ನಾಳೆ ಜನಪದ ಉತ್ಸವ ಕಾರ್ಯಕ್ರಮ
Team Udayavani, Oct 26, 2019, 4:00 PM IST
ಕನಕಪುರ: ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ನಿಂದ ಅ.27ರ ಭಾನುವಾರ ಜನಪದ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜನಪದ ಎಂಬುದು ಗ್ರಾಮೀಣ ಭಾಗದ ಜನರ ಬದುಕನ್ನು ಪ್ರತಿನಿಧಿಸುವ ಕಲೆ. ಜಾನಪದವನ್ನು ಪ್ರೋತ್ಸಾಹಿಸುವ ಮತ್ತು ಗ್ರಾಮೀಣ ಜನರಲ್ಲಿ ಅಡಗಿರುವ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯಲಿದೆ.
27ರ ಬೆಳಗ್ಗೆ 11 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಕಲಾ ಪ್ರಕಾರಗಳ ಮೆರವಣಿಗೆಯನ್ನು ರಂಗನಿರ್ದೇಶಕ ಎಂ.ಸಿ. ನಾಗರಾಜ ಮತ್ತು ಜಾನಪದ ಅಕಾಡೆಮಿ ಸದಸ್ಯ ಕಾಳಯ್ಯ ನೆರವೇರಿಸಲಿದ್ದಾರೆ. ಅ.27ರ ಸಂಜೆ 4.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಾನಪದ ವಿದ್ವಾಂಸ ಬಾನಂದೂರು ಕೆಂಪಯ್ಯ ಮತ್ತು ಹೃದಯ ರೋಗ ತಜ್ಞ ಡಾ.ಬೊಮ್ಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ನಲ್ಲಹಳ್ಳಿ ಮುನಿರಾಜು, ಮೆಳೆಕೋಟೆ ಕೃಷ್ಣಪ್ಪ, ಚಿಕ್ಕನಹಳ್ಳಿ ಬಸವರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?