ಹೂಗಳಿಂದ ಅರಳಿದ ಕೆಂಗಲ್‌ ಆಂಜನೇಯ ದೇಗುಲ


Team Udayavani, Jan 26, 2019, 10:23 AM IST

flower.jpg

ರಾಮನಗರ: ಜ.26ರಿಂದ ಮೂರು ದಿನಗಳ ಕಾಲ ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಫ‌ಲಪುಷ್ಪ ಪ್ರದರ್ಶನ ಮತ್ತು ಸುಗ್ಗಿ ಉತ್ಸವವನ್ನು ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಸೇವಂತಿಗೆ ಮತ್ತು ಗುಲಾಬಿ ಹೂಗಳಿಂದ ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯ ಅರಳಿದೆ.

ಗಣರಾಜ್ಯೋತ್ಸವದ ಅಂಗವಾಗಿ ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘಗಳು ಸಂಯುಕ್ತವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನವರಿ 26ರಿಂದ 28ರವರೆಗೆ ಪ್ರದರ್ಶನ ನಡೆಯಲಿದೆ.

20 ಅಡಿ ಅಗಲ, 20 ಅಡಿ ಉದ್ದ ಮತ್ತು 23 ಅಡಿ ಎತ್ತರದ ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದ ಪ್ರತಿಕೃತಿ ಪ್ರದರ್ಶನದ ಪ್ರಮುಖ ಆಕರ್ಷಣೆ. ಕೆಂಗಲ್‌ ಆಂಜನೇಯ ಸ್ವಾಮಿ ದೇಗುಲ ಪುಷ್ಪಗಳಿಂದ ಅರಳಿದರೆ, ಆಂಜನೇಯ ಸ್ವಾಮಿ ಸಿರಿಧಾನ್ಯಗಳಿಂದ ರಚನೆಯಾಗಲಿದೆ.

ಹೂ, ತರಕಾರಿಗಳಿಂದ ಕಾಲಕೃತಿ: ಹೂ ಮತ್ತು ತರಕಾರಿಗಳಿಂದ ತಯಾರಾದ ತಬಲ, ಗಿಟಾರ್‌ ಸೇರಿದಂತೆ ವಿವಿಧ ಸಂಗೀತ ಪರಿಕರಗಳ ಕಲಾಕೃತಿಗಳು, ಹಿಪ್ಪುನೇರಳೆ ಸೊಪ್ಪಿನ ಮೇಲೆ ರೇಷ್ಮೆ ಹುಳು ಮೇಯುತ್ತಿರುವ ದೃಶ್ಯ ಹೀಗೆ 20ಕ್ಕೂ ಹೆಚ್ಚು ಕಲಾಕೃತಿಗಳು ಹೂ ಮತ್ತು ತರಕಾರಿಗಳಿಂದ ಅರಳಲಿದ್ದು, ಇವು ಸಹ ಪ್ರದರ್ಶನದ ಆಕರ್ಷಣೆಯಾಗಲಿದೆ.

ಆಂಜನೇಯ ಸ್ವಾಮಿ ಮತ್ತು ಡಾ.ಎಂ.ಎಚ್.ಮರಿಗೌಡರ ಪ್ರತಿಕೃತಿಗಳು ಸಿರಿಧಾನ್ಯಗಳಿಗೆ ರಚನೆಯಾಗಲಿವೆ. ಬಾಳೆ ದಿಂಡಿನಿಂದ ಅಯ್ಯಪ್ಪ ಸ್ವಾಮಿ ಪಡಿ (ಮೆಟ್ಟಿಲು) ಮೂಡಿಬರಲಿದೆ. ವಿವಿಧ ವಿನ್ಯಾಸಗಳಿಗೆ ತರಕಾರಿ ಮತ್ತು ಹೂ ಜೋಡಣೆ ಪ್ರತಿಕೃತಿಗಳ ಇಲ್ಲಿ ಕಾಣಸಿಗಲಿವೆ. ಪುಷ್ಪ ರಂಗೋಲಿ, ವಿವಿಧ ತರಕಾರಿಗಳ ಕೆತ್ತನೆಯ ಮೂಲಕ ಚನ್ನಪಟ್ಟಣದ ಗೊಂಬೆಗಳು ನೋಡುಗರನ್ನು ಆಕರ್ಷಿಸಲಿದೆ. ಫ‌ಲಪುಷ್ಪ ಪ್ರದರ್ಶನದ ಮಧುಮೇಳ, ಸಿರಿಧಾನ್ಯ ಮೇಳದ ಜೊತೆಗೆ ಸುಗ್ಗಿ ಹಬ್ಬವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಪ್ರದರ್ಶನ ಮಾಹಿತಿಯ ಕಣಜ: ಫ‌ಲಪುಷ್ಪ ಪ್ರದರ್ಶನ ಕೇವಲ ಆಕರ್ಷಣೆಯ ಕೇಂದ್ರವಾಗದೇ ಮಾಹಿತಿಯ ಕಣಜವೂ ಆಗಲಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನಾ ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಿ, ರೈತರಿಗೆ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ದೊರಯುವ ಯೋಜನೆಗಳ ಬಗ್ಗೆ ಮತ್ತು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ತಾಂತ್ರಿಕ ಮಾಹಿತಿಯನ್ನು ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.

ವಿವಿಧ ಮಾದರಿ ಪ್ರಾತ್ಯಕ್ಷಿಕೆ: ಅಣಬೆ ಕೃಷಿ ಹಾಗೂ ಜೇನು ಸಾಕಾಣಿಕೆ ಪ್ರಾತ್ಯಕ್ಷಿಕೆ, ತೋಟಗಾರಿಕೆ ಕಸಿಗಿಡಗಳ ಮಾರಾಟ ಮಾಡಲು ಸಸ್ಯ ಸಂತೆ, ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಭಾರತೀಯ ತೋಟಗಾರಿಕೆ ಸಂಶೋಧನ ಸಂಸ್ಥೆ ಹಾಗೂ ಕೃಷಿ ವಿವಿ ಮಳಿಗೆ ಸ್ಥಾಪಿಸಿ ರೈತರಿಗೆ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಾಂತ್ರಿಕ ಮಾಹಿತಿ, ತೋಟಗಾರಿಕೆಯಲ್ಲಿ ಬಳಕೆಯಲ್ಲಿರುವ ವಿವಿಧ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ದ್ರಾಕ್ಷಾರಸ ಮಂಡಳಿಯಿಂದ ವಿವಿಧ ವೈನ್‌ ಮಾದರಿಯ ಪ್ರದರ್ಶನ, ಮಾವು ಅಭಿವೃದ್ಧಿ ಮಂಡಳಿಯಿಂದ ಮಾಹಿತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಮೂರು ದಿನಗಳ ಕಾಲ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭರತನಾಟ್ಯ ಕಲಾವಿದರಾದ ಶುಭ ಧನಂಜಯ ಮತ್ತು ತಂಡ ಮತ್ತು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಗಣರಾಜ್ಯೋತ್ಸವದ ಅಂಗವಾಗಿ ಜ.26ರಿಂದ ಮೂರು ದಿನಗಳ ಕಾಲ ನಡೆಯುವ ಫ‌ಲಪುಷ್ಪ ಪ್ರದರ್ಶನ ಮತ್ತು ಸುಗ್ಗಿ ಉತ್ಸವವನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಜಿಪಂ ಸಿಇಒ ಮುಲ್ಲೆ„ ಮುಹಿಲನ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯ್ತಿ ಭವನದ ಮಿನಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜ.26ರ ಬೆಳಗ್ಗೆ 11 ಗಂಟೆಗೆ ಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಾಕುಮಾರ್‌ ಮತ್ತು ತೋಟಗಾರಿಕೆ ಸಚಿವ ಎಂ.ಸಿ.ಮನಗುಳಿ ತೋಟಗಾರಿಕೆ ತಾಂತ್ರಿಕ ಕ್ಯಾಲೆಂಡರ್‌ ಬಿಡುಗಡೆ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮನಗರ ಕ್ಷೇತ್ರದ ಶಾಸಕಿ ಅನಿತಾ ವಹಿಸಲಿದ್ದಾರೆ. ಸುಗ್ಗಿ ಉತ್ಸವವನ್ನು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಎನ್‌.ನಾಗರಾಜು ಉದ್ಘಾಟಿಸಲಿದ್ದಾರೆ. ಇಲಾಖೆ ಮಳಿಗೆಗಳನ್ನು ಸಂಸದ ಡಿ.ಕೆ.ಸುರೇಶ್‌ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ಎಂಎಲ್‌ಸಿ, ಜಿಪಂ, ತಾಪಂ ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಜಯ್‌ ಸೇs್, ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ತೋಟಗಾರಿಕೆ ಸಂಘದ ನಿರ್ದೇಶಕರು ಭಾಗವಹಿಸಲಿದ್ದಾರೆ. ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಬದಲಾವಣೆಯ ಬಗ್ಗೆ ಆಸಕ್ತಿವಹಿಸಿ, ಸಾಧನೆ ತೋರಿದ ಪ್ರಗತಿ ಪರ ರೈತರಿಂದ ಮಾಹಿತಿ ಮತ್ತು ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಉಪನಿರ್ದೇಶಕ ಜೆ.ಗುಣವಂತ, ಜಿಪಂ ಉಪಕಾರ್ಯದರ್ಶಿ ಉಮೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.