ಸಾಯಿಬಾಬಾರ 3ನೇ ಅವತಾರ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ: ಎಫ್ಐಆರ್‌  ದಾಖಲು


Team Udayavani, Sep 4, 2022, 3:28 PM IST

tdy-8

ಚನ್ನಪಟ್ಟಣ: ಸಾಯಿಬಾಬಾ ಅವತಾರ ಎಂದು ಜನರನ್ನು ನಂಬಿಸಿ, ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ನಗರದ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಕೊಲ್ಲಾಪುರದ ಸಚಿನ್‌ ಆಕಾರಾಂ ಸರ್‌ಗರ್‌ ಎಂಬ ವ್ಯಕ್ತಿ ನಾನು ಸಾಯಿಬಾಬಾರ 3ನೇ ಅವತಾರ ಎಂದು ನಂಬಿಸಿ ಕೆಲ ಭಕ್ತರಿಂದ ಲಕ್ಷಾಂತರ ರೂ. ವಂಚಿಸಿದ್ದ ಎಂದು ಹೇಳಲಾಗಿದ್ದು, ವಂಚನೆಗೊಳಗಾದ ಭಕ್ತೆ ಸಿಂಧೂ ಎಂಬುವರು ದೂರು ದಾಖಲಿಸಿದ್ದರು.

ಪ್ರೇಮ ಸಾಯಿ ಎಂದು ನಂಬಿಸಿದ್ದ ಪುಟ್ಟಪರ್ತಿ ಸಾಯಿಬಾಬಾ ಮರಣಾ ನಂತರ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಪ್ರೇಮಸಾಯಿಬಾಬಾ ಆಗಿ ಅವತರಿಸುತ್ತಾರೆ ಎಂಬ ಉಲ್ಲೇಖವನ್ನು ಬಂಡವಾಳ ಮಾಡಿಕೊಂಡ ಈತ, ಮಳೂರು ಸಮೀಪ ಕಾಣಿಸಿಕೊಂಡು ನಾನೇ ಪ್ರೇಮ್‌ ಸಾಯಿಬಾಬಾ ಎಂದು ಭಕ್ತರನ್ನು ನಂಬಿಸಿದ್ದ.

ಮಂಡಿಪೇಟೆ ಯಶೋಧಮ್ಮ ಮನೆಯಲ್ಲಿ ಭಜನೆ ಕಾರ್ಯಕ್ರಮ ನಡೆಸುತ್ತಿದ್ದನು. ಸಿಂಧೂ ಭಜನೆಯಲ್ಲಿ ಪಾಲ್ಗೊಂಡಿದ್ದರು. ಗುರು ವಾರ ಭಜನೆಗೆ ಹೆಚ್ಚು ಜನ ಬರುವ ಕಾರಣ ನಿಮ್ಮ ತೋಟದ ಮನೆಯಲ್ಲಿ ಅವಕಾಶ ನೀಡಿ ಎಂಬ ಮನವಿಗೆ ಸಿಂಧೂ ಪತಿಯೊಂದಿಗೆ ಮಾತನಾಡಿ ಅನು ಮತಿ ನೀಡಿದ್ದರು. ಬಳಿಕ ಈ ಜಾಗವನ್ನು ಪ್ರೇಮ್‌ ಸಾಯಿ ಟ್ರಸ್ಟ್‌ಗೆ ಬರೆಯುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಹಣ ವಸೂಲಿ: ಸಿಂಧೂರಿಂದ 1.50 ಲಕ್ಷ ರೂ. ವೆಂಕಟೇಶ ಎಂಬುವ ರಿಂದ 1 ಲಕ್ಷ ರಾಜೇಶ್‌ ಎಂಬುವರಿಂದ 2 ಲಕ್ಷ ರೂ. ಚನ್ನೇಗೌಡ ಎಂಬುವರಿಂದ 1 ಲಕ್ಷ ಹಾಗೂ ಇನ್ನು ಹಲವರಿಂದ ಹಣ ಪಡೆದಿರುವುದು ಬೆಳಕಿಗೆ ಬಂದಿದೆ.

ಕೊಲ್ಲಾಪುರ ಭಕ್ತರಿಂದ ಮಾಹಿತಿ: ಗುರುಪೌರ್ಣಮಿ ಯಂದು ಕೊಲ್ಲಾಪುರ ಮೂಲದ ಕೆಲ ಭಕ್ತರು ಆಗಮಿಸಿದ್ದರು. ಅವರಿಂದ ಈತನ ವಿವರ ತಿಳಿದು ಕೊಲ್ಲಾಪುರಕ್ಕೆ ತೆರಳಿದ್ದ ಚನ್ನೇಗೌಡ, ಪ್ರೇಮ್‌ ಸಾಯಿಬಾಬ ಕುರಿತ ಎಲ್ಲ ಮಾಹಿತಿ ಸಂಗ್ರಹಿಸಿದ್ದಾರೆ. ಈತ ಮದುವೆಯಾಗಿ ಮಕ್ಕಳಿದ್ದಾರೆ. ಈತ ಡೋಂಗಿ ಬಾಬಾ ಎಂಬುದು ಗೊತ್ತಾಗಿದೆ.

ಈ ನಿಟ್ಟಿನಲ್ಲಿ ಡೋಂಗಿ ಬಾಬಾ ಹಾಗೂ ಪ್ರೇಮ ಸ್ವರೂಪಿಣಿ ಸಾಯಿ ಟ್ರಸ್ಟ್‌ ಟ್ರಸ್ಟಿಗಳಾದ ವಿನಾಕ್‌ ರಾಜ್‌ ಅಲಿಯಾಸ್‌ ಸಾಯಿರಾಜ್‌, ಜಯಂತ್‌, ಯಶೋಧಮ್ಮ, ಉಮಾಶಂಕರ್‌, ಪ್ರಶಾಂತ್‌ ವಿರುದ್ಧ ಮಂಗಳವಾರಪೇಟೆ ಮರಳುಹೊಲದ ನಿವಾಸಿ ಸಿಂಧೂ ದೂರು ದಾಖಲಿಸಿದ್ದು, ನಕಲಿ ಬಾಬಾ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.