ಜಾಗ ಮಂಜೂರು: ಗ್ರಾಮಸ್ಥರಿಂದ ಪ್ರತಿಭಟನೆ


Team Udayavani, Feb 19, 2020, 4:29 PM IST

rn-tdy-1

ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಬರಡನಹಳ್ಳಿ ಸರ್ವೆ ನಂ. 40ರ 5 ಎಕರೆ ಸರ್ಕಾರಿ ಗೋಮಾಳವನ್ನು ಸಾಗುವಳಿ ಮಾಡದ ಸತ್ತವರ ಹೆಸರಿಗೆ ತಹಶೀಲ್ದಾರ್‌ ಮಂಜೂರು ಮಾಡಿದ್ದಾರೆ. ಎಂದು ಆರೋಪಿಸಿ ಬರಡನಹಳ್ಳಿ ಚಾಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತಹಶೀಲ್ದಾರ್‌ ವಿರುದ್ಧ ಪ್ರತಿಭಟನೆ ನಡೆಸಿ ಆದೇಶವನ್ನು ರದ್ದು ಪಡಿಸುವಂತೆ  ಮನವಿ ಸಲ್ಲಿಸಿದರು.

ಪ್ರತತಿಭಟನೆಯಲ್ಲಿ ಚಾಕನಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮಹೇಶ್‌ ಮಾತನಾಡಿ, ಬರಡನಹಳ್ಳಿ ಸರ್ವೆ ನಂ. 40ರ 133 ಎಕರೆ ಸರ್ಕಾರಿ ಗೋಮಾಳದಲ್ಲಿ ಸಾಗುವಳಿ ಮಾಡದೆ ಮರಣ ಹೊಂದಿರುವ ಚಾಕನಹಳ್ಳಿ ಬೈರೇಗೌಡ ಎಂಬುವವರ ಹೆಸರಿಗೆ ತಹಶೀಲ್ದಾರ್‌ ಅಕ್ರಮವಾಗಿ ಐದು ಎಕರೆ ಜಾಗವನ್ನು ಮಂಜೂರು ಮಾಡಿದ್ದಾರೆ. ಸದರಿ ಈ ಗೋಮಾಳವನ್ನು ಬರಡನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದ ದನಕರುಗಳ ಮೇವಿಗೆ ಮೀಸಲಿಡಲಾಗಿತ್ತು. ಅಲ್ಲದೆ ಸುಮಾರು 50-60 ವರ್ಷಗಳಿಂದಲೂ ಗೋಮಾಳದ ಜಾಗವನ್ನು ಯಾವುದೇ ವ್ಯಕ್ತಿಗೆ ಮಂಜೂರು ಮಾಡದೆ, ದನಕರುಗಳ ಮೇವಿಗೆ ಮೀಸಲಿಡಬೇಕು ಎಂದು ಹೋರಾಟ ಮಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ಆದೇಶ ರದ್ದುಪಡಿಸಿ: ಗೋಮಾಳ ಜಾಗದಲ್ಲಿ 30 ಎಕರೆ ಜಾಗವನ್ನು ನವೋದಯ ಶಾಲೆಗೆ ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಈ ಜಮೀನನ್ನು ಸರ್ಕಾರದ ಯೋಜನೆ ಹಾಗೂ ಸಾರ್ವಜನಿಕರ ಅನುಕೂಲ ಅಥವಾ ದನಕರುಗಳ ಮೇವಿಗೆ ಬಳಸಿಕೊಳ್ಳಲು ಗ್ರಾಮಸ್ಥರಿಂದ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಸಾಗುವಳಿ ಮಾಡದೆ 30 ವರ್ಷಗಳ ಹಿಂದೆಯೇ ಮರಣ ಹೊಂದಿರುವ ವ್ಯಕ್ತಿಯ ಹೆಸರಿಗೆ ಮಂಜೂರು ಮಾಡಿರುವುದು ಸರಿಯಲ್ಲ ಕೂಡಲೇ ಆದೇಶವನ್ನು ರದ್ದುಪಡಿಸಿ ಸರ್ಕಾರಿ ಗೋಮಾಳ ವನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಬರಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್‌.ಗಿರೀಶ್‌ ಮಾತನಾಡಿ, ಹಿಂದೆ ಇದ್ದ ತಹಶೀಲ್ದಾರ್‌ ಆನಂದಯ್ಯ ಅವರ ಅವಧಿಯಲ್ಲಿ ಸರ್ಕಾರಿ ಗೋಮಾಳದ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿ ಜಮೀನು ಮಂಜೂರು ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸದೆ ಸ್ಥಳ ಪರಿಶೀಲನೆ ನಡೆಸಿ ಸಾಗುವಳಿ ಮಾಡದೇ ಇರುವುದನ್ನು ದೃಢಪಡಿಸಿಕೊಂಡು ಅರ್ಜಿಗಳನ್ನು ತಿರಸ್ಕರಿಸಲಾಗಿತ್ತು. ಆದರೆ ಇತ್ತಿಚೆಗೆ ಬಂದ ಅಧಿಕಾರಿಗಳು ಸತ್ತವರ ಹೆಸರಿನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಿ ಸ್ಥಳ ಪರಿಶೀಲಿಸದೆ ಗ್ರಾಮ ಲೆಕ್ಕಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮಸ್ಥರ ಹೇಳಿಕೆ ಪಡೆಯದೆ ಐದು ಎಕರೆ ಸರ್ಕಾರಿ ಗೋಮಾಳವನ್ನು ಮಂಜೂರು ಮಾಡಿರುವುದು ಕಾನೂನು ಬಾಹಿರವಾಗಿದ್ದು ಕೂಡಲೇ ಬೈರೇಗೌಡ ಎಂಬುವವರ ಹೆಸರಿಗೆ ಮಂಜೂರು ಮಾಡಿರುವ ಸರ್ಕಾರಿ ಗೋಮಾಳವನ್ನು ರದ್ದುಗೊಳಿಸಬೇಕು. ಅಥವಾ

ಜಿಲ್ಲಾಧಿಕಾರಿಗಳು ಸದರಿ ವ್ಯಕ್ತಿ ಸರ್ವೆ ನಂ. 40ರಲ್ಲಿ  ಸಾಗುವಳಿ ಮಾಡುತ್ತಿರುವ ಬಗ್ಗೆ ಮಹಜರು ಮಾಡಿ ತೀರ್ಮಾನಿಸಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಕಾನೂನು ರೀತಿಯ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್‌ ವರ್ಷ ಒಡೆಯರ್‌ ಮಾತನಾಡಿ, ಹಿಂದೆ ಇದ್ದ ತಹಶೀಲ್ದಾರ್‌ ಆನಂದಯ್ಯ ಎರಡು ತಿಂಗಳ ಒಳಗಾಗಿ ಜಮೀನು ಮಂಜೂರು ಮಾಡಿಕೊಡುವುದಾಗಿ ಹೈಕೋರ್ಟ್‌ನಲ್ಲಿ ಅಪಿಡೆವಿಟ್‌ ಸಲ್ಲಿಸಿದ್ದರು. ಹಾಗಾಗಿ ಹೈಕೋರ್ಟ್‌ ಆದೇಶದಂತೆ ಜಮೀನು ಮಂಜೂರು ಮಾಡಿದ್ದೇನೆ. ಹೈಕೋರ್ಟ್‌ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗಿತ್ತಿತ್ತು. ಸ್ಥಳ ಪರಿಶೀಲನೆ ವೇಳೆ ಜಮೀನಿನಲ್ಲಿ ಸಾಗುವಳಿ ಮಾಡಿತ್ತಿರುವ ದಾಖಾಲಾತಿ ನೀಡಿದ್ದಾರೆ ಎಂದು ಹೇಳಿದರು. ಚಾಕನಹಳ್ಳಿ ಗ್ರಾಪಂ ಸದಸ್ಯ ಎನ್‌.ರವಿ, ಮಾಜಿ ಅಧ್ಯಕ್ಷ ಚಂದ್ರಶೇಖರ್‌ ಸೇರಿದಂತೆ ಚಾಕನಹಳ್ಳಿ ಹಾಗೂ ಬರಡನಹಳ್ಳಿ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.