ವೀಳ್ಯದೆಲೆಗೆ ಕೀಟಬಾಧೆಯಿಂದ ರೈತರು ಕಂಗಾಲು


Team Udayavani, Jul 28, 2019, 2:48 PM IST

rn-tdy-1

ಕೀಟ ಬಾಧೆಯಿಂದ ವೀಳ್ಯದೆಲೆ ಬಳ್ಳಿಯನ್ನು ಬುಡ ಸಮೇತ ಕಿತ್ತು ಹಾಕುತ್ತಿರುವ ರೈತರು.

ಕುದೂರು: ವರಮಹಾಲಕ್ಷ್ಮೀ ಹಬ್ಬ ಹತ್ತಿರ ಬರುತ್ತಿದ್ದಂತೆ ಉತ್ತಮ ವ್ಯಾಪಾರ ಮಾಡುವ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ವೀಳ್ಯದೆಲೆಗೆ ಬಿಳಿಹುಳು ಕಾಟ ಹೆಚ್ಚಾಗಿದೆ. ಇದರಿಂದ ವೀಳ್ಯದೆಲೆಗಳು ಉದುರಿ ಹೋಗುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ.

ಕೀಟ ಬಾಧೆಯಿಂದ ರೈತರಿಗೆ ನಿರಾಸೆ: ಕುದೂರು ಹೋಬಳಿಯ ಕಾಗಿಮಡು, ರಂಗಯ್ಯನಪಾಳ್ಯದ ಸುತ್ತಮುತ್ತ ವೀಳ್ಯದೆಲೆ ತೋಟಗಳಿಗೆ ರೋಗ ಅವರಿಸಿಕೊಂಡ ಕಾರಣ ಬಳ್ಳಿಯ ಕಾಂಡಗಳು ಕೊಳೆಯುತ್ತಿವೆ. ಬಿಳಿ ಹುಳುಗಳು ಎಲೆಯೊಳಗೆ ಗೂಡು ಕಟ್ಟಿ ಹಂತ ಹಂತವಾಗಿ ಕಾಂಡವನ್ನು ತಿನ್ನುತ್ತಿರುವುದರಿಂದ ವೀಳ್ಯದೆಲೆ ಉದುರುವುದರ ಜೊತೆಗೆ ಬಳ್ಳಿಗಳು ಒಣಗುತ್ತಿರುವುದರಿಂದ ರೈತರು ಚಿಂತಜನಕರಾಗಿದ್ದಾರೆ.

ಪ್ರತಿ ನಿತ್ಯ ಒಂದು ವೀಳ್ಯದೆಲೆ ಹಂಬಿನಿಂದ ಸುಮಾರು 300ರಿಂದ 400 ರೂ. ಲಾಭಗಳಿಸುತ್ತಿದ್ದ ರೈತರು, ವರಮಹಾಲಕ್ಷ್ಮೀ ಹಬ್ಬದಲ್ಲಿ ಉತ್ತಮ ವ್ಯಾಪಾರ ಮತ್ತು ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ, ಕೀಟ ಬಾಧೆಯಿಂದ ರೈತರಿಗೆ ನಿರಾಸೆ ಮೂಡಿಸಿದೆ.

ಮೊದಲ ಬಾರಿಗೆ ಕೀಟ ಬಾಧೆ: 20 ವರ್ಷಕ್ಕೆ ಇದೇ ಮೊದಲ ಬಾರಿಗೆ ವೀಳ್ಯದೆಲೆಗೆ ಕೀಟ ಬಾಧೆ ಕಾಣಿಸಿದೆ. ವೀಳ್ಯದೆಲೆ ಬರುತ್ತಿಲ್ಲ, ಬಳ್ಳಿ ಚಿಗುರುತ್ತಿಲ್ಲ ಹಾಗೂ ಬಳ್ಳಿ ಹಬ್ಬುತ್ತಲೂ ಇಲ್ಲ. ಇದರ ನಿಯಂತ್ರಣ ಹೇಗೆ ಎಂದು ತೋಚದೆ ರೈತರು ವೀಳ್ಯದೆಲೆ ಬಳ್ಳಿಗಳನ್ನು ಬುಡಸಮೇತ ಕಿತ್ತು ಹಾಕುತ್ತಿದ್ದಾರೆ.

ವೀಳ್ಯದೆಲೆಗೆ ಹೆಚ್ಚಿನ ಬೇಡಿಕೆ: ರಂಗಯ್ಯನಪಾಳ್ಯದ ರೈತರು ಬೆಳೆಯುವ ವೀಳ್ಯದೆಲೆಗೆ ಹೆಚ್ಚಿನ ಬೇಡಿಕೆ ಇದೆ. ಬೆಂಗಳೂರು, ತುಮಕೂರು, ಮೈಸೂರು, ಧರ್ಮಪುರಿ ಭಾಗದಿಂದ ವೀಳೆದಲೆ ಖರೀದಿಸಲು ಇಲ್ಲಿಗೆ ಬರುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬಕ್ಕೆ ವ್ಯಾಪಾರ ಕುದುರಿಸಿಕೊಂಡು ಹೋಗೋಣ ಎಂದು ಬರುತ್ತಿರುವ ವ್ಯಾಪಾರಿಗಳಿಗೆ ವೀಳ್ಯದೆಲೆ ಪರಿಸ್ಥಿತಿ ನೋಡಿ, ವಾಪಾಸ್ಸಾಗುತ್ತಿರುವುದರಿಂದ ರೈತರಿಗೆ ಚಿಂತಾಜನಕವಾಗಿದೆ.

ಕೀಟ ಬಾಧೆ ನಿಯಂತ್ರಣಕ್ಕೆ ಹರಸಾಹಸ: ವೀಳ್ಯದೆಲೆ ತಗುಲಿರುವ ಕೀಟ ಬಾಧೆ ನಿಯಂತ್ರಣಕ್ಕೆ ರೈತರು ಹರಸಾಹಸ ಪಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಂಗಯ್ಯನಪಾಳ್ಯದ ಸುತ್ತಮುತ್ತ ಇರುವ ತೋಟಗಳಿಗೆ ಭೇಟಿ ನೀಡಿ, ಹುಳುಗಳ ನಿಯಂತ್ರಣಕ್ಕೆ ಸಲಹೆ ನೀಡುವ ಮೂಲಕ ರೈತರ ಕಷ್ಟವನ್ನು ದೂರ ಮಾಡಬೇಕಿದೆ ಎಂದು ರಂಗಯ್ಯನಪಾಳ್ಯದ ರೈತ ವಿಜಯಕುಮಾರ್‌ ತಿಳಿಸಿದ್ದಾರೆ.

 

● ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.