆ ಅವಘಡಗಳಲ್ಲಿ ಬೈಕ್‌ಗಳಿಂದ ಸಂಭವಿಸುವ ಅಪಘಾತಗಳ ಪ್ರಮಾಣ ಹೆಚ್ಚಾ ಗಿದೆ. ಬೈಕ್‌ ಬೈಕ್‌ಗಳ ನಡುವೆ ಡಿಕ್ಕಿ, ಬೈಕ್‌ಗೆ ಲಘು ಹಾಗೂ ದೊಡ್ಡ ವಾಹನಗಳು ಡಿಕ್ಕಿ ಹೊಡೆಯುವುದರಿಂದ ಸಂಭವಿಸುವ ಅಪಘಾತಗಳು ನೂರಾರು ಪ್ರಾಣಗಳನ್ನು ಬಲಿಪಡೆದಿವೆ. ಬೈಕ್‌ ಸವಾರರು ಎಚ್ಚೆತ್ತುಕೊಂಡು ಹೆಲ್ಮೆಟ್‌ ದರಿಸಿ ಪ್ರಯಾಣಿಸುವುದು ಸೂಕ್ತ ಎಂಬುದು ಪೊಲೀಸ್‌ ಅಧಿಕಾರಿಗಳ ವಿವರಣೆಯಾಗಿದೆ.

– ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.